ರಾಯಚೂರು | ಕೆರೆಯಲ್ಲಿ ಪತ್ತೆಯಾದ ಮೊಸಳೆಯನ್ನು ಸೆರೆಹಿಡಿದು ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

Date:

ರಾಯಚೂರು ತಾಲ್ಲೂಕಿನ ಮರ್ಚೇಡ್ ಗ್ರಾಮದ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು,ಕೂಡಲೇ ಗ್ರಾಮಸ್ಥರು ಮೀನುಗಾರರ ಸಹಾಯದಿಂದ ಮೊಸಳೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

ಮೊಸಳೆ ಕಂಡ ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮೊಸಳೆ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮೀನುಗಾರರ ಸಹಾಯದಿಂದ ಕೆರೆಗೆ ಹಾಕಿದ್ದ ಬಲೆಗೆ ಮೊಸಳೆ ಸೆರೆಯಾಗಿದೆ ಎನ್ನಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದ ಮೊಸಳೆಯನ್ನು ಸುರಕ್ಷಿತವಾಗಿ ಕೃಷ್ಣಾನದಿಗೆ ಬಿಟ್ಟಿದ್ದಾರೆ. ಕಳೆದ ಐದಾರು ವರ್ಷಗಳ ಹಿಂದೆಯೂ ಸಹ ಮರ್ಚೇಡ್ ಗ್ರಾಮದ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿತ್ತು, ಅದನ್ನು ಸೆರೆ ಹಿಡಿದು ಕೃಷ್ಣ ನದಿಗೆ ಬಿಡಲಾಗಿತ್ತು. ಮರ್ಚೇಡ್ ಗ್ರಾಮದ ಕೆರೆಗೆ ದೊಡ್ಡ ಹಳ್ಳದ ಸಂಪರ್ಕ ಇರುವುದರಿಂದ ಕೃಷ್ಣಾನದಿ ಮೂಲಕ ಕೆರೆಗೆ ಸೇರಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯ 23 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿ ರಾಜೇಶ್ ನಾಯಕ, ಗಸ್ತು ಅರಣ್ಯ ಪಾಲಕರ ಬಸವರಾಜ್, ಸೇರಿದಂತೆ ಅಧಿಕಾರಿಗಳು ಮೀನುಗಾರರು, ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...