ರಾಯಚೂರು | ನೀರು ಪೂರೈಕೆಗೆ ಮೀನಾಮೇಷ; ಅತ್ತನೂರು ಗ್ರಾ. ಪಂಚಾಯಿತಿಗೆ ಮಹಿಳೆಯರಿಂದ ಮುತ್ತಿಗೆ

Date:

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮ ಪಂಚಾಯಿತಿ ಆಡಳಿತ ಮತ್ತು ಸಿಬ್ಬಂದಿ ಸಮರ್ಪಕವಾಗಿ ನೀರು ಪೂರೈಸುವಲ್ಲಿ ಮೀನಾಮೇಷ ಎಣಿಸುತ್ತಿರುವುದರಿಂದ ಗ್ರಾಮದ ನಾಲ್ಕನೇ ವಾರ್ಡಿನ ಮಹಿಳೆಯರು ಸೋಮವಾರ ಖಾಲಿ ಕೊಡಗಳೊಂದಿಗೆ ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

“ಕೊಳವೆ ಬಾವಿ ಕೊರೆಸಿ ಹಲವು ದಿನ ಕಳೆದರೂ ಈವರೆಗೂ ಬಡಾವಣೆಯ ಮನೆಗಳಿಗೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ಕೊಡ ನೀರಿಗಾಗಿ ಮಕ್ಕಳು ಮತ್ತು ಮಹಿಳೆಯರು ಹಗಲು ರಾತ್ರಿ ಎನ್ನದೆ ನೀರು ಸಂಗ್ರಹ ಮಾಡುವ ಸ್ಥಿತಿ ನಿರ್ಮಾಣವಾಗಿದೆ” ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

“ಗ್ರಾಮದ ನಾಲ್ಕನೇ ವಾರ್ಡಿನಲ್ಲಿರುವ ಸುಮಾರು 100ಕ್ಕೂ ಹೆಚ್ಚು ಮನೆಗಳಿಗೆ ನೀರಿನ ತೊಂದರೆ ಉಂಟಾಗಿದೆ. ನೀರಿನ ಸಮಸ್ಯೆಯನ್ನು ಸರಿಪಡಿಸುವಂತೆ ಹಲವು ಬಾರಿ ಗ್ರಾಮ ಪಂಚಾಯಿತಿ ಆಡಳಿತದ ಗಮನಕ್ಕೆ ತಂದರೂ ಕೂಡಾ ಇಲ್ಲಿನ ನಿವಾಸಿಗಳ ಬೇಡಿಕೆ ಈಡೇರಿಸುವಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಸಂಪೂರ್ಣ ವಿಫಲವಾಗಿದೆ” ಎಂದು ಪ್ರತಿಭಟನಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಬ್ಬಂದಿಗಳ ಹಿಂದೇಟು: ಗ್ರಾಮ ಪಂಚಾಯಿತಿ ಎದುರು ಮಹಿಳೆಯರು ಬಿರು ಬಿಸಿಲಿನಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಿರಂತರವಾಗಿ ಪ್ರತಿಭಟನೆ ನಡೆಸಿದರು. ಮಹಿಳೆಯರ ಮನವಿ ಸ್ವೀಕರಿಸಲು ಗ್ರಾಮ ಪಂಚಾಯಿತಿಯ ಯಾವೊಬ್ಬ ಸಿಬ್ಬಂದಿಯೂ ಮುಂದೆ ಬರಲಿಲ್ಲ. ನಿವಾಸಿಗಳ ಮನವಿ ತೆಗೆದುಕೊಳ್ಳಲು ಹಿಂದೇಟು ಹಾಕಿದ ಪ್ರಸಂಗ ಜರುಗಿತು. ಮಹಿಳೆಯರ ಒತ್ತಡಕ್ಕೆ ಮಣಿದ ಕರ ವಸೂಲಿಗಾರ ಅಯ್ಯಪ್ಪ ನಿವಾಸಿಗಳ ಮನವಿ ಸ್ವೀಕರಿಸಿದ್ದಾರೆ.

ಅತ್ತನೂರು ಗ್ರಾಮ ಪಂಚಾಯಿತಿ

ಪ್ರತಿಭಟನಾಕಾರರಿಂದ ಛೀಮಾರಿ: ಗ್ರಮ ಪಂಚಾಯಿತಿಯ ಸಿಬ್ಬಂದಿಗಳ ನಡೆಗೆ ಪ್ರತಿಭಟನಾನಿರತ ಮಹಿಳೆಯರು ಛೀಮಾರಿ ಹಾಕಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾತ್ರಿಯಿಡೀ ಸುರಿದ ಮಳೆಯಿಂದ ತೋಯ್ದ ಭತ್ತ; ಜನಜೀವನ ಅಸ್ತವ್ಯಸ್ಥ

ಈ ಸಂದರ್ಭದಲ್ಲಿ ಖಾಜಮ್ಮ, ಹಾಜರಾಬೀ, ಹುಸೇನ್ ಬೀ, ಖಾಜಮುನ್ನ, ಹುಸೇನಾ, ಜನ್ನತ್ ಬೀ, ಬಂದೇನವಾಜ್, ಮಹಿಬೂಬ್, ಭಾಷಾಸಾಬ್, ಹಮೀದ್, ಬಾವಸಲಿ, ಬಾಬು ಸೇರಿದಂತೆ ಬಹುತೇಕರು ಇದ್ದರು.

ವರದಿ : ಮಲ್ಲಿಕಾರ್ಜುನ ಅತ್ತನೂರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...