ರಾಯಚೂರು | ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಮರೀಚಿಕೆ

Date:

ರಾಯಚೂರು ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ದಿ ಮರೀಚಿಕೆಯಾಗಿದ್ದು, ಬಹುತೇಕ ಕಾಮಗಾರಿಗಳು ಸ್ಥಗಿತಗೊಂಡಿವೆ. ಇದರಿಂದ ಸಾರ್ವಜನಿಕರಿಗೆ ಆಗುವ ತೊಂದರೆ ಬಗೆಹರಿಸಿ ಮೂಲಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಡಾ.ರಝಾಕ್ ಉಸ್ತಾದ್ ನೇತೃತ್ವದ ನಿಯೋಗ ಪೌರಾಡಳಿತ ಸಚಿವ ರಹೀಮ್‌ ಖಾನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

“ಹಿಂದುಳಿದ ಜಿಲ್ಲೆಯ ರಾಯಚೂರು ನಗರಸಭೆಗೆ ವಿಶೇಷ ಅನುದಾನ ಮಂಜೂರು ಮಾಡುವುದರ ಮೂಲಕ ನಗರದ ಅಭಿವೃದ್ಧಿಗೆ ಸಹಕರಿಸಬೇಕು. ರಾಯಚೂರು ನಗರಸಭೆಯು ಕಳೆದ ಹಲವು ವರ್ಷಗಳಿಂದ ಎಸ್‌ಎಫ್‌ಸಿ 15ನೇ ಹಣಕಾಸು ಯೋಜನೆಯಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳು ಟೆಂಡರ್ ಕರೆದು ವರ್ಕ್‌ ಆರ್ಡರ್ ನೀಡಿದ್ದರೂ, ಕೆಲಸ ಪೂರ್ಣಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅವುಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಬೇಕು” ಎಂದು ಒತ್ತಾಯಿಸಿದರು.

“ರಾಯಚೂರು ನಗರವು ಬೆಳೆಯುತ್ತಿರುವ ನಗರವಾದ್ದರಿಂದ, ಸದರಿ ನಗರಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೌರಕಾರ್ಮಿಕರ ಅವಶ್ಯಕತೆಯಿದ್ದು, ಸದರಿ ಹುದ್ದೆಗಳನ್ನು ಮಂಜೂರು ಮಾಡುವುದು ಹಾಗೂ ನಗರಸಭೆಯು ಕಳೆದ ಹಲವು ವರ್ಷಗಳಿಂದ ಎಸ್‌ಎಫ್‌ಸಿ 15ನೇ ಹಣಕಾಸು ಯೋಜನೆಯಲ್ಲಿ ವೈಯಕ್ತಿಕ ಫಲಾನುಭವಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲಗೊಂಡಿದ್ದು, ಸರ್ಕಾರದ ಉದ್ದೇಶ ವಿಫಲವಾಗಿದೆ”‌ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಯಚೂರು ನಗರಸಭೆಗೆ ನಗರೋತ್ಥಾನ ಯೋಜನೆ-4ರಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿಕೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಸದರಿ ಕ್ರಿಯಾ ಯೋಜನೆಯ ಅನುದಾನದ ಹಂಚಿಕೆಯಲ್ಲಿ ತಾರತಮ್ಯವಾಗಿದೆ. ಅದನ್ನು ಪುನಃ ಕ್ರೀಯಾ ಯೋಜನೆ ರೂಪಿಸಿ, ನಗರದ ಎಲ್ಲ ವಾರ್ಡ್‌ಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಕ್ತ ನಿರ್ದೇಶನ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಶೀಘ್ರದಲ್ಲಿಯೇ ಮಹಾನಗರ ಪಾಲಿಕೆಯಾಗಿ ರಾಯಚೂರು ನಗರಸಭೆ ಮೇಲ್ದರ್ಜೆಗೆ: ಸಚಿವ ರಹೀಮ್‌ಖಾನ್

“ರಾಯಚೂರು ನಗರವು 75 ವರ್ಷಗಳಿಂದ ಹಂತ ಹಂತವಾಗಿ ಬೆಳೆಯುತ್ತ ಬಂದಿರುವದರಿಂದ ನಗರಸಭೆ ವ್ಯಾಪ್ತಿಗೆ ಹಲವು ಹಳ್ಳಿಗಳನ್ನು ಸೇರಿಸಲಾಗಿದ್ದು, ಸದರಿ ಹಳ್ಳಿಗಳ ವ್ಯಾಪ್ತಿಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಲೇಔಟ್‌ಗಳು ಅನುಮೋದನೆ ಹೊಂದಿರುವುದಿಲ್ಲ. ಅವುಗಳೆಲ್ಲ ಪಂಚಾಯಿತಿ ವ್ಯಾಪ್ತಿಗೆ ಅನುಮೋದನೆ ಪಡೆದಿದ್ದು, ಅಂತಹ ಲೇಔಟ್‌ಗಳಲ್ಲಿ ಖರೀದಿಸಲಾದ ನಿವೇಶನಗಳಿಗೆ, ಮನೆಗಳಿಗೆ ಹಾಗೂ ಹಳೆ ನಗರ ಪ್ರದೇಶದಲ್ಲಿರುವ ನಿವೇಶಗಳು, ಮನೆಗಳಿಗೆ ಮ್ಯುಟೇಶನ್, ಇ-ಖಾತಾ ನೀಡಲು ನಗರಾಭಿವೃದ್ದಿ ಪ್ರಾಧಿಕಾರ ಅನುಮೋದನೆ ನೀಡಬೇಕೆಂದು ನಗರಸಭೆ ಒತ್ತಾಯಿಸುತ್ತಿರುವುದರಿಂದ ಸಾರ್ವಜನಿಕರು ತೊಂದರೆಗೊಳಪಟ್ಟಿರುತ್ತಾರೆ. ಕಾರಣ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಮೋದನೆಗೊಂಡ ಲೇಔಟ್‌ಗಳ ಪಟ್ಟಿಯು ನಗರಸಭೆಯಲ್ಲಿದ್ದು, ಅಂತಹ ಲೇಔಟ್‌ಗಳ ನಿವೇಶನಗಳನ್ನು ಹಾಗೂ ಹಳೆ ನಗರ ಪ್ರದೇಶದಲ್ಲಿರುವ ನಿವೇಶಗಳು, ಮನೆಗಳಿಗೆ ಕೇವಲ ಎನ್ ಎ ಆದೇಶದಂತೆ ಮ್ಯುಟೇಶನ್ ಹಾಗೂ ಇ-ಖಾತಾ ನೀಡುವಂತೆ ನಗರಸಭೆಗೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...