ರಾಯಚೂರು | ವಿಶೇಷಚೇತನ ಅನುದಾನ ಪೂರ್ಣ ಬಳಕೆಯಲ್ಲಿ ವಿಫಲ: ಸುರೇಶ ಭಂಡಾರಿ ಮದುಗಲ್

Date:

ವಿಶೇಷಚೇತನರ ಕಲ್ಯಾಣಕ್ಕಾಗಿ ರೂಪಿಸಿರುವ ಕಾಯ್ದೆ ಕಾನೂನುಗಳನ್ನು ಜಿಲ್ಲಾಡಳಿತ ಉಲ್ಲಂಘಿಸುತ್ತಿದೆ. ವಿಶೇಷಚೇತನರ ಅನುದಾನ ಪೂರ್ಣಪ್ರಮಾಣದ ಬಳಕೆಯಲ್ಲಿ ವಿಫಲವಾಗಿದೆ ಎಂದು ವಿಶೇಷಚೇತನರ ಆರ್‌ಪಿಡಿ ಟಾಸ್ಕ ಫೋರ್ಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಭಂಡಾರಿ ಮದುಗಲ್ ಆರೋಪಿಸಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ವಿಶೇಷಚೇತನರಿಗಾಗಿ ಪ್ರತ್ಯೇಕ ಇಲಾಖೆ ಪ್ರಾರಂಭಿಸಿದ್ದರು ಇಲಾಖೆ ಅಧಿಕಾರಿಗಳು ವಿಕಲಚೇತನ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ವಿಶೇಷಚೇತನರಿಗೆ ಗ್ರಾಮ, ತಾಲೂಕ ಮತ್ತು ಜಿಲ್ಲಾ ಪಂಚಾಯ್ತಿ ಹಾಗೂ ಶಾಸಕರು, ಸಂಸದರ ಅನುದಾನ ಮೀಸಲಿದ್ದರೂ ವಿಶೇಷಚೇತನರಿಗೆ ಬಳಕೆಯಾಗದೇ ಬೇರೆ ಕಾರ್ಯಗಳಿಗೆ ಅನುದಾನ ಬಳಸಲಾಗುತ್ತಿದೆ.

ಕಳೆದ ನಾಲ್ಕು ವರ್ಷಗಳಿಂದ ಗ್ರಾಮ ಪಂಚಾಯ್ತಿ ಅನುದಾನ ಬಳಕೆಯಾಗದೇ ಹೋಗಿದೆ. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಲ್ಲಿ ಅನುಷ್ಟಾನ ಸಮಿತಿ ರಚಿಸಲಾಗಿದೆ. ಆದರೆ ಇಲ್ಲಿಯವರೆಗೆ ಎರಡು ಸಭೆಗಳು ಮಾತ್ರ ಆಗಿವೆ. ಸಮಿತಿಗೆ ನಾಮನಿರ್ದೇಶನಗೊಂಡ ಸದಸ್ಯರನ್ನು ಮೂರು ವರ್ಷಗಳಿಗೊಮ್ಮ ಬದಲಾವಣೆ ಮಾಡಬೇಕೆಂಬ ನಿಯಮವಿದ್ದರೂ ಅವಧಿ ಮುಗಿದು ಎರಡು ವರ್ಷವಾದರೂ ಬದಲಾವಣೆ ಮಾಡುತ್ತಿಲ್ಲ. ತ್ರಿಚಕ್ರವಾಹನ ಫಲಾನುಭವಿಗಳ ಆಯ್ಕೆ ಸಮಿತಿಗೆ ನಾಮನಿರ್ದೇಶನಗೊಂಡಿರುವ ಸದಸ್ಯರು ಕಳೆದ 12 ವರ್ಷಗಳಿಂದ ಬದಲಾವಣೆ ಮಾಡದೇ ನಿಯಮ ಉಲ್ಲಂಘಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಕಲಚೇತನರಿಗೆ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳರ್ಯಾಂಪ್ ವ್ಯವಸ್ಥೆ ಮಾಡಿಲ್ಲ. ನಿರ್ಮಾಣವಾಗಿದ್ದರೂ ಅವೈಜ್ಞಾನಿಕವಾಗಿವೆ. ಇನ್ನೂ ಅನರ್ಹರಿಗೆ ವಿಕಲಚೇತನ ಪ್ರಮಾಣ ಪತ್ರ ನೀಡಲಾಗುತ್ತಿದೆ. ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಲಿಖಿತ, ದಾಖಲೆ ಸಹಿತ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಅವರು ಸಹ ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ತಾಲೂಕ ಮಟ್ಟದಲ್ಲಿಯೂ ಕುಂದುಕೊರತೆ ಸಭೆ ನಡೆಯುತ್ತಿಲ್ಲ. ವಿಕಲಚೇತನ ಇಲಾಖೆ ಅಧಿಕಾರಿಗಳು ತಮಗೆ ಬೇಕಾದವರಿಗೆ ಯೋಜನೆ ನೀಡಲಾಗುತ್ತಿದೆ.

ಹಣ ಪಡೆದ ಅನರ್ಹರನ್ನು ಆಯ್ಕೆ ಮಾಡಲಾಗುತ್ತಿದೆ.  ಅನುದಾನ ಬಳಕೆಯಾಗದೇ ಇರುವದನ್ನು ಗಂಬೀರವಾಗಿ ಪರಿಗಣ ಸಿ ಜಿಲ್ಲಾಧಿಕಾರಿಗಳು ಸಭೆ ಕರೆದು ಸಮಸ್ಯೆಗಳಿಗೆ ಪರಿಹಾರ ಒದಗಿಸದೇ ಹೋದರೆ ಹೋರಾಟ ನಡೆಸುವದಾಗಿ ಎಚ್ಚರಿಸಿದರು.

ಸಂಘಟನೆ ಭೀಮಸೇನ ಮಾತನಾಡಿ ವಿಶೇಷಚೇತನರನ್ನು ಬಿಕ್ಷಕರಂತೆ ಅಧಿಕಾರಿಗಳು ನೋಡುತ್ತಿದ್ದಾರೆ. ವಿಕಲಚೇತನರ ಅನುದಾನ ಅನ್ಯ ಯೋಜನೆಗಳಿಗೆ ಬಳಕೆಯಾಗುತ್ತಿದೆ. ಸಂಸದರು, ಶಾಸಕರುಗಳು ವಿಕಲಚೇತನರಿಗೆ ಮೀಸಲಾದ ಅನುದಾನ ಸದ್ಭಳಕೆ ಮಾಡಲು ಬಿಡುತ್ತಿಲ್ಲ. ವಿಕಲಚೇತನ ಅಧಿಕಾರಿ ಕಚೇರಿಯಲ್ಲಿಯೇ ಇರದೇ ದೂರದ ಊರುಗಳಿಂದ ಬರುವ ವಿಕಲಚೇತನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ.  ವಿಕಚೇತನ ಯೋಜನೆಗಳಿಗೆ ನಾಮನಿರ್ದೇಶನಗೊಂಡಿರುವವರು ಸಹ ಅಂಗವಿಕಲರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಅನುದಾನ ದುರ್ಬಳಕೆಯಾಗುತ್ತಿದೆ. ಕೂಡಲೇ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಮುಂದಾಗಬೇಕೆಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂ.ಡಿ. ಜಾಫರ್, ಮಹ್ಮದ ಅನ್ವರ್, ರಾಯಪ್ಪ, ನಾಗರಾಜ, ಹನುಮಯ್ಯ, ಅದೀಮ್ ಅಹ್ಮದ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...