ರಾಯಚೂರು | ಪಾಳುಬಿದ್ದ ದಾದಿಯರ ವಸತಿ ಗೃಹಗಳು; ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಆರೋಪ

Date:

ರಾಯಚೂರಿನ ಸಿರವಾರ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ ದಾದಿಯರ ವಸತಿ ಗೃಹಗಳು ನಿರ್ಮಾಣಗೊಂಡು ವರ್ಷಗಳೇ ಕಳೆದರೂ ಇಂದಿಗೂ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿವೆ. ನಿತ್ಯ ರೋಗಿಗಳ ಸೇವೆ ಮಾಡುವ ದಾದಿಯರಿಗಾಗಿ ಸರ್ಕಾರ ನೀಡುವ ಮೂಲಸೌಕರ್ಯಗಳನ್ನು ಅವರಿಗೆ ತಲುಪಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿದೆ ಎನ್ನುವುದು ಸರ್ಕಾರಿ ದಾದಿಯರ ಗಂಭೀರ ಆರೋಪ.

ಸರ್ಕಾರವು ಸುಮಾರು 3 ವರ್ಷಗಳ ಹಿಂದೆ 2022 ರಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಕಟ್ಟಡಗಳನ್ನು ನಿರ್ಮಿಸಿತು. ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾದ ಈ ಗೃಹಗಳನ್ನು ನರ್ಸ್‌ಗಳ ವಸತಿಗಾಗಿ ಬಳಸಬೇಕಾಗಿತ್ತು. ಆದರೆ ಉದ್ಘಾಟನೆ ನಡೆಯದೇ ಇರುವುದರಿಂದ ಕಟ್ಟಡಗಳು ಖಾಲಿ ಬಿದ್ದಿವೆ. ಕಟ್ಟಡಗಳ ಬಾಗಿಲು-ಕಿಟಕಿಗಳಿಗೆ ಈಗಾಗಲೇ ಹಾನಿಯಾದ ಲಕ್ಷಣಗಳು ಕಾಣಿಸುತ್ತಿವೆ. ಆಸ್ಪತ್ರೆಯಲ್ಲಿ ನೂರಾರು ನರ್ಸ್‌ಗಳು ಕೆಲಸ ಮಾಡುತ್ತಿದ್ದರೂ ವಸತಿ ಸೌಲಭ್ಯವಿಲ್ಲದೆ ಹೊರಗಿನ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಸರ್ಕಾರಿ ವಸತಿ ಅನುಕೂಲವಾದರೆ ನರ್ಸ್‌ಗಳಿಗೆ ಆರ್ಥಿಕ ಭಾರವಾದರೂ ಕಡಿಮೆ ಆಗುತ್ತಿತ್ತು ಎನ್ನುತ್ತಾರೆ ದಾದಿಯರು. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಮಾತನಾಡಿ, “ಪ್ರತಿ ದಿನ ದಾದಿಯರು ಕೆಲಸ ಮುಗಿಸಿ ದೂರದ ಮನೆಗಳಿಗೆ ಪ್ರಯಾಣಿಸುವ ತೊಂದರೆ ಅನುಭವಿಸುತ್ತಿದ್ದಾರೆ. ದೂರದ ಊರುಗಳಿಂದ ಬಂದು ಕರ್ತವ್ಯ ನಿರ್ವಹಿಸುತ್ತಿರುವ ದಾದಿಯರಿಗೆ ಬಾಡಿಗೆ ಮನೆಯಿಂದ ದೊಡ್ಡ ಹೊರೆ ಎದುರಾಗುತ್ತಿದೆ. ಹೆಚ್ಚಿನ ಸಂಬಳವಿಲ್ಲದ ಕಾರಣ ಬಾಡಿಗೆಯ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಅವರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ವಸತಿ ಗೃಹಗಳು ನಿರ್ಮಾಣವಾಗಿ ಬಳಕೆಗೆ ಬಂದರೆ, ದಾದಿಯರಿಗೆ ದೊಡ್ಡ ನೆಮ್ಮದಿ ಲಭಿಸಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250818 WA0043

ಸೇವೆಯೊಂದಿಗೆ ಜೀವನ ನಿರ್ವಹಣೆಯ ತೊಂದರೆ ಕಡಿಮೆಯಾಗಲು ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ನಿರೀಕ್ಷೆ ವ್ಯಕ್ತವಾಗಿದೆ. ಕೆಲವೊಮ್ಮೆ ರಾತ್ರಿ ಕೆಲಸಕ್ಕೆ ಹಾಜರಾಗಬೇಕಾದರೆ ಭಯದ ಸ್ಥಿತಿಯಲ್ಲಿ ಬರುತ್ತೇವೆ. ವಸತಿ ಸಮಸ್ಯೆ ಪರಿಹಾರವಾದರೆ ಸೇವಾ ಕಾರ್ಯ ಇನ್ನಷ್ಟು ಪರಿಣಾಮಕಾರಿ ಆಗಲಿದೆ ಎಂದರು.

ಆಸ್ಪತ್ರೆಯ ವಸತಿಗಳು ಬಳಕೆಯಿಲ್ಲದೆ ಹೊರಗಡೆ ಬಾಡಿಗೆ ಮನೆಗಳ ಮೊರೆ ಹೋಗಬೇಕಾಗಿದೆ. ಬಂದ ವೇತನದಿಂದ ಮನೆ ಬಾಡಿಗೆ, ವಿದ್ಯುತ್, ಇನ್ನಿತರ ಖರ್ಚು ಭರಿಸುವುದೇ ದುಸ್ತರವಾಗಿದೆ. ಆದರೆ ಸರ್ಕಾರದ ನಿರ್ಲಕ್ಷ್ಯವೇ ಅವರ ಬದುಕಿಗೆ ಹೆಚ್ಚುವರಿ ಹೊರೆ ತರುತ್ತಿದೆ. ಹೊಸ ವಸತಿ ಗೃಹ ಉದ್ಘಾಟನೆ ತಕ್ಷಣ ನಡೆಯಲಿ ಎಂಬುದು ಎಲ್ಲರ ನಿರೀಕ್ಷೆಯಾಗಿದ್ದು, ದಾದಿಯರ ಸಮಸ್ಯೆಗಳಿಗೆ ಅಂತ್ಯ ತರಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ವ್ಯಕ್ತವಾಗಿದೆ.

ಸ್ಥಳೀಯ ನಿವಾಸಿ ಮೇಶಕ್ ದೊಡ್ಮನಿ ಮಾತನಾಡಿ, “ವಸತಿ ಗೃಹಗಳು ಉದ್ಘಾಟನೆಗೊಂಡು ದಾದಿಯರು ವಸತಿ ಗೃಹಗಳಲ್ಲಿ ವಾಸವಿರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ಜಾರಿ ಮಾಡಬೇಕು. ಪ್ರತಿ ದಿನ ರೋಗಿಗಳು ಆಸ್ಪತ್ರೆಗೆ ಬಂದಾಗೊಮ್ಮೆ ವೈದ್ಯರು ಇಲ್ಲ , ನರ್ಸ್ ಗಳು ಇಲ್ಲವೆಂದು ಗೋಳಾಡುತ್ತಿರುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕಾದರೆ ವಸತಿ ಗೃಹಗಳು ಕಾರ್ಯ ಪ್ರಾರಂಭಿಸಬೇಕು” ಎಂದರು.

ಆಸ್ಪತ್ರೆಯ ವಸತಿ ಗೃಹಗಳಲ್ಲಿ ಸಿಬ್ಬಂದಿಗಳು ವಾಸವಿದ್ದರೆ ತುರ್ತು ಕ್ರಮಕ್ಕೆ ಹಾಗೂ ರಾತ್ರಿ ವೇಳೆ ರೋಗಿಗಳನ್ನು ಪ್ರಥಮ ಚಿಕಿತ್ಸೆಗೆ ಅನುಕೂಲವಾಗುತ್ತದೆ. ತಾಲ್ಲೂಕಿನ ಸುತ್ತಮುತ್ತ ಹಳ್ಳಿಗಳಿಂದ ಸಾರ್ವಜನಿಕರು ವೈದ್ಯರು ಇರಲ್ಲ ಎಂದು ಭಾವಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳುತ್ತಾರೆ ಇದರಿಂದ ಸುಮಾರು ಅನಾಹುತ ಘಟನೆಗಳು ಆಗಿವೆ” ಎಂದರು.

IMG 20250818 WA0044

ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ (DHO) ಸುರೇಂದ್ರ ಮಾತನಾಡಿ, ಆಸ್ಪತ್ರೆಯ ದಾದಿಯರ ವಸತಿ ಗೃಹಗಳನ್ನು ಇನ್ನೂ ಹಸ್ತಾಂತರ ಮಾಡಲಾಗಿಲ್ಲ. ಆದರೆ ಶೀಘ್ರದಲ್ಲೇ ಪ್ರಾರಂಭಿಸುವ ಕಾರ್ಯ ನಡೆಯಲಿದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ರಾಯಚೂರು | ರಸಗೊಬ್ಬರ ದುಬಾರಿ ಮಾರಾಟಕ್ಕೆ ಕಾನೂನು ಕ್ರಮ : ಶರಣಪ್ರಕಾಶ ಪಾಟೀಲ್

ಕೋಟ್ಯಂತರ ಅನುದಾನ ವ್ಯಯಿಸಿ ಜಾರಿಗೆ ತಂದ ಎಷ್ಟೋ ಅಭಿವೃದ್ಧಿ ಯೋಜನೆಗಳು ಜನಸಾಮಾನ್ಯರಿಗೆ ತಲುಪುವುದೇ ಇಲ್ಲ. ಇಂಥ ಆರೋಪಗಳ ಮಧ್ಯೆಯೂ ದಾದಿಯರ ಬಳಕೆಗೆ ನಿರ್ಮಿಸಿರುವ ಸರ್ಕಾರಿ ವಸತಿ ಗೃಹಗಳು ಸುಮ್ಮನೆ ಪಾಳು ಬಿದ್ದಿವೆ. ಕೂಡಲೇ ಸ್ಥಳೀಯ ಆಡಳಿತ ಇತ್ತ ಗಮನಹರಿಸಿ ವಸತಿ ಗೃಹಗಳನ್ನು ಉತ್ತಮ ಸ್ಥಿತಿಗೆ ತಂದು ಬಳಕೆಗೆ ನೀಡಬೇಕಾಗಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...