ರಾಯಚೂರು | ಹಾಲು ಉತ್ಪಾದಕರ ಸಂಘದ ಚುನಾವಣೆ; ರೈತರಿಗೆ ಅನ್ಯಾಯ

Date:

ಅಮರೇಶ್ವರ ಕ್ಯಾಂಪಿನ ಹಾಲು ಉತ್ಪಾದಕರ ಸಂಘದ ಸದಸ್ಯರ ನೇಮಕ ಚುನಾವಣೆಯಲ್ಲಿ ರಾಜಕೀಯ ಪ್ರಾಬಲ್ಯದಿಂದ ಅರ್ಹ ರೈತರಿಗೆ ಅನ್ಯಾಯವಾಗಿದೆ ಎಂದು ರೈತ ಎಂ ಪ್ರಕಾಶ ಆರೋಪಿಸಿದರು.

ರಾಯಚೂರು ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪಿನ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತವು 1987ರಿಂದ ಈವರೆಗೆ ಕಾರ್ಯನಿರ್ವಹಿಸುತ್ತಿದೆ. ಪ್ರತಿ 5 ವರ್ಷಗಳಿಗೊಮ್ಮೆ ಚುನಾವಣೆ ನಡೆಸದೆ ರೈತರೆಲ್ಲರೂ ಸೇರಿ ಒಮ್ಮತದಿಂದ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದೆವು. ಆದರೆ 2018ರಿಂದ ಸಂಘದಲ್ಲಿ ಲೋಪದೋಷಗಳು ಕಂಡುಬಂದಿದ್ದು, ಈ ಬಗ್ಗೆ ರೈತರು ಪ್ರಶ್ನೆ ಮಾಡಿದರೆ ಉತ್ತರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ದೂರಿದರು.

“ಸಂಘದಲ್ಲಿದ್ದ ಅರ್ಹ ರೈತರಿಗೆ ಅನ್ಯಾಯ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ದ್ರೋಹ ಬಗೆಯುವ ಕೆಲಸ ಮಾಡಿದ್ದಾರೆ. ಜತೆಗೆ ಸಂಘದ ಹೆಸರಿನಲ್ಲಿ ಮಂಜೂರಾಗಿದ್ದ ಸರ್ಕಾರಿ ನ್ಯಾಯಬೆಲೆ ಅಂಗಡಿಗೆ ಬರುವ ಆದಾಯವನ್ನು ಸಂಘಕ್ಕೆ ನೀಡದೆ ಜಿ ಸತ್ಯ ನಾರಾಯಣ ಸೇರಿದಂತೆ ಇತರೆ ಪ್ರಬಲ ವ್ಯಕ್ತಿಗಳು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2019–20ನೇ ಸಾಲಿನ ಚುನಾವಣೆಯಲ್ಲಿ ನಿಜವಾಗಿ ಹಾಲು ಹಾಕಿದವರು 13 ಮಂದಿ ರೈತರು ಮಾತ್ರ ಮತ ಚಲಾಯಿಸಲು ಆಯ್ಕೆಯಾಗಿದ್ದರು. ಆದರೆ 2024–25ನೇ ಸಾಲಿನಲ್ಲಿ ಸುಳ್ಳು ದಾಖಲು ಸೃಷ್ಟಿಸಿ ರೈತರ ಹೆಸರಿನ ಮೇಲೆ ಅವರು ಯಾವುದೇ ಹೈನುಗಾರಿಕೆ ಮಾಡಿರದಿದ್ದರೂ ಅವರ ಬೇರೊಂದು ಸೊಸೈಟಿಯಲ್ಲಿ ಹಾಲು ಖರೀದಿಸಿ ರೈತರ ಹೆಸರಿಗೆ ಹಾಲು ಹಾಕಿ ಸಂಘದ ಚುನಾವಣೆಗೆ ಮತ ಚಲಾಯಿಸುವ ಅಧಿಕಾರವನ್ನು ನೀಡಿದ್ದು, ಅರ್ಹರಿಗೆ ಅನ್ಯಾಯ ಎಸಗಿದ್ದಾರೆ” ಎಂದು ಆರೋಪಿಸಿದರು.

“ಐದು ವರ್ಷಗಳ ಅವಧಿಯಲ್ಲಿ ಸಂಘದ ಸಾಮಾನ್ಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳದೆ ಚುನಾವಣೆಯಲ್ಲಿ ಮತ ಚಲಾಯಿಸಲು ಮಾತ್ರ ಸದಸ್ಯತ್ವ ನೀಡಿದ್ದಾರೆ. 2019ರಲ್ಲಿ 43 ಜನ ರೈತರು ಸದಸ್ಯತ್ವ ಪಡೆದುಕೊಂಡಿದ್ದರು. 2020ರಲ್ಲಿ 41 ಜನ ಸದಸ್ಯರಿದ್ದರೆ, 2021ರಲ್ಲಿ ಇಬ್ಬರನ್ನು ತೆಗೆದು 39ಜನ ಸದಸ್ಯರಿದ್ದರು. 2022ರಲ್ಲಿ 40 ಜನ ರೈತರು ಸದಸ್ಯತ್ವ ಪಡೆದುಕೊಂಡಿದ್ದರು. 2023ರ ಸೆಪ್ಟಂಬರ್‌ನಲ್ಲಿ 37, ಅಕ್ಟೊಬರ್‌ನಲ್ಲಿ 108 ಏಕಾಏಕಿ ಹೆಚ್ಚಳವಾದರೆ ಚುನಾವಣೆಗಾಗಿ ಅನರ್ಹ ರೈತರನ್ನು ಸೇರ್ಪಡೆ ಮಾಡಿಕೊಂಡು ಚುನಾವಣೆಯಲ್ಲಿ ಮತದಾನ ಬಳಿಕ ಸೆಪ್ಟೆಂಬರ್ 1ರಿಂದ ಅಕ್ಟೋಬರ್ 30ರವರೆಗೆ ಮತ್ತೆ ಯಥಾ ಸ್ಥಿತಿ ಮೊದಲು ನಾಲ್ಕು ವರ್ಷ ಯಾವ ರೀತಿ ಹಾಲು ಹಾಕಿದ್ದ ಸದಸ್ಯರು ಇದ್ದದು, ಅದೇ 31 ಜನ ಮಾತ್ರ ಇದ್ದರು. ಸಂಘದ ಸದಸ್ಯರ ನೇಮಕ ಚುನಾವಣೆ ಸಲುವಾಗಿಯೇ ನಕಲಿ ರೈತರನ್ನು ಸೃಷ್ಟಿಸಿ ಅಧಿಕಾರ ಹಿಡಿದಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಬೈಲಾ ನಿಯಮ ಪ್ರಕಾರ ಐದು ವರ್ಷಗಳ ಸಾಮಾನ್ಯ ಸಭೆಯಲ್ಲಿ ಕನಿಷ್ಠ ಮೂರು ವರ್ಷಗಳು ಹಾಜರಾತಿ ಇರಬೇಕು. ಸಾಮಾನ್ಯ ಸಭೆಗಳಿಗೆ ಹಾಜರಿಯಾಗದೆ 27 ವ್ಯಕ್ತಿಗಳಿಗೆ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕನ್ನು ನೀಡದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗೆ, ಸಹಕಾರಿ ಸಂಘಗಳ ಉಪನಿಬಂಧಕರು ಮನವಿ ಮಾಡಿದರೂ ಈವರೆಗೆ ಕ್ರಮಕೈಗೊಂಡಿಲ್ಲ” ಎಂದು ಆಪಾದಿಸಿದರು.

“ನ್ಯಾಯಕ್ಕಾಗಿ ಹೈಕೋರ್ಟ್ ಕಲಬುರಗಿ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆಯಲ್ಲಿದೆ. ಸಂಘದ ಕಾರ್ಯದರ್ಶಿಯ ಮೇಲೆ ಒತ್ತಡ ಹೇರಿ ತಮಗೆ ಬೇಕಾದ ರೀತಿಯಲ್ಲಿ ಸುಳ್ಳು ಸಹಿಗಳನ್ನು ಪಡೆದುಕೊಂಡಿದ್ದಾರೆ. ಅರ್ಹ ರೈತರಿಗೆ ಅನ್ಯಾಯವಾಗಿದ್ದು ನ್ಯಾಯ ಒದಗಿಸಿಕೊಡಬೇಕಾಗಿದೆ” ಎಂದು ಒತ್ತಾಯಿಸಿದರು.

ರೈತರಾದ ಪಿ ವೀರೇಶ, ನಾಗೇಂದ್ರ ಚೌದರಿ, ಶಿವಾರ್ಜುನ ನಾಯಕ, ಸಂಗಮೇಶ ನಾಯಕ, ಶಿವಕುಮಾರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...