ರಾಯಚೂರು | ಪಹಣಿ ತಿದ್ದುಪಡಿ ವಿಳಂಬ : ರೈತರಿಂದ ಪ್ರತಿಭಟನೆ

Date:

ಪಹಣಿ ತಿದ್ದುಪಡಿ ಅರ್ಜಿ ಸಲ್ಲಿಸಿ ಸುಮಾರು ಐದು ವರ್ಷವಾದರೂ ಇನ್ನೂ ದಾಖಲೆ ತಿದ್ದುಪಡಿ ಮಾಡದೇ ಇರುವುದರಿಂದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಕಾನೂನುಬದ್ಧವಾಗಿ ಸಲ್ಲಿಸಿದ್ದರೂ, ಹಣ ನೀಡದ ಕಾರಣದಿಂದ ಹಿಂಬರಹ ಬರೆದು ಉದ್ದೇಶಪೂರ್ವಕವಾಗಿ ಕೆಲಸಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯು ಅಸಮಾಧಾನಗೊಂಡು ಪ್ರತಿಭಟನೆ ನಡೆಸಿದರು.

ಲಿಂಗಸೂಗೂರು ಸಹಾಯಕ ಆಯುಕ್ತರ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ರೈತರ ಹಕ್ಕಿನ ದಾಖಲೆಗಳನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದು, ಲಂಚ ನೀಡದಿದ್ದಕ್ಕೆ ಅನ್ಯಾಯ ಮಾಡುವುದು ಸಂಪೂರ್ಣ ಅಸಮಂಜಸ. ತಕ್ಷಣ ಪಹಣಿ ತಿದ್ದುಪಡಿ ಮಾಡಿ ರೈತರ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಲಿಂಗಸುಗೂರು ತಾಲ್ಲೂಕು ಮುದಗಲ್ಲ ಹೋಬಳಿಯ ಭೂಪೂರ ಗ್ರಾಮದ ಮೂಲದ ಮಲ್ಲಿಕಾರ್ಜುನ, ಸಹಾಯಕ ಆಯುಕ್ತರ ಕಚೇರಿಯಲ್ಲಿ ಪ್ರ.ದ.ಸ. ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಕೆಲಸ ಮಾಡಿಕೊಡುವ ಪ್ರಕ್ರಿಯೆ ಮಾಡುತ್ತಿದ್ದಾರೆ ಕೂಡಲೇ ಇವರ ಮೇಲೆ ಕ್ರಮ ಜರುಗಿಸಬೇಕು ಎಂದು ರೈತರು ಕಿಡಿಕಾರಿದರು.

ರೈತರು ಹಾಗೂ ಸಾಮಾನ್ಯ ಜನರು ಅರ್ಜಿಗಳು, ದಾಖಲೆ ತಿದ್ದುಪಡಿ ಸೇರಿದಂತೆ ಸರಕಾರಿ ಸೇವೆಗಳಿಗಾಗಿ ಕಚೇರಿಯನ್ನು ಸಂಪರ್ಕಿಸಿದಾಗ, ವಿನಾಕಾರಣ ಅಲೆದಾಡಿಸುತ್ತಿದ್ದಾರೆ. ಹಣ ನೀಡಿದವರಿಗೆ ಮಾತ್ರ ಕೆಲಸಗಳನ್ನು ಸುಗಮವಾಗಿ ಮುಗಿಸುತ್ತಿದ್ದಾರೆ. ಇವರ ಪ್ರಕ್ರಿಯೆ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗಿದ್ದು ಕೂಡಲೇ ಅಮಾನತು ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪೋತ್ನಾಳ ಗ್ರಾಮಸ್ಥರಿಂದ ಮೂಲಸೌಕರ್ಯಕ್ಕಾಗಿ ಪ್ರತಿಭಟನೆ

ಈ ವೇಳೆ ಶಿವಪುತ್ರಗೌಡ ಪೊಲೀಸ್ ಪಾಟೀಲ್, ಆನಂದ ಕುಂಬಾರ, ದುರ್ಗಾಪ್ರಸಾದ, ಮಹಾಂತಗೌಡ, ಲಾಲಸಾಬ, ಮಹ್ಮದ ಖಾಜಾಸಾಬ, ಹನಮಂತ ಪೈದೊಡ್ಡಿ , ಭೀಮಣ್ಣ ಪೂಜಾರಿ, ಕರಿಯಪ್ಪ ಬಸಣ್ಣ ಚಲುವಾದಿ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...