ರಾಯಚೂರು | ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡಲು ಒತ್ತಾಯ

Date:

ರಾಜ್ಯ ಸರ್ಕಾರ ಒಳಮೀಸಲಾತಿ ಕುರಿತಾಗಿ ಪರಿಶಿಷ್ಟ ಜಾತಿಗಳಿಗೆ ಶೇ.17ರಷ್ಟು ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7ರಷ್ಟು ಮೀಸಲಾತಿ ನಿಗದಿಪಡಿಸಿ ಕೇಂದ್ರಕ್ಕೆ ಪರಿಷ್ಕೃತ ಶಿಫಾರಸು ರವಾನಿಸಬೇಕು ಎಂದು ಸಮಾಜಿಕ ನ್ಯಾಯಕ್ಕಾಗಿ ಎಸ್‌ಸಿ ಒಳಮೀಸಲಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್ ಮಾರೆಪ್ಪ ಆಗ್ರಹಿಸಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರ ಮುಂಗಾರು ಅಧಿವೇಶನದಲ್ಲಿಯೇ 9ನೇ ಶೆಡ್ಯೂಲ್‌ಗೆ ಸೇರ್ಪಡೆ ಹಾಗೂ ಸಂವಿಧಾನ ಪರಿಚ್ಛೇದ 341(3)ಕ್ಕೆ ತಿದ್ದುಪಡಿ ತರಬೇಕು” ಎಂದು ಆಗ್ರಹಿಸಿದರು.

“ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಲು ಹಿಂದಿನ ಬಿಜೆಪಿ ಸರ್ಕಾರ ಕೇಂದ್ರಕ್ಕೆ ಮಾಡಿರುವ ಶಿಫಾರಸು ಪರಿಷ್ಕರಣೆಗೆ ಒಳಪಡಿಸಲಾಗಿದೆ. ರಾಜ್ಯ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿದ್ದು, ವಿಧಾನಮಂಡಲದಲ್ಲಿಯೇ ಪರಿಷ್ಕೃತ ಶಿಫಾರಸು ಕೇಂದ್ರಕ್ಕೆ ರವಾನಿಸಲು ಮುಂದಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ನಾಯಕರುಗಳಾದ ಬಿ ಎಲ್ ಸಂತೋಷ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಬಹುತೇಕ ನಾಯಕರು ಸಂಸತ್‌ನಲ್ಲಿ ಮಂಡಿಸಿ ಸಂವಿಧಾನಕ್ಕೆ ತಿದ್ದುಪಡಿ ತರುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ 9ನೇ ಶೆಡ್ಯೂಲ್‌ಗೆ ಸೇರ್ಪಡೆಗೆ ತೀರ್ಮಾನ ಮಾಡಬೇಕು” ಎಂದು ಆಗ್ರಹಿಸಿದರು.

“ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರು ಎಸ್‌ಸಿ ಒಳಮೀಸಲಾತಿ ನೀಡಿದ್ದರಿಂದಲೇ ಪಕ್ಷಕ್ಕೆ ಸೋಲಾಯಿತೆಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದು ತಪ್ಪು. ಸ್ವಯಂಕೃತ ಅಪರಾಧಗಳಿಂದಲೇ ಬಿಜೆಪಿಗೆ ಸೋಲಾಗಿದೆ” ಎಂದು ಹೇಳಿದರು.

“ಬಂಜಾರ ಸಮುದಾಯವದರು ಒಳಮೀಸಲು ವಿರೋಧಿಸಿದ್ದರಿಂದ ಬಿಜೆಪಿ ಸೋಲಾಗಿದೆಯೆಂದು ಹೇಳುತ್ತಿದ್ದಾರೆ. ಬಿಜೆಪಿಯಿಂದ ಬಂಜಾರ ಸಮುದಾಯದ ಐದು ಮಂದಿ ಶಾಸಕರು ಗೆಲವು ಸಾಧಿಸಿದ್ದಾರೆ. ಇದೇ ಬಂಜಾರ ಸಮುದಾಯ ಬಿಜೆಪಿಯನ್ನು ಬೆಂಬಲಿಸಿದೆ ಎಂಬುದಕ್ಕೆ ನಿದರ್ಶನವಾಗಿದೆ” ಎಂದರು.

“ಕಾಂಗ್ರೆಸ್ ಸರ್ಕಾರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಜಾರಿಗೊಳಿಸುವದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಆದರೆ ಹಿಂದಿನ ಬಿಜೆಪಿ ಸರ್ಕಾರ ಈಗಾಗಲೇ ಎಸ್‌ಸಿ/ಎಸ್‌ಟಿ  ಸಮೂದಾಯಗಳಿಗೆಮೀಸಲಾತಿ ಹೆಚ್ಚಿಸಿ ಶಿಫಾರಸು ಮಾಡಿದೆ. ಕೆಲ ನ್ಯೂನತೆಗಳಿದ್ದು, ಸರಿಪಡಿಸಿ ಪರಿಷ್ಕೃತ ಶಿಫಾರಸಿಗೆ ಮುಂದಾಗಬೇಕು” ಎಂದು ಆಗ್ರಹಿಸಿದರು.

“ಈಗಾಗಲೇ ನಿಗದಿಪಡಿಸಲಾದ ಅನುಪಾತದಡಿ ಎಸ್‌ಇಪಿ, ಟಿಎಸ್‌ಪಿ ಅನುದಾನ ನಿಗದಿಗೊಳಿಸಿ ಆದೇಶಿಸಬೇಕು. ಮೋಚಿ, ಸಮಗಾರ, ಡೋಹರ್ ಸಮುದಾಯಗಳಿಗೆ ಪ್ರತ್ಯೇಕ ಅಭಿವೃದ್ದಿ ನಿಗಮ ಸ್ಥಾಪಿಸುವುದು, ಎಸ್‌ಸಿಪಿ ಕಾಯಿದೆ ಕಲಂ 7ರಡಿ ರದ್ದುಗೊಳಿಸಿ ಬಂಜಾರ ಸಮುದಾಯ ದಾಖಲಿಸಿರುವ ಉಚ್ಛ ನ್ಯಾಯಾಲಯ ಪ್ರಕರಣವನ್ನು ರಾಜ್ಯ ಸರ್ಕಾರ ವಿರೋಧಿಸಬೇಕು” ಎಂದು ಒತ್ತಾಯಿಸಿದರು.

“ಸಂಸತ್ ಅಧಿವೇಶನ ಮುಂದಿನ ತಿಂಗಳ 11 ರಿಂದ 21 ವರೆಗೆ ಮುಂಗಾರ ಅಧಿವೇಶನ ಪ್ರಾರಂಭವಾಗಲಿದ್ದು, ಜುಲೈ ಅಂತ್ಯಕ್ಕೆ ರಾಜ್ಯದ ಎಲ್ಲ ಸಂಸದರ ಮನೆಗಳ ಮುಂದೆ ಧರಣಿ ನಡೆಸಿ ಸಂವಿಧಾನಕ್ಕೆ ತಿದ್ದುಪಡಿ ತರಲು ಆಗ್ರಹಿಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್‌ಸಿ/ಎಸ್‌ಟಿ ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸಲು ಆಗ್ರಹ

ಛಲವಾದಿ ಮಹಾಸಭಾ ಅಧ್ಯಕ್ಷ ರವೀಂದ್ರನಾಥ ಪಟ್ಟಿ ಮಾತನಾಡಿ, “ಮಾಧಸ್ವಾಮಿ ನೇತೃತ್ವದ ಉಪ ಸಮಿತಿ ನೀಡಿರುವ ವರದಿಯಂತೆ ಹೊಲೆಯ, ಮಾಲಾ ಜಾತಿಗಳನ್ನು ಅಲೆಮಾರಿ ಪಟ್ಟಿಗೆ ಸೇರ್ಪಡೆ ಮಾಡಿರುವದನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಛಲವಾದಿ ಸಮುದಾಯದ ಉಪಜಾತಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಬದಲ್ಲಿ ರಾಜ್ಯ ಸಂಚಾಲಕ ಜೆ ಬಿ ರಾಜು, ಹೇಮರಾಜ ಅಸ್ಕಿಹಾಳ, ರಾಘವೇಂದ್ರ ಬೋರೆಡ್ಡಿ, ಜಂಬಣ್ಣ, ನರಸಪ್ಪ, ಎಂ ಈರಣ್ಣ, ಹನುಮಂತಪ್ಪ ಮನ್ನಾಪುರು, ಆಂಜಿನೇಯ ಉಟ್ಕೂರು ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...