ರಾಯಚೂರು | ನಕಲಿ ನೋಟು ಚಲಾವಣೆ ಮಾಡುತ್ತಿದ್ದ 10 ಜನ ಅರೆಸ್ಟ್

Date:

ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ 36 ನಕಲಿ ನೋಟುಗಳು ವಶಪಡಿಸಿ 10 ಜನ ಆರೋಪಿಗಳನ್ನು ಮಾನ್ವಿ ಪೊಲೀಸರು ಬಂಧಿಸಿದ್ದಾರೆ.

ಸೀಕಲ್ ಸಮೀಪದ ಚಹಪುಡಿ ಕ್ಯಾಂಪಿನ ನಿವಾಸಿ ವಿರೂಪಾಕ್ಷಿ, ಶೇಖರ್, ಶಾಸ್ತ್ರೀ ಕ್ಯಾಂಪಿನ ಹುಸೇನ್ ಬಾಷಾ, ಮಾಚನೂರು ಗ್ರಾಮದ ಖಾಜಾ ಹುಸೇನ್, ಸಿರವಾರ ಪಟ್ಟಣದ ಸಿದ್ದನಗೌಡ, ಅಮರೇಶ ಗಡ್ಡೆರಾಯನ ಕ್ಯಾಂಪ್, ಮಾನ್ವಿ ಪಟ್ಟಣದ ಅಜ್ಮೀರ್, ಸಿಂಧನೂರಿನ ಆಲಂ ಬಾಷಾ, ರಾಯಚೂರಿನ ನರಸಯ್ಯ ಶೆಟ್ಟಿ, ಕಾರಟಗಿಯ ಭೀಮೇಶ ಬಂಧಿತರು ಎನ್ನಲಾಗಿದೆ.

ಮೇ 13ರಂದು ಪಟ್ಟಣದ ಇಂಡಿಯನ್ ಬ್ಯಾಂಕ್ ಶಾಖೆಯ ಎಟಿಎಂ ಕೇಂದ್ರದಲ್ಲಿ ಸೀಕಲ್ ಗ್ರಾಮ ಸಮೀಪದ ಚಹಪುಡಿ ಕ್ಯಾಂಪ್ ನಿವಾಸಿ ವಿರೂಪಾಕ್ಷಿ ಎನ್ನುವವರು ಇಂಡಿಯನ್ ಬ್ಯಾಂಕಿನ ತಮ್ಮ ಖಾತೆಗೆ ₹18 ಸಾವಿರ ಮೊತ್ತದ ₹500 ಮುಖ ಬೆಲೆಯ 36 ಖೋಟಾ ನೋಟುಗಳನ್ನು ಜಮಾ ಮಾಡಿರುವುದನ್ನು ಬ್ಯಾಂಕಿನ ವ್ಯವಸ್ಥಾಪಕ ಪತ್ತೆ ಹಚ್ಚಿ ಮಾನ್ವಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಹಾಗೂ ಸಿಂಧನೂರು ಡಿವೈಎಸ್ಪಿ ಬಿ.ಎಸ್.ತಳವಾರ ಮಾರ್ಗದರ್ಶನದಲ್ಲಿ ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬ್ಯಾಂಕಿನಲ್ಲಿ ಜಮಾ ಮಾಡಿದ್ದ ₹18 ಸಾವಿರ ಮೊತ್ತದ ₹500 ಮುಖಬೆಲೆಯ 36 ಖೋಟಾನೋಟುಗಳು, ಒಂದು ಕಾರ್, ನಾಲ್ಕು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆಯನ್ನು ಮುಂದುವರೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೋಳ ಖರೀದಿ ಆರಂಭಿಸಲು ಒತ್ತಾಯಿಸಿ ಸಿಂಧನೂರು ಬಂದ್‌

ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ, ನೇತೃತ್ವದ ಪೊಲೀಸ್ ಸಿಬ್ಬಂದಿ ತಂಡದ ಕಾರ್ಯಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...