ರಾಯಚೂರು | ಜೆಡಿಎಸ್ ಮುಖಂಡರ ಮೇಲೆ ಸುಳ್ಳು ಪ್ರಕರಣ; ಆರೋಪಿಸಿ ಪ್ರತಿಭಟನೆ

Date:

ಜೆಡಿಎಸ್ ಪಕ್ಷದ ಮುಖಂಡರ ಮೇಲೆ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಪ್ರಕರಣವನ್ನು ದಾಖಲು ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ತಂಡದ ವಿರುದ್ಧ ಹಾಗೂ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಗಂಜ್ ವೃತ್ತದಲ್ಲಿ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗಂಜ್ ವೃತ್ತದಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡರು ಮತ್ತು ಶಾಸಕರ ವಿರುದ್ಧ ಸುಳ್ಳು ದೂರುಗಳನ್ನು ದಾಖಲು ಮಾಡುತ್ತಿದ್ದು ಹಾಗೂ ಸುಳ್ಳು ದೂರುಗಳನ್ನು ದಾಖಲಿಸಲು ಕಾಂಗ್ರೆಸ್ ಮುಖಂಡರ ತಂಡ ಪೋಲಿಸರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸುಳ್ಳು ಪ್ರಕರಣ ದಾಖಲು ಮಾಡಲು ಪ್ರಭಾವ ಬೀರುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸುಳ್ಳು ದೂರುಗಳನ್ನು ದಾಖಲು ಮಾಡುವವರನ್ನು ಬಂಧಿಸಲು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭೆ ಮಾಜಿ ಸದಸ್ಯ ಬಿ.ತಿಮ್ಮಾರೆಡ್ಡಿ ವಿರುದ್ಧ ಸುಳ್ಳು ಪ್ರಕರಣವನ್ನು ಜಿ.ತಿಮ್ಮಾರೆಡ್ಡಿ ಪೋಲಿಸರ ಜೊತೆಗೆ ವ್ಯವಹರಿಸಿ ಪ್ರಕರಣ ದಾಖಲಿಸುತ್ತಿದ್ದಾರೆ, ಮುಂದಿನ ಮಹಾ ನಗರ ಪಾಲಿಕೆ ಚುನಾವಣೆ ಸ್ಪರ್ಧಿಸದಂತೆ ಭಯ ಉಂಟು ಮಾಡುತ್ತಿದ್ದಾರೆ ಎಂದು ದೂರಿದರು.

ಯುವಕರನ್ನು ಬಳಸಿಕೊಂಡು ಸುಳ್ಳು ದೂರುಗಳು ದಾಖಲಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದರು. ಜೆಡಿಎಸ್ ಮುಖಂಡರ ಮೇಲೆ ನಿರಂತರವಾಗಿ ಸುಳ್ಳು ದೂರುಗಳು ದಾಖಲಿಸುತ್ತಿದ್ದು, ಮುಂದಿನ ಮಹಾ ನಗರ ಪಾಲಿಕೆ ಚುನಾವಣೆ ಸ್ಪರ್ಧಿಸುವ ಅಭ್ಯರ್ಥಿಗಳ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ, ಮಾನಸಿಕವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಮಟಕಾ, ಅಕ್ರಮ ಮರಳು, ಗಾಂಜಾ ನಡೆಯುತ್ತಿದ್ದು ತಡೆಗೆ ಪೋಲಿಸರ ವಿಫಲರಾಗಿದ್ದಾರೆ. ಇಂತಹವುಗಳಿಗೆ ಕಡಿವಾಣ ಹಾಕದೇ ಸುಳ್ಳು ಪ್ರಕರಣ ದಾಖಲಿಸುವಲ್ಲಿ ನಿರತರಾಗಿದ್ದ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ಜೆಡಿಎಸ್ ಮುಖಂಡರ ಮೇಲೆ ದಾಖಲಾದ ಸುಳ್ಳು ಪ್ರಕರಣ ರದ್ದುಗೊಳಿಸಬೇಕು, ಕುಮ್ಮಕ್ಕು ನೀಡುವ ವಾರ್ಡ್.ನಂ.7ರ ಕಾಂಗ್ರೆಸ್ ಮುಖಂಡ ಜಿ.ತಿಮ್ಮಾರೆಡ್ಡಿ ಮೇಲೆ ಸೂಕ್ತ ಕ್ರಮ ವಹಿಸಬೇಕು, ಸುಳ್ಳು ಪ್ರಕರಣ ದಾಖಲು ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ಮೇಲೆ ಕ್ರಮ ಕೈಗೊಳ್ಳಬೇಕು, ಅಟ್ರಾಸಿಟಿ ಕಾಯ್ದೆ ದುರ್ಬಳಕೆ ಮಾಡಿಕೊಳ್ಳುತ್ತಿರುವವ ವಿರುದ್ಧ ಕ್ರಮ ವಹಿಸಬೇಕು, ಒತ್ತಡಕ್ಕೆ ಮಣಿದು ಸುಳ್ಳು ದೂರು ದಾಖಲಿಸುವ ಠಾಣಾಧಿಕಾರಿ ಮೇಲೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮಸ್ಕಿ | ಅಕ್ರಮ ಮರಳು ಟಿಪ್ಪರ್ ಜಪ್ತಿ; ಇಬ್ಬರ ವಿರುದ್ದ ಪ್ರಕರಣ ದಾಖಲು

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು, ಜಿಲ್ಲಾ ಕಾರ್ಯಾಧ್ಯಕ್ಷ ಎನ್. ಶಿವಶಂಕರ ವಕೀಲ, ರಾಮನಗೌಡ ಏಗನೂರು, ಸಣ್ಣ ನರಸಿಂಹ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ನರಸಪ್ಪ, ಜಂಬುನಾಥ ಯಾದವ್, ಎಸ್ ರಾಜು, ಈರಣ್ಣ ಯಾದವ್ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...