ರಾಯಚೂರು | ವಿದ್ಯುತ್ ಉತ್ಪಾದನೆ ಕುಸಿತ; ಹೆಚ್ಚಿದ ಬೇಡಿಕೆ

Date:

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತವಾಗಿದ್ದು ಕಲ್ಲಿದ್ದಲು ಆಧಾರಿತ ಘಟಕಗಳು ಸೇರಿದಂತೆ ಇತರೆ ಮೂಲಗಳಿಂದಲೂ ವಿದ್ಯುತ್ ಉತ್ಪಾದನೆ ಇಳಿಕೆಯಾಗುತ್ತಿದೆ.

ರಾಯಚೂರು ಶಾಖೋತ್ಪನ್ನ ಕೇಂದ್ರದ ಐದು ಘಟಕಗಳು ಸ್ಥಗಿತಗೊಂಡಿದ್ದು‌, ಉಳಿದ ಮೂರು ಘಟಕಗಳಲ್ಲಿಯೂ ಉತ್ಪಾದನೆ ಇಳಕೆಯಾಗಿದೆ.

1720 ಮೆ ವ್ಯಾ ವಿದ್ಯುತ್ ಸಾಮರ್ಥ್ಯವಿರುವ ಆರ್‌ಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ 160 ಮೆ ವ್ಯಾ ವಿದ್ಯುತ್ ಮಾತ್ರ ಉತ್ಪಾದನೆಯಾಗುತ್ತಿದೆ. ಇನ್ನೂ ವೈಟಿಪಿಎಸ್, ಬಿಟಿಪಿಎಸ್ ವಿದ್ಯುತ್ ಘಟಕಗಳು ಪೂರ್ಣಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿವೆ. ಈ ಮಧ್ಯೆ ಮಳೆ ಕುಸಿತವಾದ ಪರಿಣಾಮ ಜಲಾಧಾರಿತ ಘಟಕಗಳು ಉತ್ಪಾದನೆ ನಿಲ್ಲಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ 10 ಸಾವಿರ ಮೆ ವ್ಯಾ ವಿದ್ಯುತ್ ಬೇಡಿಕೆಯಿದ್ದು, ಉತ್ಪಾದನೆ ಮಾತ್ರ 2750 ಮೆ ವ್ಯಾ ಆಗುತ್ತಿದೆ. ಕೇಂದ್ರ ಗ್ರೀಡ್ ಹಾಗೂ ಸೋಲಾರ್ ಮೂಲದಿಂದ ವಿದ್ಯುತ್ ಲಭ್ಯವಾಗುತ್ತಿದೆ. ಬೇಡಿಕೆಗೆ ತಕ್ಕಂತೆ ಉತ್ಪಾದನೆ ಸಾಧ್ಯವಾಗದೇ ಇರುವದರಿಂದ ಪೂರೈಕೆಯನ್ನು ಸರಿದೂಗಿಸಲು ಸಮಸ್ಯೆ ಎದುರಾಗಿದೆ.

ಕಲ್ಲಿದ್ದಲು ಕೊರತೆ, ತಾಂತ್ರಿಕ ಸಮಸ್ಯೆಯಿಂದ ಹೊರ ಬಾರದ ಕಲ್ಲಿದ್ದಲು ಘಟಕಗಳು ನಿರಂತರ ವಿದ್ಯುತ್ ಉತ್ಪಾದನೆ ಸಮಸ್ಯೆ ಸುಳಿಗೆ ಸಿಲುಕಿದತಾಗಿದೆ. ರಾಜ್ಯ ಸರ್ಕಾರ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ.

“ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗದೇ ಇರುವುದರಿಂದ ದುರಸ್ತಿ, ತಾಂತ್ರಿಕ ಸಮಸ್ಯೆ ಹೆಸರಿನಲ್ಲಿ ವಿದ್ಯುತ್ ಕಡಿತ ನಡೆಯುತ್ತಲೇ ಇದೆ. ಶಾಖೋತ್ಪನ್ನ ಘಟಕಗಳ ನಿರ್ವಹಣೆಯಲ್ಲಿ ಆಗುತ್ತಿರುವ ವಿಳಂಬದಿಂದಾಗಿ ಉತ್ಪಾದನೆಯಲ್ಲಿ ಇಳಿಕೆಯಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ತಡೆಗಟ್ಟಲು ಮುಂದಾಗಿ: ಆರ್.ಇಂದಿರಾ

ಸೋಲಾರ್, ಪವನ ಸೇರಿದಂತೆ ಇತರೆ ಮೂಲಗಳ ಉತ್ಪಾದನೆಯಿಂದ ಬೇಡಿಕೆ ಸಮತೋಲನ ಮಾಡಲು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ವಿದ್ಯುತ್ ಖರೀದಿ ಪ್ರಕ್ರಿಯೆಯೂ ಪ್ರಾರಂಭಗೊಂಡಿದೆ. ಯುಪಿಸಿಎಲ್, ಜಿಂದಾಲ್ ಸೇರಿದಂತೆ ಇತರೆ ಖಾಸಗಿ ಕಂಪನಿಗಳಿಂದ ಖರೀದಿ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ. ಜಲಾಶಯಗಳ ಸಂಗ್ರಹ ಕುಸಿಯುತ್ತಿದೆ. ಮಳೆಯಾದರೆ ಮಾತ್ರ ವಿದ್ಯುತ್ ಬೇಡಿಕೆ ಇಳಿಕೆಯಾಗುವ ಸಾಧ್ಯತೆಯಿದೆ.

ರಾಯಚೂರು ಜಿಲ್ಲಾ ಸಿಟಿಜನ್‌ ಜರ್ನಲಿಸ್ಟ್‌ ಹಫೀಜುಲ್ಲ ಮಾಹಿತಿ ಆಧರಿಸಿದ ವರದಿ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...