ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರ್ವಹಣೆ ವೆಚ್ಚ ಮತ್ತು ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಸಿದೆ. ಸಂಘಟನೆಯ ಮುಖಂಡರು ರಾಯಚೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.
ವಸತಿ ನಿಲಯಗಳ ನಿರ್ವಾಹಣೆ ವೆಚ್ಚ, ವಿದ್ಯಾರ್ಥಿ ವೇತನ ₹1,750ರಿಂದ 5,000ದವರೆಗೆ ಮಂಜೂರಾತಿ ಮಾಡಬೇಕು. ಪಾವತಿ ಸಲ್ಲಿಸಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಸತಿ ನಿಲಯ ಕಲ್ಪಿಸಬೇಕು. ವಸತಿ ನಿಲಯಗಳಿಗೆ ಆಹಾರ ಸರಬರಾಜು ಮಾಡುವ ಗುತ್ತಿಗೆದಾರರು ಕಳಪೆ ಮಟ್ಟದ ಆಹಾರ ಸರಬರಾಜು ಮಾಡುತ್ತಿದ್ದು, ಸೂಕ್ತ ಕ್ರಮ ವಹಿಸಿ ಗುತ್ತಿಗೆದಾರರ ಪರವಾನಗಿ ರದ್ದುಗೊಳಿಸಿ ಕಪ್ಪುಪಟ್ಟಿಗೆ ಸೇರಿಸಬೇಕು” ಎಂದು ಮನವಿ ಮಾಡಿದರು.
“ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆದಾರರು, ಕಾವಲುಗಾರರನ್ನು ಖಾಯಂಗೊಳಿಸಬೇಕು. 8 ಗಂಟೆಗಳ ಕೆಲಸ ಮಾಡಿದ ನಂತರ ಹೆಚ್ಚವರಿ ಕೆಲಸಕ್ಕೆ ವೇತನ ಪಾವತಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಹಾಸನ | ಶಾಲೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್; ಓರ್ವ ಸಾವು
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಎಂ ಈರಣ್ಣ, ವಿಭಾಗೀಯ ಸಂಚಾಲಕ ನರಸಿಂಹಲು ನೆಲಹಾಳ, ಲಕ್ಷ್ಮಿದೇವಿ, ಮಾರುತಿ ಸೇರಿದಂತೆ ಇತರರು ಇದ್ದರು.
ವರದಿ : ಹಫೀಜುಲ್ಲ




