ರಾಯಚೂರು | ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಿಸುವಂತೆ ಆಗ್ರಹ

Date:

ರಾಯಚೂರು ಜಿಲ್ಲೆಯಲ್ಲಿ ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಟಿಪ್ಪರ್ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

“ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳ ಅನ್ಯಾಯ ಧೋರಣೆ ಮತ್ತು ವೈಯಕ್ತಿಕ ಪ್ರತಿಷ್ಠೆಯಿಂದಾಗಿ ರಾಯಲ್ಟಿ ಆಧಾರಿತ ಮರಳು ಸಾಗಾಣಿಕೆಯನ್ನೇ ಉಪ ಜೀವನವನ್ನಾಗಿಸಿಕೊಂಡ ನೂರಾರು ಟಿಪ್ಪರ್ ಮಾಲೀಕರು, ಚಾಲಕರ ಬದುಕು ಬೀದಿಗೆ ಬರುವಂತಾಗಿದೆ. ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿರುವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಜಿಲ್ಲೆಗೆ ನೆಪ ಮಾತ್ರಕ್ಕೆ ಮಾತ್ರ ಉಸ್ತುವಾರಿ ಸಚಿವರಾಗಿದ್ದು, ನಮ್ಮ ಸಮಸ್ಯೆಗಳನ್ನೇ ಆಲಿಸದ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ಸಕಾರಣವಿಲ್ಲದೇ ಕಳೆದ 6 ತಿಂಗಳಿಂದ ಕಾನೂನಾತ್ಮಕ ಮರಳು ಸಾಗಾಣಿಕೆಗೆ ನಿರ್ಬಂಧವೇರಿರುವುದು ಸಮಂಜಸವಲ್ಲದ ನಿರ್ಧಾರವಾಗಿದೆ” ಎಂದು ದೂರಿದರು.

“ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಕಟ್ಟಡ, ಸೇತುವೆ, ಬ್ರಿಡ್ಜ್, ಪ್ರಮುಖ ರಸ್ತೆಗಳು ಸಾರ್ವಜನಿಕ ಮನೆ ನಿರ್ಮಾಣ ಸೇರಿ ಇತರೆ ಮೂಲಸೌಕರ್ಯಗಳ ಕಾಮಗಾರಿಗೆ ಮರಳು ಪೂರೈಕೆ ಅನಿವಾರ್ಯವಾಗಿದ್ದು, ಮರಳು ಸಾಗಾಣಿಕೆಯನ್ನೇ ಅವಲಂಬಿಸಿ ಸಾಲಮಾಡಿ ಖರೀದಿಸಿರುವ ಕಂತು ಕಟ್ಟಲಾಗದ ಸ್ಥಿತಿಯ ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಟಿಪ್ಪರ್ ಮಾಲೀಕರು ಬೇಸತ್ತಿದ್ದು, ಬರಗಾಲ ಭೀಕರತೆಯಲ್ಲಿ ಚಾಲಕರ ಕುಟುಂಬಗಳ ಬದುಕು ಬೀದಿಗೆ ಬರುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಲಬುರಗಿ ಸೇರಿದಂತೆ ಸೇಡಂ, ಚಿತ್ತಾಪುರ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಮರಳುಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಮಾತ್ರ ನಮ್ಮ ಹಕ್ಕಾಗಿರುವ ರಾಯಲ್ಟಿ ಆಧಾರಿತ ಮರಳು ಸಾಗಾಣಿಕೆಗೆ ನಿರ್ಬಂಧವೇರಿರುವುದು ಖಂಡನೀಯ” ಎಂದರು.

ಕಳೆದ 6 ತಿಂಗಳಿಂದ ಜಿಲ್ಲಾದ್ಯಂತ ಜಲ್ಲಿ ಕ್ರಷರ್, ಮಣ್ಣು ಮತ್ತು ಮರಳು ಸಾಗಾಣಿಕೆಗೆ ಪ್ರತ್ಯಕ್ಷ ಸಹಕರಿಸಿ, ಪ್ರತ್ಯಕ್ಷವಾಗಿ ಕಣ್ಮರೆಯಾಗುವ ಉಸ್ತುವಾರಿ ಸಚಿವರು, ಕನಿಷ್ಟಪಕ್ಷ ಕಾನೂನಾತ್ಮಕ ಮರಳು ಸಾಗಾಣಿಕೆ ಸಭೆಗೆ ಯಾವುದೇ ಮುತುವರ್ಜಿ ವಹಿಸದೇ ಕಲಬುರಗಿ ಜಿಲ್ಲೆಯ ಮರಳು ಸಾಗಾಣಿಕೆಗೆ ಬೆಣ್ಣೆ, ರಾಯಚೂರು ಜಿಲ್ಲೆಗೆ ಸುಣ್ಣ ಎನ್ನುವ ಧೋರಣೆ ಅನುಸರಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹಲವು ವರ್ಷಗಳಿಂದಲೂ ಮರಳು ಸಾಗಾಣಿಕೆಯ ರಾಜಧನ ಮತ್ತು ಕೋಟ್ಯಂತರ ತೆರಿಗೆ ಸಂಗ್ರಹದಲ್ಲಿ ರಾಜ್ಯದಲ್ಲಿಯೇ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಕಳೆದ 6 ತಿಂಗಳಿಂದ ಜಿಲ್ಲೆಯಲ್ಲಿ ಮರಳು ಸಾಗಾಣಿಕೆ ನಿರ್ಬಂಧ ಹಿನ್ನೆಲೆ ಜಿಲ್ಲಾಡಳಿತಕ್ಕೆ ಸಂದಾಯವಾಗಬೇಕಿದ್ದ ಕೋಟ್ಯಂತರ ತೆರಿಗೆ ಹಣ ನಷ್ಟವಾಗುವಂತಾಗಿದೆ. ಪ್ರಗತಿ ಹಂತದ ಕಾಮಗಾರಿ ನಿರ್ಮಾಣಕ್ಕಾಗಿ ಜಿಲ್ಲಾಡಳಿತದಿಂದ ಮರಳು ಸಾಗಾಣಿಕೆ ಮಾಡಲು ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಯಲ್ಲಿ ಪ್ರತ್ಯೇಕ 3 ಕ್ವಾರಿಗಳ ನಿರ್ವಹಣೆಗೆ ಜಿಲ್ಲಾಡಳಿತ ಪರವಾನಗಿ ನೀಡಿದ್ದಾರೆ” ಎಂದರು.

“ನಿರ್ದಿಷ್ಟ ಕಾರಣಗಳಿಲ್ಲದೇ ಮರಳು ಸಾಗಾಣಿಕೆಗೆ ಜನಪ್ರತಿನಿಧಿಗಳ ಮೌಖಿಕ ನೆಪ ಹೇಳಿ ಅವಕಾಶ ಕಲ್ಪಿಸದಿರುವುದು ಅತ್ಯಂತ ಖೇದಕರವಾಗಿದ್ದು, ಜಿಲ್ಲಾಡಳಿತ ಈ ಕೂಡಲೇ ಎಚ್ಚೆತ್ತು, ಟಿಪ್ಪರ್ ಮಾಲೀಕರ ಸಮಸ್ಯೆಗಳಿಗೆ ಸಕಾರಾತ್ಮಕ ಸ್ಪಂದಿಸಿ ಕಾನೂನಾತ್ಮಕವಾಗಿ ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಧೋರಣೆ ಖಂಡಿಸಿ ರಸ್ತೆಯುದ್ದಕ್ಕೂ ಟಿಪ್ಪರ್ ನಿಲುಗಡೆ ಮಾಡಿ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕಾಂಗ್ರೆಸ್‌ ಮುಖಂಡನ ಮೇಲೆ ಗುಬ್ಬಿ ಶಾಸಕ ಶ್ರೀನಿವಾಸ್ ಹಲ್ಲೆ; ಪ್ರಕರಣ ದಾಖಲು

ಈ ಸಂದರ್ಭದಲ್ಲಿ ಅಧ್ಯಕ್ಷ ಕೆ ಸಿ ಅಣ್ಣಯ್ಯ, ಉಪಾಧ್ಯಕ್ಷ ಶಿವಮೂರ್ತಿ ಮಾಲೀ ಪಾಟೀಲ್, ಅಶೋಕ ಪೋತಗಲ್, ಪ್ರಸಾದ್, ವಿನೋದರೆಡ್ಡಿ, ರಾಮನಗೌಡ, ಆಂಜನೇಯ, ಶೇಖರ್, ಮಧು ಪಾಟೀಲ್, ಶಿವನಗೌಡ, ರವಿ, ಪ್ರಕಾಶ, ಹನುಮಂತ್ರಾಯ, ಶಿವರಾಜ, ರಾಜೇಶ, ಲಕ್ಷ್ಮಿಕಾಂತರೆಡ್ಡಿ, ಶಶಿಕುಮಾರ್ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...