ರಾಯಚೂರು | ದೈಹಿಕವಾಗಿ ಹಲ್ಲೆ ಮಾಡಿದ ಪೊಲೀಸರ ಅಮಾನತುಗೊಳಿಸುವಂತೆ ಒತ್ತಾಯ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದ ವಾಲ್ಮೀಕಿ ವೃತ್ತದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಮಾಯಕ ಯುವಕರನ್ನು ಬಂಧಿಸಿದ್ದು, ದೈಹಿಕವಾಗಿ ಹಲ್ಲೆ ಮಾಡಿರುವ ಪೊಲೀಸರ ಅಮಾನತು ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಮನವಿ ಸಲ್ಲಿಸಿದರು.

“ದೇವದುರ್ಗ ತಾಲೂಕಿನ ಗಬ್ಬೂರು ವ್ಯಾಪ್ತಿಯ ಖಾನಾಪುರ ಗ್ರಾಮದಲ್ಲಿ ಜನವರಿ 07ರಂದು ವಾಲ್ಮೀಕಿ ವೃತ್ತಕ್ಕೆ ಧಕ್ಕೆ ಮಾಡಿದ ಕುರಿತು ಮಾದಿಗ ಸಮುದಾಯದ ಇಬ್ಬರನ್ನು ಬಂಧಿಸಿ ದೈಹಿಕವಾಗಿ ಹಲ್ಲೆ ಮಾಡಿದ್ದು, ಪ್ರಕರಣವನ್ನು ತಾವೇ ಮಾಡಿದ್ದಾಗಿ ಒಪ್ಪಿಕೊಳ್ಳಬೇಕೆಂದು ಕಾನ್‌ಸ್ಟೆಬಲ್‌ಗಳಾದ ಹನುಮಂತ ಹಾಗೂ ಬಂದಯ್ಯ ಸ್ವಾಮಿ ಇಬ್ಬರೂ ಸೇರಿ ಯುವಕರನ್ನು ಬೆದರಿಸಿದ್ದಾರೆ. ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಪೊಲೀಸರು ಎಂದು ಆರೋಪಿಸಿದರು.

“ಸಿಡಿಆರ್ ವರದಿಯಂತೆ 14 ಜನರ ಮೇಲೆ ಮೊಬೈಲ್ ಸಂಖ್ಯೆಗಳು ಕಂಡುಬಂದಿವೆ. ಆದರೆ ಇಬ್ಬರನ್ನು ಬಂಧಿಸಿ ಇನ್ನು 12 ಜನರನ್ನು ಬಂಧಿಸಿಲ್ಲ. ಯಾವುದೇ ಕ್ರಮ ಕೈಗೊಂಡಿಲ್ಲ, ತನಿಖೆ ನಡೆಸಿಲ್ಲ. ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸಿ ತನಿಖೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಾಲುಮತ ಸಮಾಜಕ್ಕೂ ವಾಲ್ಮೀಕಿ ಸಮಾಜದವರಿಗೂ ಬಹಳ ವರ್ಷಗಳಿಂದ ದ್ವೇಷ ಇದೆ. ಇಷ್ಟೇ ಅಲ್ಲದೆ ನಾಯಕ ಜನಾಂಗದವರಿಗೆ ಈಗಾಗಲೇ ವೃತ್ತವನ್ನು ಬೇರೆ ಬೇರೆ ರೀತಿಯಲ್ಲಿ ಬದಲಾಯಿಸಬೇಕಾದ ಕಾರಣ ಹೆಚ್ಚಿನ ಕಾಮಗಾರಿ ಮಾಡುವುದಕ್ಕಾಗಿ ಸಾಮಗ್ರಿಗಳನ್ನು ಹಾಕಿದ್ದರು. ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಎರಡೂ ಜನಾಂಗದವರನ್ನು ಬಿಟ್ಟು, ಉದ್ದೇಶ ಪೂರ್ವಕವಾಗಿ ಅಮಾಯಕರಾದ ಮಾದಿಗ ಯುವಕರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಪೊಲೀಸರಿಂದಲೇ ದೌರ್ಜನ್ಯ; ಚಿನ್ನ-ಬೆಳ್ಳಿ ವ್ಯಾಪಾರಸ್ಥರ ಸಂಘದಿಂದ ಪ್ರತಿಭಟನೆ

“ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಕ್ರಮ ಜರುಗಿಸಿ ಹಾಗೂ ದೈಹಿಕವಾಗಿ ಹಲ್ಲೆ ಮಾಡಿರುವ ಇಬ್ಬರು ಪೊಲೀಸರನ್ನು ಅಮಾನತು ಮಾಡಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಶಾಂತಕುಮಾರ ಹೊನ್ನಟಗಿ, ಎಂ ಆರ್ ಭೇರಿ, ಮುತ್ತುರಾಜ್, ಬಸವರಾಜ್, ನಾಗಪ್ಪ, ರಮೇಶ್ ಖಾನಾಪುರ, ಮಲ್ಲಯ್ಯ ಖಾನಾಪುರ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...