ರಾಯಚೂರು | ಪಿಡಿಒ ಅಮಾನತ್ತಾದಕ್ಕೆ ನನ್ನ ಮೇಲೆ ಸುಳ್ಳು ಆರೋಪ : ಶಾಸಕ ಮಾನಪ್ಪ ವಿರುದ್ಧ ಗೋವಿಂದ ನಾಯಕ ಗರಂ

Date:

ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರು ತಮ್ಮ ಆಪ್ತ ಸಹಾಯಕ ಹಾಗೂ ಪಿಡಿಒ ಪ್ರವೀಣ ಕುಮಾರ ಸಮರ್ಥನೆ ಮಾಡುವ ಭರದಲ್ಲಿ ನನ್ನ ಮೇಲೆ ಆರೋಪಿಸುತ್ತಿರುವುದು ಖಂಡನೀಯ ಎಂದು ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ತಿರುಗೇಟು ನೀಡಿದರು.

ʼಈ ಹಿಂದೆ ನಾನು ಬಿಜೆಪಿಯಲ್ಲಿದ್ದಾಗ ಆರ್ ಎಸ್ಎಸ್ ಗಣವೇಶಧಾರಿಯಲ್ಲಿನ ಫೋಟೋಗಳನ್ನು ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿ ಸಣ್ಣತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ. ನಾನು ರಾಜಕಾರಣಿ, ಸರ್ಕಾರಿ ನೌಕರನಲ್ಲ ಎಂದು ಗೋವಿಂದ ನಾಯಕ ಹೇಳಿದರು.

ಲಿಂಗಸುಗೂರುನಲ್ಲಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ʼಸರ್ಕಾರಿ ನೌಕರನಾಗಿ ಆರ್ ಎಸ್ಎಸ್ ಪಥ ಸಂಚಲನದಲ್ಲಿ ಭಾಗವಹಿಸಿರುವುದು ನಿಯಮಬಾಹೀರ. ಇದಕ್ಕೆ ರಾಜ್ಯ ಸರ್ಕಾರ ಪಿಡಿಒ ಪ್ರವೀಣ ಕುಮಾರ ಅವರನ್ನು ಅಮಾನತು ಮಾಡಿದ್ದು ಸ್ವಾಗತಾರ್ಹ. ಆದರೆ ಶಾಸಕ ಮಾನಪ್ಪ ವಜ್ಜಲ್ ಅವರಿಗೆ ಪಿಡಿಒ ಅವರನ್ನು ಅಮಾನತು ಮಾಡಿದ್ದನ್ನು ಸಹಿಸಿಕೊಳ್ಳಲಾಗದೆ ನನ್ನ ಮೇಲೆ ಆರೋಪಿಸಿ ನನ್ನ ಫೋಟೋ ವೈರಲ್ ಮಾಡಿ ‘ನಾಲ್ಕು ಓಟು ಪಡೆಯಲು ಆರ್‌ಎಸ್ಎಸ್ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಮಂಡಲ ಅಧ್ಯಕ್ಷರಾಗಿ ಮಾಡಿದ್ದಾರೆ’ ಎಂದು ಸುಳ್ಳು ಹೇಳಿಕೆ ನೀಡಿರುವ ಶಾಸಕ ವಜ್ಜಲರ್ ರ ಮತಿಭ್ರಮಣೆಯಾಗಿದೆʼ ಎಂದರು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾನಪ್ಪ ವಜ್ಜಲ್ ರಾಜಕೀಯ ಜೀವನ ಕಾಂಗ್ರೆಸ್ ನಿಂದ ಆರಂಭ ಮಾಡಿ ಬಳಿಕ‌ ಬಿಜೆಪಿ, ಜೆಡಿಎಸ್ ಗೆ ಹೋಗಿ ಈಗ ಪುನಃ ಬಿಜೆಪಿ ಸೇರಿ ಶಾಸಕರಾಗಿದ್ದಾರೆ. ಅಧಿಕಾರದ ಆಸೆಗಾಗಿ ಮತ್ತೆ ಯಾವ ಪಕ್ಷಕ್ಕೆ ಹೋಗುತ್ತಾರೋ ಗೊತ್ತಿಲ್ಲ ಎಂದು ಟೀಕಿಸಿದರು.

ʼನಾನು ಬಿಜೆಪಿಯಲ್ಲಿದ್ದಾಗ ಮಾನಪ್ಪ ವಜ್ಜಲ್ ಅವರ ವರ್ತನೆ, ಪಕ್ಷದಲ್ಲಿ ಸಾಮಾಜಿಕ ಅಸಮಾನತೆಯಿಂದ‌ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ನನ್ನ ಪಕ್ಷ ಸಂಘಟನೆಯ ಕೆಲಸ ನೋಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಇದನ್ನು ಸಹಿಸದೇ ಹಳೆಯ ಫೋಟೊ ಮಾಧ್ಯಮಗಳಲ್ಲಿ ಪ್ರದರ್ಶಿಸಿ ಏನು ಸಂದೇಶ ನೀಡಲು ಹೊರಟಿದ್ದಾರೆ. ಇದರಿಂದ ತಮ್ಮ ಆಪ್ತ ಸಹಾಯಕನ ರಕ್ಷಣೆ ಮಾಡಲು ಅಸಾಧ್ಯʼ ಎಂದು ಹೇಳಿದರು.

ಶಾಸಕ ಮಾನಪ್ಪ ವಜ್ಜಲ್ ಅಭಿವೃದ್ಧಿಯನ್ನು ಮರೆತು ರಾಜಕೀಯದಲ್ಲಿ ತೊಡಗಿರುವುದು ಶೋಭೆ ತರುವುದಿಲ್ಲ. ಶಾಸಕರ ಒಡೆತನದ ಗುತ್ತಿಗೆ ಸಂಸ್ಥೆ ಕೆಲಸ ಮಾಡಿಕೊಂಡು ಗುತ್ತಿಗೆದಾರರಿಗೆ ಹಣ ಪಾವತಿಸಿಲ್ಲ ಎಂದು ಸಹಾಯಕ ಆಯುಕ್ತರ ಕಚೇರಿಯ ಮುಂದೆ ಇತ್ತಿಚಿಗೆ ಪ್ರತಿಭಟನೆ ಮಾಡಿದ್ದರು. ಮೊದಲು ಅವರಿಗೆ ನ್ಯಾಯ ಒದಗಿಸಲಿ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು |RSS ಪಥಸಂಚಲನದಲ್ಲಿ ಭಾಗಿಯಾದ ಪಿಡಿಒ ಅಮಾನತು : ಶಾಸಕ ಮಾನಪ್ಪ ವಜ್ಜಲ್ ಆಕ್ರೋಶ

ಪತ್ರಿಕಾಗೋಷ್ಠಿಯಲ್ಲಿ ಎಪಿಎಂಸಿ ಅಧ್ಯಕ್ಷ ಅಮರೇಶ ಹಿರೆಹೆಸರೂರು, ಕಾಂಗ್ರೆಸ್ ಮುಖಂಡರಾದ ಹೆಚ್ ಮುದುಕಪ್ಪ‌ ವಕೀಲ, ಸಂಜೀವಪ್ಪ ಛಲವಾದಿ, ಸಂತೋಷ ಸೊಪ್ಪಿಮಠ, ಉಮೇಶ ಹುನಕುಂಟಿ, ನೀಲಪ್ಪ ಪವಾರ್, ಜೀವನಕುಮಾರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...