ರಾಯಚೂರು | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಹೇಳಿಕೆ ಖಂಡಿಸಿ ಜ.7ರಂದು ‘ದೇವದುರ್ಗ ಬಂದ್‌’

Date:

ಕೇಂದ್ರದ ಗೃಹಮಂತ್ರಿ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ಜನವರಿ 7ರಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ ಎಂದು ದಲಿತ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಕರೆ ನೀಡಿದರು.

ನಗರದ ಜಹೀರುದ್ದೀನ್ ಪಾಶಾ ಸರ್ಕಲ್‌ನಿಂದ ಮೆರವಣಿಗೆ ಪ್ರಾರಂಭಗೊಂಡು ಅಂಬೇಡ್ಕರ್ ವೃತ್ತದವರೆಗೆ ಅಮಿತ್ ಷಾ ಅಣಕು ಶವಯಾತ್ರೆ ಮತ್ತು ಪ್ರತಿಕೃತಿ ದಹನ ಮಾಡುವ ಮೂಲಕ ಪ್ರತಿಭಟಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದೇವದುರ್ಗ ತಾಲೂಕಿನ ಆಸ್ಪತ್ರೆ ಮೆಡಿಕಲ್ ಹೊರತುಪಡಿಸಿ ನಗರದ ಅಂಗಡಿ ಮುಂಗ್ಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಮಾಡುವ ಮೂಲಕ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ತಾಲೂಕಿನ ಪ್ರಮುಖ ಹೋಬಳಿಗಳು ಕೂಡ ಅರಕೇರ, ಗಬ್ಬೂರು, ಜಾಲಹಳ್ಳಿ ಮತ್ತು ಇತರೆ ಹಳ್ಳಿಗಳಿಂದ ಎಲ್ಲ ಆತ್ಮೀಯ ಸಂಘಟನಾಕಾರರು ಬೆಂಬಲ ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯವರು ಈ ಹೋರಾಟಕ್ಕೆ ತಮ್ಮ ಸೂಕ್ತ ಪೋಲಿಸ್ ಬಂದೋಬಸ್ತ್ ನೀಡಿ ಸಹಕರಿಸಬೇಕು ಹಾಗೂ ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಬೇಕು ಎಂದು ದಲಿತ ಪರ ಸಂಘಟನೆಗಳ ಒಕ್ಕೂಟ ಮನವಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...