ರಾಯಚೂರು |ಬಿಲ್ ಪಾವತಿಯಲ್ಲಿ ವಿಳಂಬ ; ಶಾಸಕ ಮಾನಪ್ಪ ವಜ್ಜಲ ಮನೆ ಮುಂದೆ ಉಪವಾಸ ಸತ್ಯಾಗ್ರಹ

Date:

ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿಯ ಉಪಗುತ್ತಿಗೆ ಕೆಲಸ ಪೂರ್ಣಗೊಂಡಿರುವುದರ ನಡುವೆಯೂ ಬಿಲ್ ಪಾವತಿಯಲ್ಲಿ ವಿಳಂಬವಾಗುತ್ತಿರುವುದರಿಂದ ಅಕ್ಟೋಬರ್ 15 ರಂದು ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ಅವರ ನಿವಾಸದ ಮುಂದೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ದೇವದುರ್ಗ ತಾಲೂಕು ಸಣ್ಣ ಸಿವಿಲ್ ಗುತ್ತೇದಾರರ ಸಂಘದ ಅಧ್ಯಕ್ಷ ಶರಣೇಗೌಡ ಸುಂಕೇಶ್ವರಹಾಳ ಅವರು ಹೇಳಿದರು.

ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿಯ ಎರಡು ಪ್ಯಾಕೇಜುಗಳ ಒಟ್ಟು 1466 ಕೋಟಿ ಮೊತ್ತದ ಗುತ್ತಿಗೆ ಎನ್.ಡಿ.ವಡ್ಡರ್ ಕಂಪನಿಗೆ ಆಗಿದ್ದು, ಅದರಲ್ಲಿ ದೇವದುರ್ಗ ತಾಲ್ಲೂಕಿನ 17 ಡಿ ಡಿಸ್ಟ್ರಿಬ್ಯೂಟ‌ರ್ ಕಾಲುವೆ ಒಟ್ಟು 13.5 ಕಿ.ಮೀ ಆಧುನೀಕರಣ ಕಾಮಗಾರಿಯನ್ನು ತುಕಾರಾಮ್ ರಾಮಣ್ಣ ಜಿನ್ನಾಪುರ ಅವರಿಗೆ ಎನ್. ಡಿ.ವಡ್ಡರ್ ಕಂಪನಿ ಉಪಗುತ್ತಿಗೆ ನೀಡಿ ಒಪ್ಪಂದ ಮಾಡಿಕೊಳ್ಳಲಾಗಿದೆ. 2024 ಏ.24 ರಂದು 4.87 ಕೋಟಿ ರೂಪಾಯಿಗಳ ಅಂದಾಜು ಮೊತ್ತದ ಕಾಮಗಾರಿಗೆ ಒಪ್ಪಂದಕ್ಕೆ ಸಹಿ ಹಾಕಿ ಕಾಮಗಾರಿ ಪೂರ್ಣಗೊಳಿಸಿದರು ಪಾವತಿ ಮಾಡಲು ಸುಮಾರು ಏಳು ತಿಂಗಳಿಂದ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೃಷ್ಣಾ ಭಾಗ್ಯ ಜಲನಿಗಮದ ಅಂದಾಜು ವೆಚ್ಚ ಹಾಗೂ ಎನ್.ಡಿ.ವಡ್ಡ‌ರ್ ಕಂಪನಿಯ ಸಮೇತ ಶರಣೇಗೌಡ ಸುಂಕೇಶ್ವರಹಾಳ, ಪರಮಾನಂದ ಸುಂಕೇಶ್ವರಹಾಳ, ಶಿವು ಸಾಹುಕಾರ, ಅಂಜನೇಯ ಬಡಿಗೇರ್, ವೀರೇಶ ಹೂವಿನಬಾಡು, ಅಮರೇಶ ಕೂಡಿಕೊಂಡು ಉಪಗುತ್ತಿಗೆ ಈಗಾಗಲೇ ಸರ್ಕಾರದಿಂದ ಎನ್.ಡಿ. ಕೆಲಸ ಪೂರ್ಣಗೊಳಿಸಿ ವಡ್ಡ‌ರ್ ಕಂಪನಿಗೆ ಬಿಲ್ ಪಾವತಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪಗುತ್ತಿಗೆದಾರರಿಗೆ ಕಳೆದ ಏಳು ತಿಂಗಳಿಂದ ಒಂದು ರೂಪಾಯಿ ಬಿಲ್ ನೀಡಿಲ್ಲ. ಕಳೆದ ವರ್ಷಗಳಿಂದ ಕಂಪನಿಯ ಮಾಲೀಕರಾದ ಕರಿಯಪ್ಪ ವಜ್ಜಲ್ ಹಾಗೂ ಶಾಸಕ ಮಾನಪ್ಪ ವಜ್ಜಲ್ ಅವರನ್ನು ಹತ್ತಾರು ಬಾರಿ ಭೇಟಿ ನೀಡಿ ಬಿಲ್ ಪಾವತಿ ಮಾಡುವಂತೆ ಮನವಿ ಮಾಡಿದರು ಸ್ಪಂದಿಸಲಿಲ್ಲ. ನಮ್ಮ ಕ್ಷೇತ್ರದ ದೇವದುರ್ಗ ಶಾಸಕಿ ಕರಿಯಮ್ಮ ಅವರಿಂದ ನಾಲೈದು ಭಾರಿ ಶಾಸಕ ವಜ್ಜಲ್ ರಿಗೆ ಹೇಳಿಸಿದರೂ ಬಿಲ್ ಪಾವತಿ ಮಾಡಿಲ್ಲ. ಬಿಲ್ ಪಾವತಿ ಮಾಡದೇ ಸುಳ್ಳು ಹೇಳುತಾ ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ. ಬಿಲ್ ಪಾವತಿಯಾಗದಿದ್ದರೆ ಶಾಸಕ ಮಾನಪ್ಪ ವಜ್ಜಲ್ ಅವರ ನಿವಾಸದ ಮುಂದೆ ಉಪವಾಸ ಸತ್ಯಾಗ್ರಹ ಧರಣಿ ನಡೆಯಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಈ ವೇಳೆ ಸಣ್ಣಸಿವಿಲ್ ಗುತ್ತಿಗೆದಾರರ ಪದಾಧಿಕಾರಿಗಳಾದ ಸಂಘದ ತುಕಾರಾಮ ಜಿನ್ನಾಪುರ, ಅಂಜಿನೇಯ ಬಡಿಗೇರ, ವಿರೇಶ, ಪರಮಾನಂದ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...