ರಾಯಚೂರು | ಎರಡು ವರ್ಷ ಕಳೆದರೂ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಭಾಗ್ಯ ಇಲ್ಲ

Date:

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್‌ ಪಟ್ಟಣದ ಇಂದಿರಾ ಕ್ಯಾಂಟಿನ್ ಕಾಮಗಾರಿ ಕುಂಟುತ್ತ ಸಾಗಿದ್ದು, ಅಂತೂ ಪೂರ್ಣಗೊಂಡಿತು. ಇದೀಗ ಕಾಮಗಾರಿ ಪೂರ್ಣಗೊಂಡು ಎರಡು ವರ್ಷ ಕಳೆದರೂ ಕೂಡಾ ಈವರೆಗೆ ಉದ್ಘಾಟನೆ ಭಾಗ್ಯ ಕಾರಣದಿರುವುದು, ಕುಡುಕರ ಅಡ್ಡವಾಗಿ ಮಾರ್ಪಟ್ಟಿದೆ.

ಕ್ಯಾಂಟಿನ್ ಅಡುಗೆ ಕೊಠಡಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಗತ್ಯ ಉಪಕರಣಗಳನ್ನು ಅಳವಡಿಸಿ 2 ವರ್ಷಗಳು ಕಳೆದಿದೆ. ಬಳಕೆ ಮಾಡದ್ದರಿಂದ ಉಪಕರಣಗಳು ಧೂಳಿನಿಂದ ಆವೃತವಾಗಿವೆ. ಅಲ್ಲದೆ ತುಕ್ಕು ಹಿಡಿದು ಉಪಯೋಗಕ್ಕೆ ಬಾರದಂತಾಗಬಹುದು. ಸಾರ್ವಜನಿಕರಿಗೆ ಅನುಕೂಲವಾಗಲೆಂದು ಜನಸಾಮಾನ್ಯರ ಟ್ಯಾಕ್ಸ್‌ ಹಣದಿಂದ ಸರ್ಕಾರ ಯೋಜನೆಗಳನ್ನು ನೀಡುತ್ತದೆ. ಆದರೆ ಸಂಬಂಧಪಟ್ಟವರು, ಗುತ್ತಿಗೆದಾರರು ನಿಗಾ ವಹಿಸದ ಕಾರಣ ಎಲ್ಲವೂ ವ್ಯರ್ಥವಾಗುವ ಹಂತಕ್ಕೆ ತಲುಪಿವೆ.

“ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಅತ್ಯಂತ ಕಡಿಮೆ ದರದಲ್ಲಿ ಊಟ, ಉಪಹಾರ ದೊರೆಯಲೆಂದು ಇಂದಿರಾ ಕ್ಯಾಂಟಿನ್ ಆರಂಭಿಸುವ ಯೋಜನೆ ಘೋಷಿಸಿತು. ಆದರೆ ಸುಸಜ್ಜಿತ ಕಟ್ಟದವಿದ್ದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಯಾವಾಗ ಕಾರ್ಯಾರಂಭವಾಗುವುದೋ, ಜನಸಾಮಾನ್ಯರಿಗೆ ಊಟ ತಿಂಡಿ ಸಿಗುವುದೋ ಕಾದು ನೋಡಬೇಕಿದೆ” ಎಂದು ಸಾರ್ವಜನಿಕರು ಕಾತರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000075052

ಪಟ್ಟಣದ ಸಮಾಜಸೇವಕ ಸಾದೀಕ್ ಬೇಗ್ ಮತಮಾಡಿ, “ಪುರಸಭೆ ಮತ್ತು ಕ್ಷೇತ್ರದ ಕಾಂಗ್ರೆಸ್ ಶಾಸಕರು ಆದಷ್ಟು ಬೇಗ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲು ಇಚ್ಚಾಶಕ್ತಿ ತೋರಿಸಬೇಕು. ಇದರಿಂದ ನಿತ್ಯ ಪಟ್ಟಣಕ್ಕೆ ಬರುವ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಗ್ರಾಮೀಣ ಭಾಗದ ಬಡ ಕೂಲಿಕಾರ್ಮಿಕರಿಗೆ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟ ದೊರೆಯುವುದು. ಆಸ್ಪತ್ರೆ ಮುಂಭಾಗ ಇಂದಿರಾ ಕ್ಯಾಂಟಿನ್‌ನ ಸುಸಜ್ಜಿತವಾದ ಕಟ್ಟಡ ನಿರ್ಮಾಣವಾಗಿದೆ. ಆದಷ್ಟು ಬೇಗ ನಿರ್ವಹಣೆಯಾದರೆ ಬಡ ಜನರಿಗೆ ಅನುಕೂಲವಾಗುತ್ತದೆ” ಎಂದರು.

ಕೂಲಿಕಾರರ ಸಂಘದ ಮುಖಂಡ ಖಾಜಾ ಸಾಬ್ ಮಾತನಾಡಿ, “ಇಂದಿರಾ ಕ್ಯಾಂಟಿನ್ ನಿರ್ಮಾಣವಾಗಬೇಕೆಮದು ಆಗ್ರಹಿಸಿದ್ದೆವು. ಆ ಬೇಡಿಕೆ ಈಡೇರಿದೆ. ಈಗ ಉದ್ಘಾಟನೆಗೂ ಕೂಡ ಆಗ್ರಹ ಮಾಡುವಂತಾಗಿದೆ. ಸುಮಾರು 2 ವರ್ಷಗಳಿಂದ ಇಂದಿರಾ ಕ್ಯಾಂಟಿನ್ ಕೆಲಸ ನಿಂತುಹೋಗಿದೆ. ಅದರ ಬಗ್ಗೆ ಯಾರೂ ಕೇಳುವವರಿಲ್ಲ, ಗಮನಿಸುವವರಿಲ್ಲ. ಸಾವಿರಾರು ಹಣ ಖರ್ಚು ಮಾಡಿ ಸುಂದರವಾದ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯವೇ ಕಾಣುವಂತಿಲ್ಲ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ” ಎಂದು ಹೇಳಿದರು.

1000075049

ಮಾಜಿ ಕಾಂಗ್ರೆಸ್ ಶಾಸಕ ಡಿ ಎಸ್ ಹುಲಗೇರಿ ಮಾತನಾಡಿ, “ಟೆಂಡರ್ ಕರೆದು ಮತ್ತೆ ಬಾಕಿ ಕೆಲಸ ಮಾಡಲಾಗುವುದು. ಸರ್ಕಾರ ಗುತ್ತಿಗೆ ನಿರ್ಣಯ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ ಅವರ ಜತೆಗೆ ಮಾತನಾಡಿ, ಆದಷ್ಟು ಬೇಗ ಪ್ರಾರಂಭಿಸುವೆ. ಜನರಿಗೆ ಅನುಕೂಲವಾಗುವಂತೆ ಮಾಡಲು ಪ್ರಯತ್ನಿಸುವೆ” ಎಂದು ಹೇಳಿದರು.

1000075064
Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...