ರಾಯಚೂರು | ಗಾಳಿ ಮಳೆಗೆ ಬೆಳೆ ಹಾನಿ; ಪರಿಹಾರ ನೀಡಲು ಒತ್ತಾಯ

Date:

ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಮಳೆ ಪರಿಣಾಮ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾನಿಯಾಗಿದ್ದು, ಕೂಡಲೇ ಪರಿಹಾರ ಒದಗಿಸಲು ಪ್ರಾಮಾಣಿಕ ಸರ್ವೇ ಕಾರ್ಯ ನಡೆಯಬೇಕು ಮತ್ತು ರೈತರಿಗೆ ಎಷ್ಟು ನಷ್ಟ ಸಂಭವಿಸಿದೆ ಅಷ್ಟು ಪರಿಹಾರವನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಹೇಳಿದರು.

ಅವರಿಂದು ನಗರದಲ್ಲಿ ಮಾಧ್ಯಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, “ಜಿಲ್ಲೆಯ ಸಿಂಧನೂರು, ಮಸ್ಕಿ, ಲಿಂಗಸುಗೂರು ಸೇರಿದಂತೆ ತುಂಗಭದ್ರ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಗಾಳಿ ಮಳೆಯಿಂದ 2.50 ಲಕ್ಷ ಎಕರೆ ಪ್ರಮಾಣದಲ್ಲಿ ಭತ್ತದ ಬೆಳೆ ನಾಶವಾಗಿದೆ. ರೈತ ಕಷ್ಟಪಟ್ಟು ಬೆಳೆದ ಬೆಳೆ ಕಟಾವಿಗೆ ಬಂದ ಸಮಯದಲ್ಲಿ ಹವಾಮಾನ ವೈಪರೀತ್ಯ ಕಾರಣದಿಂದ ನೆಲಕಚ್ಚಿ ಸಂಪೂರ್ಣವಾಗಿ ಹಾಳಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳನ್ನು ಈಗಾಗಲೇ ಭೇಟಿ ಮಾಡಿ ಸಮಸ್ಯೆಯ ಕುರಿತು ಗಮನಕ್ಕೆ ತಂದಿದ್ದು, ಜಿಲ್ಲಾಧಿಕಾರಿಗಳು ಸರ್ವೆ ಕಾರ್ಯ ಮಾಡಿಸುವುದಗಿ ಹೇಳಿದ್ದಾರೆ” ಎಂದರು.

“ಜಿಲ್ಲೆಯಲ್ಲಿ ಇಷ್ಟೆಲ್ಲ ಬೆಳೆ ಹಾನಿಯಾದರೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಲಿ ಅಥವಾ ವಿರೋಧ ಪಕ್ಷದವರಾಗಲಿ ಸಹಕರಿಸುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಕೇಂದ್ರದ ವಿರುದ್ದ ಹಾಗೂ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಕಿತ್ತಾಡಿಕೊಳ್ಳಲು ಮುಂದಾಗಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಗ ಮೋಹನ್‌ದಾಸ್ ಏಕ ಸದಸ್ಯ ವಿಚಾರಣಾ ಸಮಿತಿ ಸಂವಿಧಾನ ಬಾಹಿರ: ಮಹೇಂದ್ರ ಕುಮಾರ್

ಜಿಲ್ಲೆಯಲ್ಲಿ ಶೇ.80ರಷ್ಟು ಭತ್ತದ ಬೆಳೆ ಹಾನಿಯಾಗಿದ್ದು, ಕೂಡಲೇ ಸರ್ಕಾರ ಎಕರೆಗೆ 25 ಸಾವಿರದಂತೆ ಬೆಳೆ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಪ್ರಮುಖರಾದ ಬೂದಯ್ಯ ಸ್ವಾಮಿ, ಅಮರೇಶ ಆಲ್ದಾಳ, ಲಿಂಗಾರೆಡ್ಡಿ, ನರಸಿಂಹಲು ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...