ರಾಯಚೂರು | ಹೊರಗುತ್ತಿಗೆ ಕಾರ್ಮಿಕರ ಶಾಸನಬದ್ಧ ಸೌಲಭ್ಯಕ್ಕೆ ಆಗ್ರಹ

Date:

ವಸತಿನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರ ವೇತನ ಸಮಸ್ಯೆ ನಿವಾರಣೆ ಮತ್ತು ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಅಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದಿಂದ ರಾಯಚೂರು ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

ಕಾರ್ಮಿಕರು ಮಾತನಾಡಿ, “ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಬರುವ ವಸತಿ ನಿಲಯಗಳಲ್ಲಿ ಡಿ ಗ್ರೂಪ್ ಹುದ್ದೆಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ವೇತನ ಬಾಕಿ ಸಮಸ್ಯೆ ಬಗೆಹರಿಯದಿರುವ ಹಾಗೂ ಇತರ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಲು ಕೆಲ ತಿಂಗಳ ಹಿಂದೆ ಮನವಿ ಸಲ್ಲಿಸಿದ್ದು, ಜನವರಿ ಅಂತ್ಯದೊಳಗೆ ವೇತನ ಬಾಕಿ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಮತ್ತು ಇತರ ಶಾಸನಬದ್ಧ ಸೌಲಭ್ಯಗಳನ್ನು ಖಾತ್ರಿಪಡಿಸುವ ಬಗ್ಗೆಯೂ ನಡಾವಳಿ ಮಾಡಲಾಗಿತ್ತು. ಆದರೆ ಈವರೆಗೂ ವೇತನ ಬಾಕಿ ಹಾಗೆಯೇ ಇದೆ” ಎಂದರು.

“ಸಮಾಜ ಕಲ್ಯಾಣ ಇಲಾಖೆಯಡಿ ಮಾನ್ವಿ ತಾಲೂಕಿನ ಮೆಟ್ರಿಕ್ ಪೂರ್ವ ಹಾಸ್ಟೆಲ್ ಕಾರ್ಮಿಕರಿಗೆ 5 ತಿಂಗಳು, ಮೆಟ್ರಿಕ್ ನಂತರದ ಹಾಸ್ಟೆಲ್ ಕಾರ್ಮಿಕರಿಗೆ 6 ತಿಂಗಳು ಬಾಕಿಯಿದೆ. ಲಿಂಗಸಗೂರಿನಲ್ಲಿ ಮೆಟ್ರಿಕ್ ಪೂರ್ವ ಹಾ‌ಸ್ಟೆಲ್ ಕಾರ್ಮಿಕರಿಗೆ 7 ತಿಂಗಳು, ಬಿಸಿಎಂ ಹಾಸ್ಟೆಲ್ ಕಾರ್ಮಿಕರಿಗೆ 3 ತಿಂಗಳು ಇನ್ನು ಲಿಂಗಸಗೂರು, ಮಾನ್ವಿ, ರಾಯಚೂರುಗಳ ಎಸ್‌ಟಿ ಹಾಸ್ಟೆಲ್ ಕಾರ್ಮಿಕರಿಗೆ 3ರಿಂದ 4 ತಿಂಗಳ ವೇತನ ಬಾಕಿಯಿದೆ. ಅಲ್ಲದೆ ಪರಿಷ್ಕೃತ ವೇತನದ ಅರಿಯರ್ಸ್ ಪಾವತಿಸಿಲ್ಲ. ಶಾಸನಬದ್ಧ ಸೌಲಭ್ಯಗಳಾದ ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು, ವಾರದ ರಜೆ, ಸಾರ್ವತ್ರಿಕ ರಜೆ ಹಾಗೂ ರಾಷ್ಟ್ರೀಯ ಹಬ್ಬದ ದಿನಗಳಲ್ಲಿ ಕೆಲಸ ಮಾಡಿದ್ದಕ್ಕೆ ದ್ವಿಗುಣ ವೇತನ ಮತ್ತು ವೇತನ ಚೀಟಿ, ಸಮವಸ್ತ್ರ ಮುಂತಾದ ಸೌಲಭ್ಯಗಳನ್ನು ನೀಡುತ್ತಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟರ ನಡುವೆ ಗಲಾಟೆ; ಪ್ರಯಾಣಿಕರು ಹೈರಾಣ

“ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಫೆಬ್ರವರಿ 15ರ ಒಳಗೆ ಸಮಸ್ಯೆಗಳು ಇತ್ಯರ್ಥವಾಗದಿದ್ದಲ್ಲಿ‌ ಗುತ್ತಿಗೆ ಕಾರ್ಮಿಕರೆಲ್ಲರೂ ಒಗ್ಗೂಡಿ ಹೋರಾಟ ನಡೆಸಲಾಗುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಮಹೇಶ ಚೀಕಲಪರ್ವಿ, ಅಮರೇಶ, ಹುಸೇನಪ್ಪ, ಹನುಮಂತ, ಜೋಸೆಫ್, ಮಹೇಶ, ಗೋವಿಂದ ರಾಯ, ನಿತಿನ್ ಕುಮಾರ, ಶೋಭಾ, ಎಸ್ ಕುಮಾರ, ಗೌರಿ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...