ರಾಯಚೂರು | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ದಸಂಸ ಒತ್ತಾಯ

Date:

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪಟ್ಟಣ ಪಂಚಾಯತ್ ಅಧಿಕಾರಿ ಅಕ್ರಂ ಅವರಿಗೆ ಮನವಿ ಸಲ್ಲಿಸಿತು.

“ಪಟ್ಟಣದಲ್ಲಿ ಸಾವಿರಾರು ಜನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ವಾಸಿಸುತ್ತಿದ್ದಾರೆ. ಸದರಿ ಪಟ್ಟಣದಲ್ಲಿ ಅಂಬೇಡ್ಕರ್ ಭವನದ ಅವಶ್ಯಕತೆ ಇದ್ದು, ಭವನ ನಿರ್ಮಾಣ ಮಾಡುವುದು ಪಟ್ಟಣದ ಬಹುಜನರ ಬೇಡಿಕೆಯಾಗಿದೆ. ಈಗಾಗಲೇ ಹಟ್ಟಿ ಪಟ್ಟಣದ ಬುದ್ದಿನ್ನಿ ಲೇಔಟ್‌ನಲ್ಲಿ ಸ್ಥಳ ಕೂಡಾ ಬಹಳಷ್ಟು ವರ್ಷಗಳಿಂದ ಮೀಸಿಲಿರಿಸಿದ್ದು, ಇಲ್ಲಿಯವರೆಗೂ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ. ಸ್ಥಳ ಮೀಸಲಿಟ್ಟು ಬಹಳ ವರ್ಷಗಳೇ ಕಳೆದರೂ ಭವನದ ವಿಚಾರದಲ್ಲಿ ಮೀನಾಮೇಷ ಎಣಿಸುವುದು ದೇಶದ ಸಂವಿಧಾನ ಶಿಲ್ಪಿಗೆ ಮಾಡುವ ಅತೀ ದೊಡ್ಡ ಅಗೌರವ ಎನಿಸಿಕೊಳ್ಳುತ್ತದೆ. ಅವರಿಗೆ ಸೂಕ್ತ ಗೌರವ ನೀಡುವುದು ದೇಶದ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸವಾಗಬೇಕಿದೆ: ಹಿರಿಯ ಸಾಹಿತಿ ಮುಕ್ಕುಂದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಠರಾವ್ ಪಾಸ್ ಮಾಡದೇ ಹೋದಲ್ಲಿ ಮುಂದೆ ನಡೆಯುವ ಹೋರಾಟಕ್ಕೆ ತಾವೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.‌ ಈ ವೇಳೆ ಯಲ್ಲಪ್ಪ ಮಾಚನೂರು, ಪ್ರಶಾಂತ ದೀನ ಸಮುದ್ರ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...