ರಾಯಚೂರು | ಅಕ್ರಮ ಆಸ್ತಿ ಪತ್ತೆ; ಜಿಲ್ಲಾ ಪಂಚಾಯತ್ ಲೆಕ್ಕ ಸಹಾಯಕನ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ

Date:

ಜಿಲ್ಲಾ ಪಂಚಾಯತ ಲೆಕ್ಕಶಾಖೆಯ ಲೆಕ್ಕ ಸಹಾಯಕರಾಗಿ (ಓಓಡಿ) ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಗ್ ರಾವ್ ಗುಜ್ಜರ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಗಳಿಸಿರುವುದು ಕಂಡುಬಂದಿದ್ದು ತಕ್ಷಣವೇ ಕೆಲಸದಿಂದ ಅಮಾನತುಗೊಳಿಸಿ ಎಂದು ದಲಿತ ಸೇನೆ ಸಂಘಟನೆಯವರು ಒತ್ತಾಯಿಸಿದರು.

ಆದಾಯಕ್ಕಿಂತ ಶೇ.89.41 ರಷ್ಟು ಅಕ್ರಮ ಆಸ್ತಿ ಪತ್ತೆಯಾಗಿದೆ. ಸುಮಾರು 55 ಲಕ್ಷ ರೂ.ಗಳ ಚರ-ಸ್ಥಿರ ಆಸ್ತಿ ಅಕ್ರಮವಾಗಿ ಗಳಿಸಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣ ಕರ್ತವ್ಯದಿಂದ ಅಮಾನತ್ತುಗೊಳಿಸುವಂತೆ ಸರ್ಕಾರದ ಸುತ್ತೋಲೆ ಸಂಖ್ಯೆ 40, ಜೂನ್ 2014, ದಿನಾಂಕ 20-10-2014ರ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಜಾವೀದ್ ಖಾನ್ ಹೇಳಿದರು.

ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಿತ ದಾಖಲೆಗಳ ಪ್ರಕಾರ ನರಸಿಂಗ್ ರಾವ್ ಗುಜ್ಜರ್ ಅವರು ಆದಾಯಕ್ಕಿಂತ ಹೆಚ್ಚಾಗಿ ಆಸ್ತಿ ಸಂಪಾದಿಸಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಲೋಕಾಯುಕ್ತ ಸಂಸ್ಥೆಯಿಂದ ದಾಳಿಗೆ ಒಳಗಾದ ಸರ್ಕಾರಿ ನೌಕರರನ್ನು ಲೋಕಾಯುಕ್ತರ ಶಿಫಾರಸ್ಸಿನ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸುವ ಕುರಿತು ಸರ್ಕಾರದ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ನರಸಿಂಗ್ ರಾವ್ ಗುಜ್ಜರ್ ಅವರು ಜಿಲ್ಲಾ ಪಂಚಾಯತ ಕಛೇರಿಯಲ್ಲಿ ಮುಂದುವರಿದು ಕರ್ತವ್ಯ ನಿರ್ವಹಿಸಿದರೆ ಪ್ರಭಾವಶಾಲಿ ಹುದ್ದೆಯಲ್ಲಿ ಇರುವುದರಿಂದ ಸಾಕ್ಷಿಗಳನ್ನು ತಿರುಚುವ ಹಾಗೂ ಲೋಕಾಯುಕ್ತ ತನಿಖೆಗೆ ಅಡ್ಡಿಯಾಗುವ ಸಂಭವವಿದೆ. ಪಾರದರ್ಶಕ ತನಿಖೆಯ ದೃಷ್ಟಿಯಿಂದ ಅವರನ್ನು ತಕ್ಷಣ ಅಮಾನತ್ತುಗೊಳಿಸಿ, ಅವರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಬೇರೆ ಅಧಿಕಾರಿಗೆ ವಹಿಸುವಂತೆ ಉನ್ನತ ಪ್ರಾಧಿಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಲೋಕಾಯುಕ್ತ ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂಲಸೌಕರ್ಯ ಮರೀಚಿಕೆ : ಮರಾಠ ಗ್ರಾಮಸ್ಥರ ಶೌಚಕ್ಕೆ ಬಯಲೇ ಗತಿ!

ಈ ಸಂದರ್ಭದಲ್ಲಿ ದಲಿತ ಸೇನೆ ಜಿಲ್ಲಾಧ್ಯಕ್ಷ ಮಾರುತಿ ಚಿಕ್ಕಸುಗೂರು, ಮಧುಕಾಂತ, ಕೃಷ್ಣ, ಬಾಬು ಸೇರಿದಂತೆ ಇನ್ನಿತರರು ಇದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...