ರಾಯಚೂರು | ದೇವದಾಸಿ ಮಹಿಳೆಯರ ಪಿಂಚಣಿ ಹೆಚ್ಚಳಕ್ಕೆ ಆಗ್ರಹ

Date:

ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿಯನ್ನು 3 ಸಾವಿರ ರೂಗಳಿಗೆ ಹೆಚ್ಚಿಸುವುದು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ದೇವದಾಸಿಯರ ಸಮೀಕ್ಷೆ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಆಗ್ರಹಿಸಿತು.

ಸರ್ಕಾರವು ದೇವದಾಸಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಗೊಳಿಸಬೇಕು. ಉಚಿತ ನಿವೇಶನ ಹಂಚಿಕೆ ಜೊತೆಗೆ ಮನೆಯನ್ನು ನಿರ್ಮಿಸಲು ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದರು.

ರಾಜೀವಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ ಮನೆಗಳಿಗೆ ವಂತಿಗೆ ಹಣವನ್ನು ಫಲಾನುಭವಿಗಳೇ ನೀಡುವಂತೆ ಕೇಳಲಾಗುತ್ತಿದೆ. ಹಣ ಪಾವತಿಸುವ ಶಕ್ತಿ ದೇವದಾಸಿ ಮಹಿಳೆಯರಿಂದ ಸಾಧ್ಯವಿಲ್ಲ. ಸರ್ಕಾರವೇ ವಂತಿಗೆ ಹಣ ತುಂಬಿ ಮನೆ ನಿರ್ಮಿಸಿಕೊಡಬೇಕು. ದೇವದಾಸಿ ಮಹಿಳೆಯರ ಕುಟುಂಬಕ್ಕೆ ಐದು ಎಕರೆ ನೀರಾವರಿ ಭೂಮಿ ಒದಗಿಸಬೇಕು. ರಾಯಚೂರು ತಾಲೂಕಿನ ದೇವದಾಸಿ ಮಹಿಳೆಯರ ವಸತಿ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಕೂಡಲೇ ಕಾಮಗಾರಿ ವೇಗ ಹೆಚ್ಚಿಸಬೇಕೆಂದು ಒತ್ತಾಯಿಸಿ ಸಂಘಟನೆ ಪದಾಧಿಕಾರಿಗಳು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇದನ್ನೂ ಓದಿ: ರಾಯಚೂರು | ವೇತನ ಪಾವತಿಗೆ ಒತ್ತಾಯಿಸಿ ಗ್ಯಾಂಗ್ ಮ್ಯಾನ್‌ಗಳ ಪ್ರತಿಭಟನೆ

ಈ ವೇಳೆ ಸಂಘಟನೆ ಗೌರವಾಧ್ಯಕ್ಷ ಕೆ.ಜಿ.ವೀರೇಶ, ಅಧ್ಯಕ್ಷೆ ಎಚ್.ಪದ್ಮಾ, ಕಾರ್ಯದರ್ಶಿ ತಾಯಮ್ಮ, ರೇಣುಕಮ್ಮ, ಮುತ್ತಮ್ಮ ಸೇರಿದಂತೆ ಅನೇಕ ಮಹಿಳೆಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...