ರಾಯಚೂರು| ವರದಕ್ಷಿಣೆ ಕಿರುಕುಳ ಸಾವು;ಆರೋಪಿ ಬಂಧಿಸುವಲ್ಲಿ ವಿಫಲರಾದ ಸಿಪಿಐ ಅಮಾನತಿಗೆ ಆಗ್ರಹ

Date:

ವರದಕ್ಷಿಣೆ ಕಿರುಕುಳಕ್ಕೆ ಸಾವಿಗೀಡಾದ ಶಾಂತಲಾ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ ಲಿಂಗಸೂಗೂರು ಠಾಣೆಯ ಸಿಪಿಐ ಪುಂಡಲೀಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಜಂಟಿ ಸಂಘಟನೆಗಳು ಪ್ರತಿಭಟಿಸಿದರು.

ನಗರದ ಗುರುಭವನದಿಂದ ಆರಂಭಗೊಂಡು, ಬಸ್ ನಿಲ್ದಾಣ, ನಗರದ ಮುಖ್ಯ ರಸ್ತೆಗಳ ಮೂಲಕ ಸಹಾಯಕ ಆಯುಕ್ತ ಕಚೇರಿವರೆಗೆ ಸಿಪಿಐ ವಿರುದ್ಧ ಘೋಷಣೆ ಹಾಕುವ ಮೂಲಕ ಮೆರವಣಿಗೆ ನಡೆಸಿ ಸಹಾಯಕ ಆಯುಕ್ತರ ಕಚೇರಿಗೆ ಮನವಿ ಸಲ್ಲಿಸಿದರು.

ಮೃತ ಶಾಂತಲಾನ್ನು ಸುನೀಲ್ ಎನ್ನುವ ವ್ಯಕ್ತಿಯ ಜೊತೆ ವಿವಾಹವಾಗಿರುತ್ತದೆ. ಮದುವೆ ನಂತರ ಸುನೀಲ್ ಹಾಗೂ ಅವರ ಕುಟುಂಬಸ್ಥರು ನಿರಂತರ ವರದಕ್ಷಣೆ ಕಿರುಕುಳ, ಮಕ್ಕಳಾಗಿಲ್ಲ ಎಂದು ದೈಹಿಕವಾಗಿ ಮಾನಸಿಕವಾಗಿ ಕಿರುಕುಳ ನೀಡಿದ್ದರಿಂದ ಶಾಂತಲಾ ಆರೋಗ್ಯ ಸಂಪೂರ್ಣ ಹದೆಗಟ್ಟು ಸಾವನ್ನಪ್ಪಿದ್ದು, ಈ ಸಂಬಂಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಕಳೆದ ತಿಂಗಳು ಏಪ್ರಿಲ್ 09 ರಂದು ಪ್ರಕರಣ ದಾಖಲಾಗಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಾಗಿ ಒಂದು ತಿಂಗಳು ಕಳೆದರೂ ಸಿಪಿಐ ಪುಂಡಲೀಕ ಪಟಾತರ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಹಾಗೂ ನೊಂದ ಕುಟುಂಬಸ್ಥರು ಕೇಳಿದರೆ ಉಡಾಫೆ ಉತ್ತರ ನೀಡುವುದು ಮತ್ತು ಆರೋಪಿಗಳ ಜೊತೆ ಶಾಮೀಲಾಗಿ ಕಾಲಹರಣ ಮಾಡಲಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ತಕ್ಷಣ ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು |ಕಾರ್ಮಿಕರ ಲೇಬರ್ ಕಾರ್ಡ್ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು, ಶಾಂತಲಾನ್ನು ನಿರಂತರ ವರದಕ್ಷಿಣೆ ಕಿರುಕುಳ, ಮಕ್ಕಳಾಗಿಲ್ಲವೆಂದು ದೈಹಿಕ ಮಾನಸಿಕವಾಗಿ ನೊಂದು ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದು, ಸಾಕ್ಷಿ ಸಮೇತ ಪೊಲೀಸ್ ಠಾಣೆಗೆ ದೂರು ನೀಡಿದರು ಆರೋಪಿಗಳನ್ನು ಬಂಧಿಸುವಲ್ಲಿ ಸಿಪಿಐ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಆರೋಪಿಗಳನ್ನು ಬಂಧಿಸುವಲ್ಲಿ ಸಿಪಿಐ ಜೊತೆ ಠಾಣೆಯಲ್ಲಿ ಚರ್ಚಿಸಿದಾಗ ನಮ್ಮ ಹತ್ತಿರ ಆಪ್ಷನ್ ಇಲ್ಲ, ನಾನು ಬಂಧಿಸಿದರೆ ಕೆಲಸದಿಂದ ವಜಾಗೊಳ್ಳುತ್ತೇನೆ. ನೀವು ಎಲ್ಲಿಗೆ ಹೋಗ್ತೀರಾ ಎಂದು ಉಡಾಫೆ ಉತ್ತರ ಕೊಡುವ ಮೂಲಕ ಮಾತನಾಡಿದ್ದಾರೆ. ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ಪೋಲಿಸರು ಮುಂದಾಗಬೇಕು ಹೊರೆತು ಆರೋಪಿಗಳ ಜೊತೆ ಶಾಮೀಲಾಗಿ ಪ್ರಕರಣವನ್ನು ತಮಗೆ ಸಂಬಂಧವಿಲ್ಲದಂತೆ ಇದ್ದಾನೆ ಎಂದು ಕಿಡಿಕಾರಿದರು.

ಕೂಡಲೇ ಸರಕಾರ ಸಿಪಿಐರನ್ನು ಅಮಾನತುಗೊಳಿಸಿ ಹಾಗೂ ಸಂಬಂಧ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಮುಖಂಡರಾದ ಸಾಹೀರಾ ಬಾನು, ಶಾಂತಕುಮಾರಿ, ಡಿವೈಎಫ್ಐ ನ ಜಿಲ್ಲಾ ಸಮಿತಿ ಸದಸ್ಯ ಚನ್ನಬಸವ ವಂದ್ಲಿಹೊಸೂರು, ಕೆಪಿಆರ್ ಎಸ್ ಮುಖಂಡರಾದ, ಅಪ್ಪಣ್ಣ ಕಾಂಬಳೆ, ನಿಂಗಪ್ಪ ಎಂ, ಆಂಜನೇಯ, ಹನುಮಂತ ಚಲುವಾದಿ, ಮಹಾಂತೇಶ ಬುದ್ದಿನ್ನಿ, ಸಿಐಟಿಯುನ ಶ್ರೀದರ್, ಖಾಜಾ ಮೈನುದ್ದೀನ್, ಬಾಬಾಜಾನಿ, ಶಂಸುದ್ದೀನ್, ಶಾಂತಲಾ ತಂದೆ ನರಸಿಂಗಪ್ಪ, ನಾರಾಯಣ್ ಗೊಂದಳಿ, ತುಕಾರಾಂ, ಶಂಕರ್, ಸುನೀಲ್, ಅನೀಲ್, ನಾಮದೇವ, ಕೃಷ್ಣ, ದೇವು ಸಿಂದೆ, ಬಾಲಕೃಷ್ಣ, ರವಿ ಪಾತಂಗೆ, ರಾಹುಲ್ ಸೇರಿದಂತೆ ಕುಟುಂಬಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...