ರಾಯಚೂರು | ಸ್ಲಂಗಳ ಮೂಲ ಸೌಲಭ್ಯಕ್ಕೆ ಅನುದಾನ ಮಂಜೂರು ಮಾಡುವಂತೆ ಆಗ್ರಹ

Date:

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬರುವ ಸ್ಲಂಗಳ ಮೂಲ ಸೌಲಭ್ಯ ಮತ್ತು ಮನೆಗಳ ಕಾಮಗಾರಿಗೆ ಕೆಕೆಆರ್‌ಡಿಬಿಯಲ್ಲಿ ₹1000 ಕೋಟಿ ಅನುದಾನ ಮಂಜೂರು ಮಾಡಲು ಸರ್ಕಾರಕ್ಕೆ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ
ಒತ್ತಾಯಿಸಿದೆ.

ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಮುಖಂಡರು ಸ್ಲಂ ಬೋರ್ಡ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಮಾತನಾಡಿ, “ಪಿಎಂಎವೈ ಯೋಜನೆ ಫಲಾನುಭವಿಗಳಿಗೆ ವಂತಿಕೆ ಹಣ ಒಂದು ಲಕ್ಷ ರೂ. ಸರ್ಕಾರವೇ ಭರಿಸಬೇಕು. ಸರ್ವೇ ನಂ.581,726/727, 929/2 ಭೂಮಿಯನ್ನು ನಗರಸಭೆಯಿಂದ ಸ್ಲಂ ಬೋರ್ಡ್‌ಗೆ ಹಸ್ತಾಂತರಿಸಿ ನಿವೇಶನ ರಹಿತರಿಗೆ 1050 ಮನೆಗಳನ್ನು ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

“ಪಿಎಂಎವೈ ಯೋಜನೆಯ 2770 ಮನೆಗಳ ಮಂಜೂರಿಯಲ್ಲಿ 1000 ಮನೆಗಳ ಕಾಮಗಾರಿಯಲ್ಲಿ ಕೇವಲ 400 ರಿಂದ 450 ಮನೆಗಳು ಪೂರ್ಣಗೊಂಡಿವೆ. ಉಳಿದ ಮನೆಗಳ ಕಾಮಗಾರಿ ಅಪೂರ್ಣಗೊಂಡಿದ್ದರಿಂದ ಸ್ಲಂ ಜನರು ಬೀದಿಯಲ್ಲಿ ಮಳೆಗಾಳಿಯಲ್ಲಿ ವಾಸ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನಿರ್ಲಕ್ಷ್ಯ ವಹಿಸಿದ ಗುತ್ತಿಗೆದಾರರ ವಿರುದ್ದ ಕ್ರಮಕ್ಕೆ ಮುಂದಾಗಬೇಕು. ಸ್ಲಂಗಳಲ್ಲಿ ವಾಸಿಸುವ ಸ್ಲಂ ನಿವಾಸಿಗಳ ಮನೆಗಳಿಗೆ ದಾಖಲೆಗಳು ಇಲ್ಲದೆ ಅಭದ್ರತೆ ಜೀವನ ಸಾಗಿಸುತ್ತಿದ್ದಾರೆ. ಸ್ಲಂ ಜನರು ವಾಸಿಸುವ ಮನೆಗಳಿಗೆ ಹಕ್ಕುಪತ್ರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿ ಯೋಜನೆಯ ಹೆಸರಿನಲ್ಲಿ ಹಣ ವಸೂಲಿ: ಪಿಡಿಒ ಶಂಶುದ್ದೀನ್ ವಿರುದ್ಧ ಆರೋಪ

“ಸರ್ವೇ ನಂ.1403ರಲ್ಲಿ ಆರು ಎಕರೆ ಭೂಮಿಯನ್ನು ರಾಯಚೂರು ಜಿಲ್ಲಾಡಳಿತ ಸ್ಲಂ ಬೋರ್ಡ್‌ಗೆ ಮಂಜೂರು ಮಾಡಿ ಸುಮಾರು ಹತ್ತು ವರ್ಷ ಕಳೆದರೂ ಈವರೆಗೂ ಡಿಪಿಆರ್ ಮಾಡಿಲ್ಲ. ಕೆಲವು ಭೂಗಳ್ಳರು ಕಬ್ಜ ಮಾಡಲು ಮುಂದಾಗಿದ್ದಾರೆ. ಕೂಡಲೇ ಡಿಪಿಆರ್ ಮಾಡಿ ನಿವೇಶನ ಇಲ್ಲದ ಸ್ಲಂ ಜನರಿಗೆ ನಿವೇಶನ ಹಂಚಿಕೆ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಮುಖಂಡರಾದ ಮಹೇಶ, ರಾಜಶೇಖರ್, ಬಸವರಾಜ ಹೊಸೂರು, ಜೆ ರಾಜು, ಶರಣಬಸವರೆಡ್ಡಿ, ಪವನ್, ಮಾಧವರೆಡ್ಡಿ, ಆರ್ ಜಂಬಣ್ಣ ಇದ್ದರು.

ವರದಿ: ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...