ರಾಯಚೂರು | ಕೆಎಸ್‌ಆರ್‌ಪಿ ಸ್ಥಾಪನೆಗೆ ಒತ್ತಾಯ; ಸಿಎಂಗೆ ಬಹಿರಂಗ ಪತ್ರ

Date:

ಜಿಲ್ಲೆಯಲ್ಲೇ 13ನೇ ಕೆಎಸ್‌ಆರ್‌ಪಿ (ಕರ್ನಾಟಕ ರಾಜ್ಯ ರಿಸರ್ವ್ ಪೊಲೀಸ್) ಪಡೆಯನ್ನು ಸ್ಥಾಪಿಸಬೇಕೆಂದು ಯುವ ಹೋರಾಟಗಾರ ಅರುಣ್ ಭೂಪಾಲ್ ಅವರು ಮುಖ್ಯಮಂತ್ರಿ ಅವರಿಗೆ ಬಹಿರಂಗ ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಪತ್ರ ಖಾಕಿ ವಲಯ ಹಾಗೂ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಭದ್ರತಾ ಪರಿಸ್ಥಿತಿಯನ್ನು ಉಲ್ಲೇಖಿಸಿರುವ ಅವರು, “ಮಹಾನಗರಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಮೀಸಲಿಡುವ ಸರ್ಕಾರ, ಗಡಿಭಾಗದ ಜಿಲ್ಲೆಗಳಿಗೆ ಕನಿಷ್ಠ ಭದ್ರತಾ ವ್ಯವಸ್ಥೆ ಒದಗಿಸಲು ಯಾಕೆ ಹಿಂದೇಟು ಹಾಕುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಆಂಧ್ರ–ತೆಲಂಗಾಣ ಗಡಿಭಾಗಕ್ಕೆ ಹೊಂದಿಕೊಂಡಿರುವುದರಿಂದ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಶಾಶ್ವತ ಕೆಎಸ್‌ಆರ್‌ಪಿ ಪಡೆಯ ಅಗತ್ಯವಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ. ವಿ.ವಿ.ಐ.ಪಿ ಭೇಟಿಗಳು, ರಾಜಕೀಯ ಸಮಾವೇಶಗಳು, ಧಾರ್ಮಿಕ ಜಾತ್ರೆಗಳು, ಹಟ್ಟಿ ಚಿನ್ನದ ಗಣಿ, ಶಕ್ತಿನಗರ ವಿದ್ಯುತ್ ಉತ್ಪಾದನಾ ಘಟಕ ಹಾಗೂ ಉದ್ದೇಶಿತ ವಿಮಾನ ನಿಲ್ದಾಣದ ಹಿನ್ನೆಲೆಯಲ್ಲಿ ಭದ್ರತಾ ಸವಾಲು ಹೆಚ್ಚುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಕಲಬುರಗಿ ಅಥವಾ ಮುನಿರಾಬಾದ್‌ನಿಂದ ಪಡೆ ಬರಲು ನಾಲ್ಕು ಗಂಟೆಗಳವರೆಗೆ ಸಮಯ ಹಿಡಿಯುತ್ತಿರುವುದು ಆತಂಕಕಾರಿ ಎಂದು ಅರುಣ್ ಭೂಪಾಲ್ ಅಭಿಪ್ರಾಯಪಟ್ಟಿದ್ದಾರೆ. ಕಲ್ಯಾಣ ಕರ್ನಾಟಕದ 25 ಶಾಸಕರು ಒಟ್ಟಾಗಿ ಮನವಿ ಸಲ್ಲಿಸಿದ್ದರೂ ಹಣಕಾಸು ಇಲಾಖೆ ಎರಡನೇ ಬಾರಿ ಪ್ರಸ್ತಾವನೆ ತಿರಸ್ಕರಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಅಗತ್ಯ ಭೂಮಿ ಹಾಗೂ ಅನುದಾನದ ವ್ಯವಸ್ಥೆ ಇದ್ದರೂ ಅನುಮತಿ ನೀಡದಿರುವುದನ್ನು ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಾನ್ವಿ | ಲಾರಿ – ಬೈಕ್ ನಡುವೆ ಅಪಘಾತ; ಓರ್ವ ಸಾವು

ಐಆರ್‌ಬಿ–ಕೆಎಸ್‌ಆರ್‌ಪಿ ಪ್ರತ್ಯೇಕೀಕರಣದ ನಂತರ ಕಲ್ಯಾಣ ಕರ್ನಾಟಕ ಮೀಸಲಾತಿಯಲ್ಲಿ ನೇಮಕವಾದ ಸಿಬ್ಬಂದಿಗೆ ಪದೋನ್ನತಿ ಸಿಗದೆ ನಿವೃತ್ತಿಯಾಗುತ್ತಿರುವ ವಿಚಾರವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯ ಬಜೆಟ್‌ನಲ್ಲಿ ರಾಯಚೂರಿನಲ್ಲಿ 13ನೇ ಕೆಎಸ್‌ಆರ್‌ಪಿ ಪಡೆಯ ಘೋಷಣೆ ಮಾಡಬೇಕು. ಇದು ಕೇವಲ ಒತ್ತಾಯವಲ್ಲ, ಸಂವಿಧಾನಬದ್ಧ ಹಕ್ಕು ಎಂದು ಅವರು ತಿಳಿಸಿದ್ದಾರೆ. ಈ ಕುರಿತು ಸರ್ಕಾರದ ಪ್ರತಿಕ್ರಿಯೆ ನಿರೀಕ್ಷಿಸಲಾಗುತ್ತಿದೆ.

b59f1ef46f1981a0bca30ef559f6d501
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...