ರಾಯಚೂರು | ಕೆರೆ ಅಭಿವೃದ್ಧಿಗೆ ಸರ್ವೆ ಕಾರ್ಯ; ಸುತ್ತಮುತ್ತಲ ಬಡವರಿಗೆ ವಸತಿ ಕಲ್ಪಿಸಲು ಒತ್ತಾಯ

Date:

ರಾಯಚೂರು ನಗರದ ಮೀರಾಬಾಯಿ ಕುಂಟಾದಲ್ಲಿನ ಕೆರೆ ಅಭಿವೃದ್ಧಿಗಾಗಿ ಸರ್ವೆ ಕಾರ್ಯ ಕೈಗೊಂಡಿದ್ದು, ಇದರಿಂದ ಕೆರೆ ಸುತ್ತಮುತ್ತಲಿನ ನಿವಾಸಿಗಳಿಗೆ ಆತಂಕ ಎದುರಾಗಿದೆ. ಸ್ಥಳೀಯ ನಿವಾಸಿಗಳಿಗೆ ವಸತಿ ಸೌಕರ್ಯ ಕಲ್ಪಿಸಿ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು ಎಂದು ಜನಾಂದೋಲನ ಸಂಘಟನೆಯ ಅಧ್ಯಕ್ಷ ಯು ಆಂಜನೇಯ ಒತ್ತಾಯಿಸಿದರು.

“ನಗರದಲ್ಲಿರುವ ಕೆರೆಗಳ ಅಭಿವೃದ್ಧಿಗಾಗಿ ಈಚೆಗೆ ಸಣ್ಣ ನೀರಾವರಿ ಇಲಾಖೆಯಿಂದ ಸರ್ವೆ ಕಾರ್ಯ ಕೈಗೊಂಡಿರುವುದರಿಂದ ಬಡವರು, ದೀನದಲಿತರು, ನಿರ್ಗತಿಕರು, ಹಿಂದುಳಿದ ವರ್ಗದವರು ಹಾಗೂ ಅಲ್ಪಸಂಖ್ಯಾತರಿಗೆ ಭೀತಿ ಶುರುವಾಗಿದೆ. ಬಹುತೇಕ ನಿವಾಸಿಗಳಿಗೆ ನಗರಸಭೆಯಿಂದ ಕೆರೆ ಪ್ರದೇಶದಲ್ಲಿ ಸಣ್ಣ ನಿವೇಶನಗಳನ್ನು ಹಂಚಿಕೆ ಮಾಡಿ ವಾಸಿಸಲು ಸಹಕರಿಸಲಾಗಿದೆ. ಆದ್ದರಿಂದ ಸರ್ಕಾರದ ವಸತಿ ಯೋಜನೆ ಮತ್ತು ಕರ್ನಾಟಕ ಗೃಹ ಮಂಡಳಿಯಿಂದ ಸ್ಥಳಾಂತರಿಸಿ ವಸತಿ ಸೌಲಭ್ಯ ಒದಗಿಸಬೇಕು” ಎಂದು ಆಗ್ರಹಿಸಿದರು.

“ಈಗಾಗಲೇ ಮಾವಿನಕೆರೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಅದೇ ರೀತಿಯಲ್ಲಿ ಸರ್ವೆ ನಂ.22/1ರಲ್ಲಿ 11 ಎಕರೆ 09 ಗುಂಟೆ ಹಾಗೂ ಸರ್ವೆ ನಂ22/2ರಲ್ಲಿ 5ಎಕರೆಯಲ್ಲಿರುವ ಮೀರಾಬಾಯಿ ಕುಂಟಾ(ಕೆರೆ)ದ ಸರ್ವೆ ಕಾರ್ಯಕೈಗೊಂಡಿದ್ದು, ಎಫ್‌ಟಿಎಲ್ ಹಾಗೂ ಬಫರ್ ಜೋನ್ ಒಳಗಿರುವ ಎಲ್ಲ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಿ ಪ್ರದೇಶ ಸ್ವಾಧೀನಪಡೆಸಿಕೊಳ್ಳುವ ಬಗ್ಗೆ ಯಕ್ಷ ಪ್ರಶ್ನೆ ಮೂಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಒಳಮೀಸಲಾತಿ ಜಾರಿ ಆಗುವವರೆಗೆ ಗೃಹ ಇಲಾಖೆ ನೇಮಕಾತಿ ಮುಂದೂಡಲು ಡಿಎಸ್‌ಎಸ್ ಒತ್ತಾಯ

“ಕೆರೆ ಪ್ರದೇಶದಲ್ಲಿ ವಾಸಿಸುವ ಬಡವರಿಗೆ ಆಧ್ಯತೆ ಮೇರೆಗೆ ವಸತಿ ಕಲ್ಪಿಸಿಕೊಡಬೇಕು. ಅಲ್ಲದೇ ಉಳ್ಳವರು ಕೆರೆ ಒತ್ತುವರಿ ಮಾಡಿಕೊಂಡು ನಿರ್ಮಿಸಿದ ಕಟ್ಟಡಗಳನ್ನು ನೆಲಸಮ ಮಾಡಿ ಸ್ವಾಧೀನಪಡಿಸಿಕೊಂಡರೆ, ಸಾಮಾಜಿಕ ನ್ಯಾಯ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಪದಾಧಿಕಾರಿಗಳಾದ ತಿಮ್ಮಾರೆಡ್ಡಿ, ನಲ್ಲಾರೆಡ್ಡಿ, ವೆಂಕಟೇಶ ಸಾಗರ, ಎಸ್ ಕೆ ನಾಗರೆಡ್ಡಿ, ಸಿ ಬಿ ವೀರೇಶ, ಬಿ ಈರಣ್ಣ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...