ರಾಯಚೂರು | ಪರಿಶಿಷ್ಟ ಜಾತಿಯವರ ಮೇಲೆ ಸುಳ್ಳು ಪ್ರಕರಣ ದಾಖಲು; ಪಿಎಸ್ಐ ಅಮಾನತಿಗೆ ಆಗ್ರಹ

Date:

ಪರಿಶಿಷ್ಟ ಜಾತಿಯವರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿರುವ ಹಾಗೂ ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿರುವ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕವಿತಾಳ ಪೊಲೀಸ್‌ ಠಾಣೆಯ ಪಿಎಸ್‌ಐ ವೆಂಕಟೇಶ ನಾಯಕ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಕವಿತಾಳ ಪಟ್ಟಣದ ಮಸ್ಕಿ ಕ್ರಾಸ್‌ನಲ್ಲಿ ಧರಣಿ ಕುಳಿತ ಪ್ರತಿಭಟನಕಾರರು ಅಂಬೇಡ್ಕರ್‌ ವೃತ್ತದವರೆಗೆ ಮೆರವಣಿಗೆ ನಡೆಸಿ ಆನ್ವರಿ ಕ್ರಾಸ್‌ನಲ್ಲಿ ವಾಹನ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಗಂಗಪ್ಪ ತೋರಣದಿನ್ನಿ ಮಾತನಾಡಿ, “ಪಿಎಸ್‌ಐ ವೆಂಕಟೇಶ ನಾಯಕ ಹಲವು ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿಯವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಬಾಲಕಿ ಅಪಹರಣ, ಅತ್ಯಾಚಾರ ಪ್ರಕರಣದ ಕುರಿತು ತನಿಖೆ ನಡೆಯಬೇಕು. ಠಾಣಾ ವ್ಯಾಪ್ತಿಯ ಹಳ್ಳಿಗಳಲ್ಲಿ ಮಟ್ಕಾ, ಇಸ್ಪೀಟ್‌ ಜೂಜಾಟ, ಕೋಳಿ ಪಂದ್ಯ, ಅಕ್ರಮವಾಗಿ ಮದ್ಯ ಮಾರಾಟ ಹಾಗೂ ಗಾಂಜಾ ಮಾರಾಟ, ಅಕ್ರಮವಾಗಿ ಮರಳು ಸಾಗಣೆ ನಡೆಯುತ್ತಿದೆ. ಅದಕ್ಕೆ ಪಿಎಸ್‌ಐ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಠಾಣೆ ವ್ಯಾಪ್ತಿಯ ಪ್ರತಿಯೊಂದು ಬಾರ್‌ನಿಂದ ತಿಂಗಳು ವಸೂಲಿ ಹಣ ಮತ್ತು ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಲು ಒಂದು ಟ್ರ್ಯಾಕ್ಟರ್‌ಗೆ ತಿಂಗಳಿಗೆ ₹40,000 ನಿಗದಿಯಾಗಿದೆ. ಪ್ರತಿ ಹಳ್ಳಿಯಲ್ಲೂ 3 ರಿಂದ 4 ಪಾನ್‌ ಶಾಪ್‌ಗಳಲ್ಲಿ ಮದ್ಯದ ಬಾಟಲಿಗಳು ದೊರೆಯುತ್ತವೆ. ಕಳ್ಳತನವಾದಾಗ ಮತ್ತು ಕೊಲೆಗಳಾದಾಗ 24 ಗಂಟೆಗಳಲ್ಲಿ ಪತ್ತೆಹಚ್ಚಿ ಕಳ್ಳರನ್ನು ಮತ್ತು ಕೊಲೆಗಡುಕರನ್ನು ಬಂಧಿಸುತ್ತಾರೆ. ಆದರೆ ಪ್ರತಿ ಹಳ್ಳಿಗಳಲ್ಲೂ ದಿನನಿತ್ಯ ನಡೆಯುವ ಮದ್ಯ ಮಾರಾಟ, ಮಟ್ಕಾ ಒಸಿ ದಂಧೆಗಳು ಮಾತ್ರ ಇವರ ಗಮನಕ್ಕೆ ಬರುವುದಿಲ್ಲವೇಕೆ? ಇದಕ್ಕೆ ಮೇಲಾಧಿಕಾರಿಗಳೇ ಉತ್ತರಿಸಬೇಕಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಂದ ಸಿಂಧನೂರು ಡಿವೈಎಸ್‌ಪಿ ಬಿ ಎಸ್ ತಳವಾರ ಅವರು ಒಂದು ವಾರದೊಳಗೆ ನಿಮ್ಮ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹೂಳಲು ಸ್ಮಶಾನವಿಲ್ಲದೆ ತಿ. ನರಸೀಪುರದಿಂದ ದಾವಣಗೆರೆಗೆ ಮೃತದೇಹ ಕೊಂಡೊಯ್ದ ಅಲೆಮಾರಿ ಕೊರಚ ಸಮುದಾಯ

ಸಂಘಟನೆ ಮುಖಂಡರಾದ ಬಾಲಸ್ವಾಮಿ ಜಿನ್ನಾಪುರ, ತುರುಮಂದೆಪ್ಪ ಕಟ್ಟಿಮನಿ, ಲಾಳ್ಳೆಪ್ಪ, ಅರಳಪ್ಪ ತುಪ್ಪದೂರು, ಮೌನೇಶ ಕೊಡ್ಲಿ, ಸಂತೋಷ ಕಲಶೆಟ್ಟಿ, ಹುಚ್ಚಪ್ಪ ಬುಳ್ಳಾಪುರ, ರಮೇಶ ಗೂಗೆಬಾಳ, ಬಸವರಾಜ ಅಮೀನಗಡ, ಹನುಮಂತ ಬುಳ್ಳಾಪುರ, ಮೌನೇಶ ಬುಳ್ಳಾಪುರ, ಎಚ್ ಬಸವರಾಜ, ಅಮರೇಶ, ಈರಣ್ಣ ಕೆಳಗೇರಿ, ಜೋಸೆಫ್‌ ತೋರಣದಿನ್ನಿ, ಹುಚ್ಚರಡ್ಡಿ ಹಿರೇದಿನ್ನಿ, ಸುಧಾಕರ, ಕುಪ್ಪಣ್ಣ, ಅಬ್ರಾಹಂ, ವಿಜಯರಾಣಿ, ಪದ್ಮಾ, ಮಂಜುಳಾ, ಮೋನಮ್ಮ, ತಾಯಮ್ಮ, ಹನುಮಂತಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...