ಬಳ್ಳಾರಿ | ನಗರಕ್ಕೆ ಐವರು ಶಾಸಕರಿದ್ದಾರೆ; ಕೆಆರ್‌ಪಿಪಿ ಮುಖಂಡ ಕಿಡಿ

Date:

ಬಳ್ಳಾರಿ ನಗರಕ್ಕೆ ಒಬ್ಬರು ಚುನಾಯಿತ ಶಾಸಕರಿದ್ದರೆ, ಇನ್ನೂ ನಾಲ್ವರು ಅಘೋಷಿತ ಶಾಸಕರಿದ್ದಾರೆ. ಈ ಐವರಿಂದ ಅಧಿಕಾರಿಗಳು ಸರಿಯಾಘಿ ಕೆಲಸ ಮಾಡಲು ಸಾಧ್ಯವಾಗಲುತ್ತಿಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಮುಖಂಡ, ಮಾಜಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಆರೋಪಿಸಿದ್ದಾರೆ.

ಬಳ್ಳಾರಿಯ ಜನಾರ್ದನ ರೆಡ್ಡಿ ಅವರ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು. “ಬಳ್ಳಾರಿ ಪಟ್ಟಣಕ್ಕೆ ಚುನಾಯಿತ ಶಾಸಕ ಭರತ್ ರೆಡ್ಡಿ ಹಾಗೂ ಅವರ ಕುಟುಂಬಸ್ಥರಾದ ಸೂರ್ಯ ನಾರಾಯಣ ರೆಡ್ಡಿ, ಪ್ರತಾಪ್ ರೆಡ್ಡಿ, ಶರತ್ ರೆಡ್ಡಿ ಹಾಗೂ ಕಾಂಗ್ರೆಸ್‌ ಮುಖಂಡ ಚಾನಳ್ ಶೇಖರ್ – ಐವರು ಶಾಸಕರಿದ್ದಾರೆ. ಇದರಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಅಧಿಕಾರಿಗಳೇ ಅಳಲು ತೋಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಶಾಸಕ ಭರತ್ ರೆಡ್ಡಿ ಜೊತೆ ಗ್ರಾನೈಟ್ ಬಿಜಿನೆಸ್ ಮಾಡುತ್ತಿದ್ದ ದೇವರೆಡ್ಡಿ ನಿಗೂಢ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ದೇವರೆಡ್ಡಿ ಕುಟುಂಬಸ್ಥರು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭರತ್‌ ರೆಡ್ಡಿ ಶಾಸಕರಾದ ಒಂದು ತಿಂಗಳ ನಂತರ ಬಿ ರಿಪೋರ್ಟ್ ಹಾಕಲಾಗಿದೆ. ನಗರ ಠಾಣೆಯ ಸಿಪಿಐ ಅವರು ವರ್ಗಾವಣೆಯಾಗಿದ್ದರೂ, ಅವರ ವರ್ಗಾವಣೆಯನ್ನು ತಡೆದು ಅದೇ ಠಾಣೆಯಲ್ಲಿ ಮುಂದುವರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಆರ್‌ಪಿಪಿ ಮುಖಂಡ ಆಲಿಖಾನ್ ಮಾತನಾಡಿ, “ಶಾಸಕ ಭರತ್ ರೆಡ್ಡಿಗೆ ಗಾಂಜಾ ಗಿರಾಕಿ ಎಂದು ನಾಮಕರಣ ಮಾಡುತ್ತಿದ್ದೇವೆ. ಅವರನ್ನು ನಾವು ಗಾಂಜಾ ಶಾಸಕ ಎಂದೇ ಕರೆಯುತ್ತೇವೆ. ದಿನದ 24 ಗಂಟೆಯೂ ಅವರು ಗಾಂಜಾ ಸೇವನೆ ಮಾಡಿದವರ ರೀತಿಯಲ್ಲಿ ಇರುತ್ತಾರೆ” ಎಂದರು.

ಈ ಸಂದರ್ಭದಲ್ಲಿ ದುರಪ್ಪ ನಾಯಕ, ಸಂಜಯ್ ಬೆಟಗೇರಿ, ಶಿವಾರೆಡ್ಡಿ, ಉಮಾರಾಜ್, ಪರ್ವಿನ್ ಭಾನು, ಮಲ್ಲಿಕಾರ್ಜುನ ಆಚಾರಿ, ಕೊಳಗಲ್ಲು ಅಂಜಿ ಸೇರಿದಂತೆ ಮತ್ತಿತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...