ರಾಯಚೂರು | ವಿದ್ಯುತ್ ದರ ಹೆಚ್ಚಳ ಹಿಂಪಡೆಯುವಂತೆ ಆಗ್ರಹ

Date:

ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿದ್ಯುತ್ ದರಗಳನ್ನು ಹೆಚ್ಚಿಸಿದ್ದು, ಇದರಿಂದ ಕಾರ್ಖಾನೆಗಳಿಗೆ ಮತ್ತು ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ ಲಕ್ಷ್ಮಿರೆಡ್ಡಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿದ್ಯುತ್ ದರಗಳನ್ನು ಹೆಚ್ಚಿಸಿದರ ಬಗ್ಗೆ ಮೂರು ತಿಂಗಳ ಹಿಂದೆಯೇ ಕೆಇಆರ್‌ಸಿಗೆ ಹೆಚ್ಚಿಸಿರುವ ವಿದ್ಯುತ್ ದರಗಳ ಮತ್ತು ಫ್ಯೂಲ್ ಚಾರ್ಜ್‌ಗಳಿಗೆ ಸಂಬಂಧಿಸಿದಂತೆ ಸಂಘದ ವತಿಯಿಂದ ಆಕ್ಷೇಪಣೆ ಮಾಡಲಾಗಿತ್ತು. ಆದರೆ ಜೆಸ್ಕಾಂ ಇಲಾಖೆಯವರು ಪ್ರತಿ ಕಿಲೋ ವ್ಯಾಟ್ ವಿದ್ಯುತ್‌ಗೆ ₹100 ಹೆಚ್ಚಿಸಿ ಪ್ರತಿ ಯೂನಿಟ್‌ಗೆ 50 ಪೈಸೆಯಷ್ಟು ಕಡಿಮೆ ಮಾಡಿದೆ. ಇದರಿಂದ ಸಣ್ಣ ಸಣ್ಣ ಕೈಗಾರಿಕೋದ್ಯಮಿದಾರರಿಗೆ 10 ಹೆಚ್‌ಪಿಯಿಂದ 100 ಹೆಚ್‌ಪಿವರೆಗೆ ವಿದ್ಯುತ್ ಬಳಕೆ ಮಾಡುವಂತಹ ಕಾರ್ಖಾನೆಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ” ಎಂದು ತಿಳಿಸಿದರು.

“ತಾರತಮ್ಯ ಮಾಡುತ್ತಿರುವುದು ಸರಿಯಲ್ಲ. ಇದರಿಂದ ಸಣ್ಣ ಸಣ್ಣ ಕೈಗಾರಿಕೋದ್ಯಮಿದಾರರಿಗೆ ಸಾಕಷ್ಟು ಹೊರೆಯಾಗಿದೆ. 5 ಕಿಲೋ ವ್ಯಾಟ್‌ನಿಂದ 500 ಕಿಲೋ ವ್ಯಾಟ್‌ವರೆಗೆ ಹೆಚ್ಚಿಸಿದೆ,
ಕನಿಷ್ಠ 1 ಲಕ್ಷ ಯೂನಿಟ್ ಮೇಲ್ಪಟ್ಟು ಬಳಕೆ ಮಾಡಿದರೆ ಮಾತ್ರ ಅವರಿಗೆ ಇದರ ಉಪಯೋಗವಾಗುತ್ತದೆ. ಆದರೆ ನಮ್ಮಲ್ಲಿ 500 ಯೂನಿಟ್‌ಗಳಿಂದ 30,000 ಯೂನಿಟ್‌ಗಳವರೆಗೆ ವಿದ್ಯುತ್ ಬಳಕೆ ಮಾಡುವಂತಹ ಕೈಗಾರಿಕಾ ಘಟಕಗಳಿಗೆ ಬಹಳಷ್ಟು ಹೊರೆಯಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಟನ್ ಜಿನ್ನಿಂಗ್ ಕಾರ್ಖಾನೆಗಳು ಸೀಜನಲ್ ಇಂಡಸ್ಟ್ರಿಗಳಾಗಿರುವುದರಿಂದ ಹಾಗೂ ವಿದ್ಯುತ್ ಬಳಕೆ ಕಡಿಮೆ ಇರುವುದರಿಂದ ಪ್ರತಿ ಕಿಲೋ ವ್ಯಾಟ್‌ಗೆ ಹೋಲಿಸಿದರೆ ವಿದ್ಯುತ್ ದರದ ಹಣವು ಸಾಕಷ್ಟು ಹೆಚ್ಚಾಗುತ್ತದೆ. ಗೃಹ ಬಳಕೆ, ವಾಣಿಜ್ಯ ಬಳಕೆ ಹಾಗೂ ತಾತ್ಕಾಲಿಕ ವಿದ್ಯುತ್ ಬಳಕೆ ಎಲ್ಲವುಗಳ ಮೇಲೆಯೂ ಪ್ರತಿ ಯೂನಿಟ್‌ಗೆ ಹೆಚ್ಚಿಗೆ ಮಾಡಲಾಗಿದೆ. ವಿದ್ಯುತ್ ದರಗಳನ್ನು ಹೆಚ್ಚಿಸಲಾಗಿದೆ. ಇದರಿಂದ ಸಣ್ಣ ಸಣ್ಣ ಉದ್ಯಮಿದಾರರು ತಮ್ಮ ತಮ್ಮ ಕೈಗಾರಿಕೆಗಳನ್ನು ಮುಚ್ಚುವ ಪರಿಸ್ಥಿತಿ ಒದಗಿ ಬರುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾರತದಲ್ಲಿ ಬೌದ್ಧ ಧರ್ಮ ಮರುಹುಟ್ಟು ಪಡೆಯಬೇಕಿದೆ: ಬಿ ಗೋಪಾಲ್

“ಕೆಲಸ ಮಾಡುವಂತಹ ಉದ್ಯೋಗಿಗಳು ಕೆಲಸವಿಲ್ಲದೇ ಅವರ ಕುಟುಂಬಗಳು ಬೀದಿ ಪಾಲಾಗಿ ತುಂಬಾ ಕಷ್ಟ ಅನುಭವಿಸಬೇಕಾಗುತ್ತದೆ. ನಿರುದ್ಯೋಗ ಸಮಸ್ಯೆಯು ಹೆಚ್ಚಳವಾಗಲಿದೆ. ಕೂಡಲೇ ಜೆಸ್ಕಾಂ ಇಲಾಖೆಯು ಹೆಚ್ಚಿಸಿರುವ ವಿದ್ಯುತ್ ದರಗಳನ್ನು ತಕ್ಷಣವೇ ಹಿಂದಕ್ಕೆ ಪಡೆದು ಕಡಿಮೆ ಮಾಡಿ ಸಣ್ಣ ಸಣ್ಣ ಕೈಗಾರಿಕೋದ್ಯಮಿದಾರರ ಹಿತವನ್ನು ಕಾಪಾಡಬೇಕು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆನಂದರೆಡ್ಡಿ, ಅಮಿನ್ ಪಾಷಾ, ಬಾಷಾ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...