ರಾಯಚೂರು | ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಆರೋಪ; 3 ಸೈಬರ್‌ ಕೇಂದ್ರಗಳ ವಿರುದ್ಧ ಎಫ್‌ಐಆರ್

Date:

ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆ ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ ₹2,000 ನೀಡುವ ಈ ಯೋಜನೆಗೆ ಆನ್​ಲೈನ್​ ಮೂಲಕ ಈಗಾಗಲೇ ನೋಂದಣಿ ಪ್ರತಿಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಹಣ ಪಡೆಯುವಂತಿಲ್ಲ ಎಂದು ಸರ್ಕಾರವೇ ಹೇಳಿದೆ. ಆದರೂ ಖಾಸಗಿ ಸೈಬರ್ ಸೆಂಟರ್​ಗಳು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿವೆ. ಅದರಂತೆ ರಾಯಚೂರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಮೂರು ಸೈಬರ್ ಕೇಂದ್ರಗಳ ವಿರುದ್ಧ ದೂರು ದಾಖಲಾಗಿದೆ.

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಗ್ರಾಹಕರಿಂದ ₹100-₹200 ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆ ಮಾನ್ವಿಯ 3 ಸೈಬರ್ ಕೇಂದ್ರಗಳ ವಿರುದ್ಧ ದೂರು ದಾಖಲಾಗಿದೆ. ಹಣ ವಸೂಲಿ ಮಾಡುತ್ತಿದ್ದ ಮಾಹಿತಿ ಮೇರೆಗೆ ಮಾನ್ವಿ ತಹಶೀಲ್ದಾರ್ ಚಂದ್ರಕಾಂತ್ ಅವರು ಸೈಬರ್​ ಸೆಂಟರ್​ಗಳ ಮೇಲೆ ದಾಳಿ ಮಾಡಿದ್ದು, ಈ ವೇಳೆ ಅಧಿಕೃತ ಸರ್ಕಾರಿ ಐಡಿಯನ್ನು ಅಕ್ರಮವಾಗಿ ಪಡೆದು ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಅರ್ಜಿ ಸಲ್ಲಿಕೆ ಮಾಡುತ್ತಿರುವುದು ಪತ್ತೆಯಾಗಿದೆ.

ಲಕ್ಷ್ಮಿ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್, ಎಕ್ಸೆಲ್ ಕಂಪ್ಯೂಟರ್​ ಸೆಂಟರ್​ನಲ್ಲಿ ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಚಂದ್ರಕಾಂತ್ ಅವರು ನಗರದ ಮೂರು ಸೈಬರ್ ಸೆಂಟರ್‌ಗಳ​ ವಿರುದ್ಧ ಮಾನ್ವಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪೊಲೀಸರು, ಐಟಿ ಆಕ್ಟ್ ಹಾಗೂ ಐಪಿಸಿ ಸೆಕ್ಷನ್ 420 ವಂಚನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೃಹ ಲಕ್ಷ್ಮಿ | ಸೇವಾ ಕೇಂದ್ರಗಳಲ್ಲಿ ದುಡ್ಡು ಪಡೆದರೆ ಕ್ರಿಮಿನಲ್ ಕೇಸ್:‌ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗಂಭೀರವಾಗಿ ಪರಿಗಣಿಸಿದ್ದು, “ಅರ್ಹ ಫಲಾನುಭವಿಗಳಿಂದ ಹಣ ಪಡೆದುಕೊಂಡರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜೊತೆಗೆ ಐಡಿ ಕ್ಯಾನ್ಸಲ್ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಎಚ್ಚರಿಕೆಯ ನಡುವೆಯೂ ಖಾಸಗಿ ಸೈಬರ್ ಸೆಂಟರ್​ಗಳು ಅಕ್ರಮವಾಗಿ ಐಡಿ ಪಡೆದು ಸಾರ್ವಜನಿಕರಿಂದ ಹಣ ವಸೂಲಿಗೆ ಇಳಿದಿರುವುದು ಕಂಡುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...