ರಾಯಚೂರು | ಮಾಲಾ, ಬ್ಯಾಗಾರ ಉಪ ಜಾತಿಗಳನ್ನು ನಾಲ್ಕನೇ ಗುಂಪಿಗೆ ಸೇರಿಸುವಂತೆ ಒತ್ತಾಯ

Date:

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಆಯೋಗಕ್ಕೆ ಮಾಲಾ ಮಹಾಸಭಾದಿಂದ ಮನವಿ ಸಲ್ಲಿಸಲಾಗಿದ್ದು, ಜೆ ಸಿ ಮಾಧುಸ್ವಾಮಿ ನೇತೃತ್ವದ ಸಮಿತಿ ನೀಡಿರುವ ವರದಿಯಲ್ಲಿ ಮಾಲಾ ಹಾಗೂ ಬ್ಯಾಗಾರ ಉಪ ಜಾತಿಗಳನ್ನು ನಾಲ್ಕನೇ ಗುಂಪಿನಲ್ಲಿ ಸೇರ್ಪಡೆ ಮಾಡಿ ಶೇ.1ರಷ್ಟು ಮೀಸಲು ನಿಗದಿಪಡಿಸಿರುವುದನ್ನು ಪರಿಷ್ಕರಿಸಬೇಕೆಂದು ಮನವಿ ಮಾಡಲಾಗಿದೆ ಎಂದು ಮಹಾಸಭಾ ಸಂಚಾಲ ಭಾಸ್ಕರರಾಜ್ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “ಬಿಜೆಪಿ ಸರ್ಕಾರದ ಅವಧಿಯಲ್ಲಿ ನ್ಯಾಯಮೂತಿ ಎ ಜೆ ಸದಾಶಿವ ಆಯೋಗ ವರದಿಯನ್ನು ಬಿಟ್ಟು ಜೆ ಸಿ ಮಾಧುಸ್ವಾಮಿ ಸಮಿತಿ ನೀಡಿರುವ ಮೀಸಲು ವರ್ಗೀಕರಣದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ವರದಿಯಲ್ಲಿ ಮಾಲಾ ಮತ್ತು ಬ್ಯಾಗಾರ ಉಪ ಜಾತಿಗಳಿಗೆ ಅನ್ಯಾಯವಾಗಿದೆ. ಮಾಲಾದಲ್ಲಿ 37 ಉಪಜಾತಿಗಳಿದ್ದು, ಛಲವಾದಿ ಪ್ರತ್ಯೇಕ ಉಪಜಾತಿಗಳಿವೆ. ಕೆಲವರು ಛಲವಾದಿಯೆಂದು ನಮೂದಿಸಿದ್ದರಿಂದ ಗೊಂದಲವಾಗಿದೆ. 2011 ಜಾತಿಗಣತಿಯಲ್ಲಿ ಮಾಲಾ ಸಮೂದಾಯ 20 ಸಾವಿರ ಜನಸಂಖ್ಯೆ ಇರುವುದಾಗಿ ಉಲ್ಲೇಖವಾಗಿದೆ” ಎಂದರು.

“ಬ್ಯಾಗಾರ ಸಮುದಾಯವನ್ನು ಕೇವಲ 2019 ಎಂದು ನಮೂದಿಸಲಾಗಿದೆ. ಒಳಮೀಸಲು ವರ್ಗೀಕರಣದಲ್ಲಿ ಜನಗಣತಿ ಪರಿಗಣಿಸಿ ಮೀಸಲು ಹಂಚಿಕೆ ಮಾಡಿದಲ್ಲಿ ಅನ್ಯಾಯವಾಗುತ್ತದೆ. ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಂ ನೇತೃತ್ವದಲ್ಲಿ ಛಲವಾದಿ ಮಹಾಸಭಾ ಸ್ಥಾಪಿಸಿದ್ದರು. ಮಾಲಾ ಮತ್ತು ಬ್ಯಾಗಾರ ಎಂದು ಪ್ರತ್ಯೇಕವಾಗಿ ಬರೆಸದೇ ಛಲವಾದಿಯೆಂದು ಸಮುದಾಯದ ಜನರು ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಕೂಡಲೇ ಅಂತಹ ಜಾತಿ ಪ್ರಮಾಣಪತ್ರ ರದ್ದುಗೊಳಿಸಿ ಮಾಲಾ ಮತ್ತು ಬ್ಯಾಗಾರ ಪ್ರತ್ಯೇಕ ಜಾತಿ ಪ್ರಮಾಣ ಪತ್ರ ನೀಡಿ ಶೇ.5.5ರಷ್ಟು ಮೀಸಲು ನಿಗದಿಗೊಳಿಸಬೇಕು. ಇಲ್ಲದೇ ಹೊದಲ್ಲಿ ಸಮುದಾಯದ ವಿದ್ಯಾರ್ಥಿಗಳಿಗೆ, ಸರ್ಕಾರಿ ಉದ್ಯೋಗ ಸೇರಿದಂತೆ ಎಲ್ಲದರಲ್ಲೂ ಅನ್ಯಾಯವಾಗುವ ಕುರಿತು ಮಾಹಿತಿ ನೀಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ʼಹೈದರಾಬಾದ್ ಕರ್ನಾಟಕದ ಸಣ್ಣಕಥೆಗಳಲ್ಲಿ ದಲಿತ ಲೋಕದ ಸ್ವರೂಪʼ ಪ್ರಬಂಧಕ್ಕೆ ಡಾಕ್ಟರೇಟ್ ನೀಡಿದ ಹಂಪಿ ವಿವಿ

ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಮಿತ್ರ ಮಾತನಾಡಿ, “ರಾಜ್ಯದಲ್ಲಿ 1 ಲಕ್ಷ ಮಂದಿ ಸರ್ಕಾರಿ ನೌಕರರಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿದ್ದಾರೆ. ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗಕ್ಕೆ ದೂರು ನೀಡಿದರೆ ಸುಳ್ಳು ಜಾತಿ ಪ್ರಮಾಣಪತ್ರ ರದ್ದುಗೊಳಿಸುವ ಅಧಿಕಾರ ನೀಡಿಲ್ಲವೆಂದು ಹೇಳುತ್ತಿದ್ದಾರೆ. ಆಯೋಗ ನೀಡುವ ವರದಿಯಲ್ಲಿ ತಪ್ಪು ಮಾಹಿತಿ ನೀಡಿ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ” ಎಂದರು.

“ದ್ರಾವಿಡ ಕರ್ನಾಟಕ, ಆದಿ ಕರ್ನಾಟಕ ಎಂಬುದನ್ನು ಮಾತ್ರ ಆಯೋಗ ಪರಿಶೀಲಿಸಿ ವರದಿ ನೀಡುವುದಾಗಿ ಹೇಳಲಾಗುತ್ತಿದೆ. ಉಳಿದಂತೆ ಎಸ್‌ಸಿ ಜಾತಿಗಳ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಉಪಜಾತಿಗಳಿಗೆ ಅನ್ಯಾಯವಾಗುತ್ತದೆ. 2011ರ ಜನಗಣತಿಯಂತೆ ಪರಿಶಿಷ್ಟ ಜಾತಿಗಳ ಜನಸಂಖ್ಯೆ ಅನ್ವಯಿಸಿದರೆ ʼಕೋಲಪುಲು ವಂದಲುʼ ಎಂಬ ಉಪ ಜಾತಿಯ ಜನಸಂಖ್ಯೆ ಕೇವಲ ಒಂದು ಎಂದು ನಮೂದಿಸಲಾಗಿದೆ. ಒಬ್ಬರೇ ಉಪಜಾತಿಯಲ್ಲಿ ಇರುಲು ಸಾಧ್ಯವೇ” ಎಂದು ಪ್ರಶ್ನಿಸಿದ್ದು, ಪ್ರತ್ಯೇಕವಾಗಿ ಜಾತಿ ಕಲಂನಲ್ಲಿ ನಮೂದಿಸುವ ವ್ಯವಸ್ಥೆ ರೂಪಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಮಲ ಆಂಜಿನೇಯ್ಯ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...