ರಾಯಚೂರು | ʼಹಟ್ಟಿ ಕಾರ್ಮಿಕ ಸಂಘʼದ ಚುನಾವಣೆ ನಡೆಸಲು ಒತ್ತಾಯ

Date:

ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆ ನಡೆಸಬೇಕು ಎಂದು ಸೆಂಟರ್ ಅಫ್ ಇಂಡಿಯನ್ ಟ್ರೇಡ್ ಯೂನಿಯನ್ ಸಂಘದ ವತಿಯಿಂದ ಕಂಪನಿ ಆಡಳಿತಕ್ಕೆ ಮನವಿ ಸಲ್ಲಿಸಿದರು.

ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಮೂರು ವರ್ಷದ ಅವಧಿ ಪೂರ್ಣಗೊಂಡು ಸುಮಾರು ದಿನಗಳು ಕಳೆದಿವೆ.ಅಭಿವೃದ್ಧಿ ಕುಂಠಿತಗೊಂಡಿದೆ ಚುನಾವಣೆ ನಡೆಸಿ ಮುಂದಿನ ಕಾರ್ಯ ಚಟುವಟಿಕೆಗಳು ನಡೆಯಬೇಕು ಎಂದು ಒತ್ತಾಯಿಸಿದರು

ಈ ಬಗ್ಗೆ ಕಾರ್ಮಿಕ ಮುಖಂಡ ಅನೀಫ್ ಮಾತನಾಡಿ ಚುನಾವಣೆಗಳನ್ನು ಸಮಯಕ್ಕೆ ತಕ್ಕಂತೆ ನಡೆಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಾಗಿದೆ.ಚುನಾವಣೆಗಳು ಉದ್ಯೋಗಿಗಳ ಪ್ರಾತಿನಿಧ್ಯವನ್ನು ಸದೃಢಗೊಳಿಸಿ, ನಿರ್ವಹಣಾ ಮತ್ತು ಕಾರ್ಮಿಕರ ನಡುವಿನ ಸಂಬಂಧವನ್ನು ಮತ್ತಷ್ಟು ಉತ್ತಮಗೊಳಿಸುತ್ತದೆ. ಉದ್ಯೋಗಿಗಳ ನ್ಯಾಯಯುತ ಪ್ರತಿನಿಧಿಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಸಂಸ್ಥೆಯೊಳಗಿನ ಪ್ರಜಾಪ್ರಭುತ್ವಾತ್ಮಕ ವ್ಯವಸ್ಥೆ ಸಕ್ರಿಯವಾಗಿರಿಸಲು ಇದು ಬಹಳ ಅಗತ್ಯವಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಓರ್ವ ಗಂಭೀರ ಗಾಯ

ಕಂಪನಿಯಲ್ಲಿ ಅಭಿವೃದ್ಧಿ,ಹಾಗೂ ಇನ್ನಿತರ ಕಾರ್ಯ ಚಟುವಟಿಕೆಗಳು ನಡೆಯಬೇಕಾದರೆ ಮತ್ತು ಕಾರ್ಮಿಕರ ಬೇಡಿಕೆಗಳನ್ನು ಸಮಸ್ಯೆಗಳನ್ನು ಈಡೇರಿಸಲು ಚುನಾವಣೆ ಮುಖಾಂತರ ಆಯ್ಕೆಯಾಗಿ ಸೇವೆ ಸಲ್ಲಿಸಬೇಕಾಗಿದೆ.ಚುನಾವಣೆ ನಡೆಯದಿದ್ದರೆ ಖಾಸಗೀಕರಣ ವ್ಯವಸ್ಥೆ ಉಂಟಾಗಬಹುದು ಹಾಗಾಗಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆಗಳನ್ನು ಶೀಘ್ರದಲ್ಲಿ ನಡೆಸಬೇಕು ಎಂದು ಹೇಳಿದರು.

ಈ ವೇಳೆ ಕಾರ್ಮಿಕ ಮುಖಂಡ ನಿಂಗಪ್ಪ ಎಂ ವೀರಾಪುರ , ಅಲ್ಲಾಬಕ್ಷ,ಫಕ್ರುದ್ದೀನ್ ಮುಲ್ಲಾ , ವೆಂಕಟೇಶ್ ಗೋರ್ಕಲ್, ನರಸಣ್ಣ ನಾಯಕ ,ಶಬ್ಬಿರ ಜಾಲಹಳ್ಳಿ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...