ರಾಯಚೂರು | ಕೃಷಿ ಉತ್ಪನ್ನಗಳ ಬೆಲೆ ಕುಸಿತ; ಪ್ರೋತ್ಸಾಹಧನ ನೀಡುವಂತೆ ರೈತರ ಒತ್ತಾಯ

Date:

ಕೃಷಿ ಉತ್ಪನ್ನಗಳ ಬೆಲೆ ಕುಸಿತವಾಗಿರುವ ಹಿನ್ನೆಲೆ ರೈತರಿಗೆ ಪ್ರೋತ್ಸಾಹಧನ ನೀಡಿ ಸರ್ಕಾರವೇ ರೈತರಿಂದ ಉತ್ಪನ್ನಗಳನ್ನು ಖರೀದಿ ಮಾಡಬೇಕು ಹಾಗೂ ಫಸಲ್ ಭೀಮಾ ಯೋಜನೆಯಡಿ ಆದ ಅಕ್ರಮದ ಬಗ್ಗೆ ತನಿಖೆ ಹಾಗೂ ನೈಜ ರೈತರ ಖಾತೆಗಳಿಗೆ ವಿಮೆ ಹಣ ಜಮಾ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ವೋದಯ ಕರ್ನಾಟಕ ಪಕ್ಷ ರಾಯಚೂರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.

ಜಿಲ್ಲೆಯ ರೈತರಿಗೆ ಕೃಷಿ ಚಟುವಟಿಕೆಗಳನ್ನು ನಡೆಸಲು ಮತ್ತು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಕಷ್ಟು ತೊಂದರೆಯಾಗುತ್ತಿದೆ. ರೈತರ ಸಮಸ್ಯೆಗಳ ಬಗ್ಗೆ ಹಲವು ಬಾರಿ ಹೋರಾಟ ಮಾಡುತ್ತಾ ಬಂದಿದ್ದರೂ, ಸಮಸ್ಯೆಗಳು ಮಾತ್ರ ಬಗೆಹರಿಯದೆ ಉಳಿದಿವೆ. ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಬಾರದೇ ಕಾಲುವೆ ವ್ಯಾಪ್ತಿಯ ಮಾನ್ವಿ ಮತ್ತು ಸಿರವಾರ ಸೇರಿದಂತೆ ಇತರೆ ಭಾಗದ ರೈತರು ಜಮೀನುಗಳಿಗೆ ನೀರಿಲ್ಲದೇ ಕಂಗಾಲಾಗಿದ್ದಾರೆ ಎಂದು ಪಕ್ಷದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದರು.

2023-24ನೇ ಸಾಲಿನ ಬರ ಪರಿಹಾರ ಸಂಪೂರ್ಣವಾಗಿ ರೈತರಿಗೆ ಸಿಗದೇ ಇರುವುದು, ಎಪಿಎಂಸಿಯಲ್ಲಿ ರೈತರಿಗೆ ದಿನನಿತ್ಯ ಮೋಸವಾಗುತ್ತಿರುವುದು, 2024-25ರ ಅತಿವೃಷ್ಟಿಗೆ ಪರಿಹಾರ ಬಾರದೇ ಇರುವುದು, ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದಿರುವುದು, ಫಸಲ್ ಭಿಮಾ ಯೋಜನೆಯಡಿ ರೈತರ ಖಾತೆಗೆ ಜಮಾ ಆಗಬೇಕಿದ್ದ ವಿಮೆ ಹಣ ಬೇರೆಯವರ ಖಾತೆಗೆ ಜಮೆಯಾಗಿರುವ ಬಗ್ಗೆ ಈಗಾಗಲೇ ಸಿರವಾರ, ಮಾನ್ವಿ ಹಾಗೂ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ. ಇದರಿಂದ ನೈಜ ರೈತರಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಕ್ರೋ ಫೈನಾನ್ಸ್ ಸಾಲ ವಿತರಣೆ ನೆಪದಲ್ಲಿ ಬಡವರ ಮೇಲೆ ದೌರ್ಜನ್ಯ ಎಸಗುತ್ತಿದೆ. ಇದಕ್ಕೆ ಹಲವು ಅಮಾಯಕ ಜೀವಗಳು ಬಲಿಯಾಗಿವೆ. ಜಿಲ್ಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ರೈತರು ತಮ್ಮ ಉತ್ಪನ್ನಗಳನ್ನು ಮಾರಾಟಕ್ಕೆ ತರಲು ಸಮಸ್ಯೆಯಾಗುತ್ತಿದೆ ಕೂಡಲೇ ರಸ್ತೆ ದುರಸ್ತಿಗೆ ಮುಂದಾಗಬೇಕು. ತುಂಗಭದ್ರಾ ಎಡದಂಡೆ ನಾಲೆಯ ಮೈಲ್ 47, 69, 90 ಹಾಗೂ 104 ರಲ್ಲಿ ನಿಗಧಿತ ಗೇಜ್ ಕಾಯ್ದುಕೊಂಡು ಏಪ್ರಿಲ್ 10 ರವರೆಗೆ ನೀರು ಪೂರೈಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕೂಲಿ ಕಾರ್ಮಿಕರ ಅಹೋರಾತ್ರಿ ಗಣರಾಜೋತ್ಸವ

ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲೀಪಾಟೀಲ್, ಜಿಲ್ಲಾಧ್ಯಕ್ಷ ಜಾನ್‌ವೆಸ್ಲಿ, ಪ್ರಮುಖರಾದ ಪ್ರಭಾಕರ್ ಪಾಟೀಲ್, ವೀರೇಶ ಪಾಟೀಲ್, ಬೂದಯ್ಯ ಸ್ವಾಮಿ, ದೇವರಾಜ್ ನಾಯಕ, ನಿಂಗಪ್ಪ, ಹಾಜಿ ಮಸ್ತಾನ್, ಶಂಕ್ರಪ್ಪಗೌಡ, ಬಸನಗೌಡ ಮಾಲೀಪಾಟೀಲ್, ಯಂಕಪ್ಪ ಕಾರೋಬಾರಿ, ಸೂಗಯ್ಯ ಸ್ವಾಮಿ ಸೇರಿದಂತೆ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...