ಹಟ್ಟಿ ಚಿನ್ನದ ಗಣಿ ಪಟ್ಟಣದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಡ್ರೈನೇಜ್ ನೀರು ಸಂಗ್ರಹವಾಗಿ ದುರ್ವಾಸನೆ ಬೀರುತ್ತಿದ್ದು, ಬಸ್ ನಿಲ್ದಾಣಕ್ಕೆ ಬರುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಹಟ್ಟಿ ಪಟ್ಟಣ ನಾಗರಿಕ ಸಮಿತಿ ಮತ್ತು ಆಟೋ ಚಾಲಕರ ಸಂಘ ವತಿಯಿಂದ ಹಟ್ಟಿ ಚಿನ್ನದ ಗಣಿ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬೇಕೆಂದು ಆಗ್ರಹಿಸಿದರು.
ಹೊಸ ಬಸ್ ನಿಲ್ದಾಣದ ಸಮೀಪದಲ್ಲಿರುವ ಡ್ರೈನೇಜ್ ಬಹು ದಿನಗಳಿಂದ ನಿರ್ವಹಣೆಯಿಲ್ಲದೆ ಹಾಳಾಗಿರುವುದರಿಂದ ಈ ಡ್ರೈನೇಜ್ನಿಂದ ಸಾರ್ವಜನಿಕರು ಹಲವಾರು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಅಲ್ಲದೆ, ಪಕ್ಕದಲ್ಲಿಯೇ ಸಾರ್ವಜನಿಕರಿಗೆ ಕುಡಿಯುವ ನೀರಿನ ನಲ್ಲಿಯಿರುವುದರಿಂದ ದುರ್ವಾಸನೆಯಿಂದ ನೀರು ಬಳಕೆಗೆ ಅಸಮಾಧಾನ ಉಂಟಾಗುತ್ತಿದೆ ಎಂದರು.
ಬಸ್ ನಿಲ್ದಾಣದ ಪಕ್ಕದಲ್ಲೇ ಆಟೋ ನಿಲ್ದಾಣವಿದ್ದು, ಅಲ್ಲಿನ ಆಟೋ ಚಾಲಕರಿಗೂ ಕ್ರಿಮಿಕೀಟಗಳ ಕಾಟ ಹೆಚ್ಚಾಗಿದೆ. ಇದರಿಂದ ರೋಗಗಳು ಹರಡುವ ಭೀತಿ ಎದುರಾಗಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡು ಡ್ರೈನೇಜ್ ವ್ಯವಸ್ಥೆಯನ್ನು ದುರಸ್ತಿ ಮಾಡಿ ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಹಟ್ಟಿ ಪಟ್ಟಣ ನಾಗರಿಕ ಸಮಿತಿ ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮದ್ಯಪಾನ ನಿಷೇಧಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ಈ ವೇಳೆ ಸಂಘದ ಮುಖಂಡ ಲಾಲ್ ಪೀರ್, ಸುರೇಶ ಗುರಿಕಾರ, ಸದ್ದಾಂ, ಶಿವಪ್ಪ, ಶರೀಫ್ ಇನ್ನಿತರರು ಹಾಜರಿದ್ದರು.





