ರಾಯಚೂರು | ಅಮಿತ್ ಶಾ ರಾಜೀನಾಮೆಗೆ ಆಗ್ರಹ; ಡಿ.27ರಂದು ಬೃಹತ್‌ ಪ್ರತಿಭಟನೆ

Date:

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ವಿರುದ್ಧ ಅವಮಾನಕರ ಹೇಳಿಕೆ ನೀಡಿದ ಕೇಂದ್ರ ಗೃಹಸಚಿವ ಅಮಿತ್ ಶಾ ರಾಜೀನಾಮೆ ಆಗ್ರಹಿಸಿ ಡಿಸೆಂಬರ್‌ 27ರಂದು ದಲಿತರಪರ ಮತ್ತು ಅಲ್ಪಸಂಖ್ಯಾತರ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಸಲಾಗುತ್ತದೆ ಎಂದು ದಲಿತಪರ ಮುಖಂಡ ಎಸ್ ಮಾರೆಪ್ಪ ವಕೀಲರು ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “2025ರೊಳಗೆ ಭಾರತವನ್ನು ಹಿಂದೂ ರಾಷ್ಟ್ರವಾಗಿ ಘೋಷಣೆ ಮಾಡುವ ಉದ್ದೇಶದಿಂದ ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿ ಚಟುವಟಿಕೆಯಾಗಿ ಬಿಜೆಪಿ ನಡೆಯುತ್ತಿದೆ. ಆರ್‌ಎಸ್‌ಎಸ್‌ ಮತ್ತು ಮನುವಾದಿಗಳ ಮನಸ್ಥಿತಿ ಹೊಂದಿರುವ ಬಿಜೆಪಿಗರಿಗೆ ಅಂಬೇಡ್ಕರ್ ಮತ್ತು ಸಂವಿಧಾನದ ಮೇಲೆ ಕಿಂಚತ್ತೂ ಗೌರವವಿಲ್ಲ. ಇಂತಹವರು ಸಂವಿಧಾನದ ಮೇಲೆ ಪ್ರಮಾಣವಚನ ಮಾಡಬಾರದಿತ್ತು” ಎಂದು ವಾಗ್ದಾಳಿ ನಡೆಸಿದರು.

“ಈ ದೇಶದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮತ್ತು ಅವರ ಮೇಲೆ ನಂಬಿಕೆ ಇಲ್ಲದಿದ್ದರೆ ಕೇಂದ್ರ ಗೃಹಸಚಿವ ಸೇರಿದಂತೆ ಯಾರೇ ಇರಲಿ ರಾಜೀನಾಮೆ ನೀಡಿ ಹೊರ ನಡೆಯಲಿ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಆರ್‌ಎಸ್‌ಎಸ್‌ ಮತ್ತು ಮನುವಾದಿಗಳ ಮನಸ್ಥಿತಿ ಭಾವನೆಯಾಗಿದೆ. ದೇಶ ಸೇರಿದಂತೆ ವಿದೇಶಗಳಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡಿದ್ದಾರೆ. ಇದನ್ನು ಸಹಿಸದ ಬಿಜೆಪಿಗರು ಈ ರೀತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರ್ ಮೇಲೆ ಇವರಿಗಿರುವ ನಿಜವಾದ ಒಳವಿಚಾರ ಅಮಿತ್ ಶಾ ಹೇಳಿಕೆ ಮೂಲಕ ಹೊರಬಿದ್ದಿದೆ. ಸಂವಿಧಾನದ ಅಡಿಯಲ್ಲಿ ನರೇಂದ್ರ ಮೋದಿ ನಂತರ ಬಹುದೊಡ್ಡ ಜವಾಬ್ದಾರಿ ವಹಿಸಿಕೊಂಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ತಮ್ಮ ನಾಲಿಗೆ ಹರಿಬಿಡುವ ಮೂಲಕ ಈ ದೇಶದ ಬಹುಸಂಖ್ಯಾತರ ವಿರೋಧಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅಂಬೇಡ್ಕರ್ ಅವರ ನಾಮಸ್ಮರಣೆ ನಮಗೆ ಫ್ಯಾಶನ್ ಅಲ್ಲ. ಅದು ನಮ್ಮ ಜೀವನ. ಇಂದು ನಮ್ಮ ಅಸ್ತಿತ್ವ, ನಮ್ಮ ಬದುಕು ಮತ್ತು ನಮಗಿರುವ ಸವಲತ್ತು ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಬಲದಿಂದಾಗಿ ದೊರತಿದೆ. ಪ್ರಸ್ತುತ ಕಾಲಘಟ್ಟದಲ್ಲಿ ರಾಜಕೀಯದಲ್ಲಿ ಅನೇಕ ಬದಲಾವಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಮತ್ತು ಸಂವಿಧಾನದ ವಿಚಾರಧಾರೆ ಅಗತ್ಯವಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೇಂದ್ರ ಗೃಹಮಂತ್ರಿ ಅಮಿತ್ ಶಾ ರಾಜೀನಾಮೆಗೆ ಸಿಪಿಐ ಆಗ್ರಹ

ಅಂಬೇಡ್ಕರ್ ವಿರೋಧಿ ಚಟುವಟಿಕೆ ಅನುಸರಿಸುವ ಯಾವುದೇ ಪಕ್ಷವಿರಲಿ ಅವರಿಗೆ ತಕ್ಕ ಪಾಠ ಕಲಿಸಲು ಉತ್ತರ ಭಾರತದ ಜನರು ಇಂದಿಗೂ ಮುಂಚೂಣಿ ವಹಿಸಿಕೊಂಡಿದ್ದಾರೆ. ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಬಿಜೆಪಿಗರಿಗೆ ತಕ್ಕಪಾಠ ಕಲಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರವೀಂದ್ರನಾಥ ಪಟ್ಟಿ, ಎಂ ಆರ್ ಭೇರಿ, ಜಾನ್ ವೆಸ್ಲಿ, ಹೇಮರಾಜ್ ಆಸ್ಕಿಹಾಳ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...