ರಾಯಚೂರು | ರಿಮ್ಸ್‌ ನಿರ್ದೇಶಕನ ಅಮಾನತಿಗೆ ಆಗ್ರಹ; ದಸಂಸ ಧರಣಿ

Date:

  • 15 ರಿಂದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ವರ್ಗಾವಣೆ ಮಾಡಿ
  • 300 ಹಾಸಿಗೆಗಳ ಆಸ್ಪತ್ರೆ ಉದ್ಘಾಟನೆಯಾದರೂ ಮೂಲ ಸೌಕರ್ಯ ಒದಗಿಸಿಲ್ಲ

ರಿಮ್ಸ್ ಅಸ್ಪತ್ರೆಯಲ್ಲಿ 15 ರಿಂದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ಮತ್ತು ಅನುದಾನ ದುರ್ಬಳಕೆ ಮಾಡಿ, ಕರ್ತವ್ಯ ಲೋಪ ಎಸಗಿದ ರಿಮ್ಸ್ ನಿರ್ದೇಶಕ ಹಾಗೂ ಆಡಳಿತಾಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಧರಣಿ ನಡೆಸಿದರು.

ಸರ್ಕಾರ ನಿಗಧಿಪಡಿಸಿದಂತೆ ಸಮಯಕ್ಕೆ ಸರಿಯಾಗಿ ವೈದ್ಯರು ರೋಗಿಗಳಿಗೆ ಆರೈಕೆ ಮತ್ತು ಗುಣಮಟ್ಟದ ಚಿಕಿತ್ಸೆ ಮತ್ತು ಅವರ ಕರ್ತವ್ಯ ಸಮಯ ಕಡ್ಡಾಯವಾಗಿ ಪಾಲನೆ ಆಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸುಮಾರು 15 ರಿಂದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಕೂಡಲೇ ಬೇರೆಕಡೆಗೆ ವರ್ಗಾವಣೆ ಮಾಡಬೇಕು. ರಿಮ್ಸ್ ನಿರ್ದೇಶಕ ಡಾ. ಬಸವರಾಜ ಮೀರಾಪೂರ ಅವರ ಅವಧಿಯಲ್ಲಿ ಮೂಲ ಸೌಕರ್ಯ ಒದಗಿಸಲು ಬಂದ ಅನುದಾನವು ಸಂಪೂರ್ಣವಾಗಿ ದುರ್ಬಳಕೆಯಾಗಿದ್ದು, ಈ ಬಗ್ಗೆ ಕೂಡಲೇ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕ ಹಿತಾದೃಷ್ಟಿಯಿಂದ ಪ್ರತಿ ತಿಂಗಳಿಗೆ ಎರಡು ಬಾರಿ ಜಿಲ್ಲಾಧಿಕಾರಿಗಳು ಖುದ್ದಾಗಿ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಬೇಕು. ವೈದ್ಯರು ಕೆಲವೊಂದು ಔಷಧಿಗಳನ್ನು ಮತ್ತು ರಕ್ತ ಪರೀಕ್ಷೆಗಳನ್ನು ಮಾಡಿಸಲು ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರೋಗಿಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೆಚ್ಚಿನ ಚಿಕಿತ್ಸೆಯ ಸಲುವಾಗಿ ಸಾಗಿಸಲು ಆಂಬುಲೆನ್ಸ್‌ ಹಾಗೂ ಶವ ಸಾಗಿಸಲು ಕಪ್ಪು ಅಂಬುಲೆನ್ಸ್‌ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಹೊಸದಾಗಿ 300 ಹಾಸಿಗೆಗಳ ಆಸ್ಪತ್ರೆ ಉದ್ಘಾಟನೆಯಾದರೂ ಇದಕ್ಕೆ ಮೂಲ ಸೌಕರ್ಯ ಇಲ್ಲ. ಇದುವರೆಯಾದರೂ ಸಿಬ್ಬಂದಿ ನೇಮಕಾತಿ ಮಾಡಿಕೊಂಡಿಲ್ಲ ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಸುಳ್ಳು ಸುದ್ದಿಗೆ, ವದಂತಿಗೆ ಕಡಿವಾಣ ಹಾಕಲು ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

ಆಸ್ಪತ್ರೆಯ ಮೂಲ ಸೌಕರ್ಯ ಮತ್ತು ಸ್ವಚ್ಛತೆ ಏಜನ್ಸಿಯ ವಿರುದ್ಧ ಕ್ರಮ ಜರುಗಿಸಿ, ಕೂಡಲೇ ಏಜನ್ಸಿ ಬದಲಾವಣೆ ಮಾಡಬೇಕು. ರಾತ್ರಿ ಸಮಯದ ಆಯಾ ವಾರ್ಡ್‌ಗಳಲ್ಲಿ ವೈದ್ಯರು ಕಡ್ಡಾಯವಾಗಿ ಕರ್ತವ್ಯದಲ್ಲಿ ಇರುವಂತೆ ಸೂಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಎಸ್ ನರಸಿಂಹಲು, ಹನುಮೇಶ ಅರೋಲಿ, ಜಂಬಯ್ಯ, ಎಂ ಡಿ ಬಾಬು, ಜಿ ನರಸಿಂಹ, ನಾಗೇಂದ್ರ, ಜಲಾಲ್, ವಿಜಯ ಕುಮಾರ ಹಾಗೂ ಇತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...