ರಾಯಚೂರು | ವಸತಿ ಯೋಜನೆಯ ಹೆಸರಿನಲ್ಲಿ ಹಣ ವಸೂಲಿ: ಪಿಡಿಒ ಶಂಶುದ್ದೀನ್ ವಿರುದ್ಧ ಆರೋಪ

Date:

ದೇವದುರ್ಗ ತಾಲೂಕಿನ ಮಲದಕ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಯೋಜನೆಯ ಹೆಸರಿನಲ್ಲಿ ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪಿಡಿಒ ಶಂಶುದ್ದೀನ್ ವಸತಿ ಯೋಜನೆಯಡಿ ಹೆಚ್ಚುವರಿ ಮನೆ ಮಂಜೂರಾಗಿದೆಯೆಂದು ಸುಳ್ಳು ಮಾಹಿತಿ ನೀಡಿ ಜನರಿಂದ ಹಣ ಪಡೆಯುತ್ತಿದ್ದಾರೆ ಎಂದು ಮಲದಕ್ ಗ್ರಾಮದ ಮುಖಂಡ ಭೀಮರಾಯ ಹೊಸಮನಿ ಆರೋಪಿಸಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಸರ್ಕಾರದಿಂದ ಯಾವುದೇ ಗ್ರಾಮಕ್ಕೆ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಲು ಫಲಾನುಭವಿಗಳನ್ನು ಆಯ್ಕೆ ಮಾಡಲು ಗ್ರಾಮಸಭೆ, ಜಿಲ್ಲಾ ಪಂಚಾಯಿತಿ ಹಾಗೂ ಸಂಬಂಧಿಸಿದ ಇಲಾಖೆಗೆ ಮನೆಗಳ ಪಟ್ಟಿ ಕಳುಹಿಸಬೇಕು. ಸರ್ಕಾರದ ಯಾವುದೇ ನಿಯಮಗಳ ಪಾಲನೆ ಮಾಡದೆ, ಯೋಜನೆಯ ಬಗ್ಗೆ ಸ್ಪಷ್ಟಪಡಿಸದೇ ನಿವಾಸಿಗಳಿಂದ ಹಣ ಪಡೆಯುತ್ತಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ವೃದ್ಧೆಯ ತೆಂಗಿನ ತೋಟ ನಾಶ; ದುಷ್ಕರ್ಮಿಗಳ ಅಟ್ಟಹಾಸಕ್ಕೆ 42 ತೆಂಗಿನ ಮರಗಳು ಬಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಸತಿ ಯೋಜನೆಯಡಿ ಹೆಚ್ಚುವರಿಯಾಗಿ 300 ಮನೆ ಮಂಜುರಾಗಿದೆಯೆಂದು ನಂಬಿಸಿ ಪಿಡಿಒ ಗ್ರಾಮಸ್ಥರಿಂದ ₹30 ಸಾವಿರ ಹಣ ಪಡೆಯುತ್ತಿದ್ದಾರೆ. ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವಿಚಾರಿಸಿದರೆ ಮನೆ ಮಂಜುರಾಗಿರುವ ಬಗ್ಗೆ ಮಾಹಿತಿಯಿಲ್ಲವೆಂದು ಹೇಳುತ್ತಿದ್ದಾರೆ. ಮನೆ ಮಂಜೂರು ನೆಪದಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ. ಕೂಡಲೇ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಮನವಿ ಮಾಡಿದರು.

ಮುಖಂಡರಾದ ಆನಂದ, ದೇವೇಂದ್ರಪ್ಪ, ಮಲ್ಲೇಶ ನಾಯಕ, ಶಿವರಾಜ ನಾಯಕ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...