ರಾಯಚೂರು | ತುಂಗಭದ್ರ ಎಡದಂಡೆ ನಾಲೆಯ ಕೊನೆಯ ಭಾಗಕ್ಕೆ ನೀರು ಹರಿಸಲು ಆಗ್ರಹ

Date:

ತುಂಗಭದ್ರ ಎಡದಂಡೆ ನಾಲೆಯ ಕೊನೆ ಭಾಗಕ್ಕೆ (ಮೈಲ್ 121ರಿಂದ 141) ಹತ್ತಾರು ವರ್ಷಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಕಾಲುವೆಗಳು ಮುಚ್ಚಿಹೋಗುವ ಸ್ಥಿತಿಯಿವೆ. ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರು ಸರ್ಕಾರದ ಮೇಲೆ ಒತ್ತಡ ಹಾಕುವ ಮೂಲಕ ಕಾಲುವೆ ಅಧುನೀಕರಣಕ್ಕೆ ಮುಂದಾಗಬೇಕು ಎಂದು ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ.

ಮಂಗಳವಾರ ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್‌ ಗ್ರಾಮೀಣ ಘಟಕದ ಅಧ್ಯಕ್ಷ ನಿಜಾಮುದ್ದೀನ್, “ಈ ಹಿಂದೆ ಮುನಿಯಪ್ಪ ಮುದ್ದಪ್ಪನವರು ನೀರಾವರಿ ಸಚಿವರಾಗಿದ್ದಾಗ 2008ರಲ್ಲಿ ಈ ಭಾಗಕ್ಕೆ ನೀರು ಬಂದಿತ್ತು. ನಂತರ ಬಂದ ಎಲ್ಲಾ ಸರ್ಕಾರಗಳು ಕೊನೆಭಾಗದ ರೈತರಿಗೆ ನೀರು ಪೂರೈಕೆ ಮಾಡುವಲ್ಲಿ ವಿಫಲವಾಗಿವೆ” ಎಂದು ಕಿಡಿಕಾರಿದ್ದಾರೆ.

“ನಾಲೆಯ ಕೊನೆಯ ಭಾಗದ 38,000 ಎಕರೆ ಕೃಷಿ ಭೂಮಿಗೆ ನಿರುಣಿಸುವ ತುಂಗಭದ್ರ ಎಡದಂಡೆ ಕಾಲುವೆಯ ಮೇಲೆ 48 ಗ್ರಾಮಗಳು, 10,000 ಕುಟುಂಬಗಳು ಅವಲಂಬಿತವಾಗಿವೆ. ನೀರಾವರಿ ನಿಗಮದ ಬೇಜವಬ್ದಾರಿ ಹಾಗೂ ಚುನಾಯಿತಿ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಈ ಭಾಗದ ಜನರು ನೀರಿನಿಂದ ವಂಚಿತವಾಗುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮೀಣ ಶಾಸಕರು ಚುನಾವಣೆಯಲ್ಲಿ ಕ್ಷೇತ್ರವನ್ನು ನೀರಾವರಿ ಮಾಡುವದಾಗಿ ಭರವಸೆ ನೀಡಿದ್ದರು. ಆದರೆ, ಕಾಲುವೆ ಅಧುನೀಕರಣ ಕಾಮಗಾರಿ ಕುರಿತು ಸರ್ಕಾರದ ಮೇಲೆ ಒತ್ತಡ ಹಾಕಿ ಬಜೆಟ್‌ನಲ್ಲಿ ಅನುದಾನ ಕಾಯ್ದಿರಿಸುವಲ್ಲಿ ವಿಫಲರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ದದ್ದಲ್ ಬಸನಗೌಡರು ಸದನದಲ್ಲಿ ಕ್ಷೇತ್ರದ ನೀರಾವರಿ ಸಮಸ್ಯೆ ಕುರಿತು ಮಾತನಾಡಿಲ್ಲ. ಅವರದೇ ಸರ್ಕಾರದ ಅಧಿಕಾರದಲ್ಲಿದ್ದರೂ, ಅವರು ಕೇವಲ ಗುದ್ದಲಿ ಪೂಜೆ ಮಾತ್ರ ಸೀಮಿತವಾಗಿದ್ದಾರೆ. ಮೂರು ತಿಂಗಳೊಳಗೆ ಸರ್ಕಾರದಿಂದ ಭರವಸೆ ದೊರೆತರೆ ಪಕ್ಷಾತೀತವಾಗಿ ಶಾಸಕರನ್ನು ಸನ್ಮಾನಿಸಿ, ಮೆರವಣಗೆ ಮಾಡುತ್ತೇವೆ. ಇಲ್ಲದೇ ಹೋದಲ್ಲಿ ಅವರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಲಕ್ಷಣಭಂಡಾರಿ, ಗುಜ್ಜಲ್ ತಾಯಪ್ಪ, ಬಡೇಸಾಬ, ವಹೀದ ಪಾಷಾ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...