ರಾಯಚೂರು | ಒಳಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹಿಸಿ ತಮಟೆ ಚಳವಳಿ

Date:

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್‌ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಬಿ.ಕೃಷ್ಣಪ್ಪ ಸ್ಥಾಪಿತ)ಯ ಮುಖಂಡರು ರಾಯಚೂರು ನಗರದಲ್ಲಿ ತಮಟೆ ಚಳವಳಿ ನಡೆಸಿದರು.

ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಕಾಕರಗಲ್ ನೇತೃತ್ವದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ತಮಟೆ ಚಳವಳಿ ವಿವಿಧ ರಸ್ತೆಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದ ಮುಖಾಂತರ ಮನವಿ ಸಲ್ಲಿಸಿದರು.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ್ದು, ರಾಜ್ಯ ಸರ್ಕಾರ ಕೂಡಲೇ ಮೀಸಲಾತಿ ಹಂಚಿಕೆ ನಿರ್ಧಾರವನ್ನು ಕೈಗೊಳ್ಳಬೇಕು. ಸಂವಿಧಾನ ಆಶಯದಂತೆ ಸರ್ಕಾರ ನಡೆಯುವುದೇ ಆದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ನಿರ್ಧಾರ ಪ್ರಕಟಿಸಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ಹೋರಾಟಗಾರ ಬಿ.ಕೃಷ್ಣಪ್ಪ ಇವರ ಜೂ.9 ರಂದು ಜನ್ಮ ದಿನವನ್ನು ಸರ್ಕಾರದಿಂದಲೇ ಆಚರಿಸಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು. ಬಾಕಿಯಿರುವ 3 ಲಕ್ಷ ಬ್ಯಾಕ್ ಲಾಗ್ ಹುದ್ದೆಗಳನ್ನು ನೇಮಕಾತಿ ನಡೆಸುವವರೆಗೆ ಹೊಸ ನೇಮಕಾತಿ ಪ್ರಕ್ರಿಯೆ ನಡೆಸಬಾರದು. ಬಗರ್‌ಹುಕುಂ ಸಾಗುವಳಿದಾರನ್ನು ಒಕ್ಕಲೆಬ್ಬಿಸದೇ ಸಾಗುವಳಿ ಚೀಟಿ ನೀಡಬೇಕು. ಸಮಾಜ ಕಲ್ಯಾಣ ವಸತಿ ನಿಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕೆಂದು ಇದೇ ವೇಳೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಸಂಸದಿಂದ ಪ್ರತಿಭಟನೆ

ಪ್ರತಿಭಟನೆಯಲ್ಲಿ ಎಸ್.ಮಾರೆಪ್ಪ ವಕೀಲ, ಜಿಲ್ಲಾ ಸಂಚಾಲಕ ಸುರೇಶ ಬಳಗಾನೂರು, ತುರುಮಂದೆಪಪ ಕಟ್ಟಿಮನಿ, ರಾಮಣ್ಣ ಸಾಸಲಮರಿ, ಶಿವಪ್ಪ ಪಲಕನಮರಡಿ, ಶಿವರಾಜ ರುದ್ರಾಕ್ಷಿ, ಅಮರನಾಥ ಉದ್ಭಾಳ, ಈರಣ್ಣ ಕೇಳಗೆರಿ,ರಮೇಶ ಗೋಸಲೆ, ಕಾಸಿಮಪ್ಪ ಮುರಾರಿ, ಮೌನೇಶ ಕವಿತಾಳ ಸೇರಿದಂತೆ ವಿವಿಧ ತಾಲೂಕಗಳಿಂದ ಆಗಮಿಸಿದ್ದ ಕಾರ್ಯಕರ್ತರು, ಪದಾಧಿಕಾರಿಗಳು ಭಾಗಿಯಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...