ರಾಯಚೂರು | ರೈತರ ಜಮೀನು ಹೆದ್ದಾರಿ ಪಾಲು; ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ

Date:

ರಾಯಚೂರು-ಮಾನ್ವಿ ಎಕ್ಸ್‌ಪ್ರೆಸ್‌ ಹೈವೆ ರಸ್ತೆಗೆ ಜಮೀನು ಸ್ವಾಧೀನಪಡಿಸಿಕೊಂಡು ಹೆದ್ದಾರಿ ಪ್ರಾಧಿಕಾರದವರು ರೈತರ ಜಮೀನನ್ನು ಬಳಸಿಕೊಂಡು ರೈತರಿಗೆ ಈವರೆಗೆ ಭೂಸ್ವಾಧೀನ ಪರಿಹಾರದ ಆಶ್ವಾಸನೆ ನೀಡುತ್ತಿದ್ದಾರೆಯೇ ಹೊರತು, ಪರಿಹಾರ ನೀಡುತ್ತಿಲ್ಲ. ಇದರಿಂದ ರೈತರು ಕಚೇರಿಗಳಿಗೆ ಅಲೆದಾಡುವಂತಾಗಿದೆ.

ರಾಯಚೂರು ಜಿಲ್ಲಾ ಕೇಂದ್ರದಿಂದ ಮಾನ್ವಿ ತಾಲೂಕಿಗೆ ತೆರಳುವ ಮಾರ್ಗ ಮಧ್ಯದ ಕಲ್ಲೂರು ಗ್ರಾಮದ 30 ಮಂದಿ ರೈತರ ಜಮೀನನ್ನು ವಶಪಡಿಸಿಕೊಂಡು ಇನ್ನೂ ಪರಿಹಾರ ನೀಡದೆ ಹಾಗೂ ಎಕರೆಗೆ ತಕ್ಕಂತೆ ಯಾವುದೇ ದರ ಹೇಳದೆ ಸತಾಯಿಸುತ್ತಿದ್ದಾರೆ ಎಂಬುದು ರೈತರ ಆರೋಪವಾಗಿದೆ.

ಅಧಿಕಾರಿಗಳು ಜಮೀನು ವಶಪಡಿಸಿಕೊಂಡು ಕಾಮಗಾರಿ ಪ್ರಾರಂಭಿಸಿದ್ದಾರೆ. ಆದರೆ ನೀರಾವರಿ ಭೂಮಿ, ಖುಷ್ಕಿ ಭೂಮಿ ಒಂದು ಎಕರೆಗೆ ಎಷ್ಟು ಹಣ ಎಂಬುದಾಗಿ ಜಮೀನಿನ ಬೆಲೆ ಕುರಿತು ಯಾವುದೇ ರೀತಿಯ ಮಾಹಿತಿ ನೀಡದೆ ರಸ್ತೆ ಕಾಮಗಾರಿ ಪ್ರಾರಂಭಿಸಿ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಹೆದ್ದಾರಿ ಕಾಮಗಾರಿ

ಜಮೀನು ಕಳೆದುಕೊಂಡ ಭೀಮರಾಯ ಕಲ್ಲೂರು ಮಾತನಾಡಿ,”ನಮಗೆ 2 ಎಕರೆ ಜಮೀನಿದೆ. ಹುಟ್ಟಿದಾಗಿನಿಂದಲೂ ವ್ಯವಸಾಯ ಕೃಷಿಯಲ್ಲಿ ಕೆಲಸ ಮಾಡುತ್ತ ಬಂದಿದ್ದೇವೆ. ಈಗ ರಸ್ತೆ ಕಾಮಗಾರಿಗಾಗಿ ನಮ್ಮ ಭೂಮಿ ಕಳೆದುಕೊಂಡಿದ್ದೇವೆ. ಅವರು ನೀಡುವ ಹಣದಿಂದ ಬೇರೆ ಕಡೆ ಒಂದಿಂಚು ಜಾಗವನ್ನೂ ಖರೀದಿಸಲು ಸಾಧ್ಯವಿಲ್ಲ. ಜಮೀನಿನ ಪರಿಹಾರದ ಹಣ ಕೊಡುವುದಕ್ಕೇ ನಮ್ಮನ್ನು ಸಾವಿರಾರು ಬಾರಿ ಕಚೇರಿಗಳಿಗೆ ಅಲೆದಾಡಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕಲ್ಲೂರು ಗ್ರಾಮದ ಪಕ್ಕದ ಕಪಗಲ್ ಗ್ರಾಮದ ಭೂಮಿ ಕಳೆದುಕೊಂಡ ರೈತರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಆದರೆ ಕಲ್ಲೂರ ಗ್ರಾಮದ 30 ಮಂದಿ ರೈತರಿಗೆ ಒಂದು ಪೈಸೆಯೂ ಹಣ ಕೊಟ್ಟಿಲ್ಲ, ಜಮೀನಿನಲ್ಲಿ ಸಾವಿರಾರು ಹಣ ಖರ್ಚುಮಾಡಿ ಬೆಳೆ ಬಿತ್ತನೆ ಕಾರ್ಯ ನಡೆದಿದೆ. ಆದರೆ ರಸ್ತೆ ಕಾಮಗಾರಿಗೆಂದು ಭೂಮಿ ವಶಪಡಿಸಿಕೊಂಡು ರೈತರನ್ನು ಕಂಗಾಲು ಮಾಡಿದ್ದಾರೆ” ಎಂದರು.

ಸಂತ್ರಸ್ತ ರೈತ

ರೈತ ಮುಖಂಡ ಸಾಜೀದ ಮಾತನಾಡಿ, “ಹೈವೆ ರಸ್ತೆಗಾಗಿ ರೈತರ ಒಂದು ಏಕರೆಯಷ್ಟು ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಕೆಲವು ಕಡೆ ಇನ್ನೂ ಹೆಚ್ಚಿನ ಭೂಮಿಯನ್ನು ವಶಪಡಿಸಿಕೊಂಡಿದ್ದು, ಯಾವುದೇ ಪರಿಹಾರ ನೀಡದೆ ಸತಾಯಿಸುತ್ತಿದ್ದಾರೆ. ಅಧಿಕಾರಿಗಳನ್ನು ಕೇಳಿದರೆ ತಮ್ಮ ಖಾತೆಗೆ ಹಾಕಲಾಗುವುದೆಂದು ಕೇವಲ ಆಶ್ವಾಸನೆ ನೀಡುತ್ತಿದ್ದಾರೆಯೇ ಹೊರತು ಪರಿಹಾರ ನೀಡುತ್ತಿಲ್ಲ” ಎಂದು ಅಸಮಾದಾನ ವ್ಯಕ್ತಪಡಿಸಿದರು.

“ರೈತರು ರಸ್ತೆಗಾಗಿ ಜಮೀನು ಬಿಟ್ಟು ಕೊಟ್ಟಿರುತ್ತಾರೆ. ಪ್ರತಿ ಎಕರೆಗೆ ₹30,000ದಿಂದ ₹40,000ರದವರೆಗೆ ಹಣ ಖರ್ಚು ಮಾಡಿ ಬೆಳೆ ಬಿತ್ತನೆ ಮಾಡಲಾಗಿದೆ. ಬರಗಾಲ ಪರಿಸ್ಥಿತಿಯಿದ್ದು, ಹೇಗೂ ಆಗಾಗ ಮಳೆ ಬಂದು ಆಸರೆಯಾಗಿದೆ. ಇವೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಹೆದ್ದಾರಿ ಪ್ರಾಧಿಕಾರದವರು ಪರಿಹಾರ ನೀಡದಿರುವುದು ಅತಿದೊಡ್ಡ ಸಮಸ್ಯೆಯಾಗಿದೆ” ಎಂದರು.

ರೈತ ಮುಖಂಡ

“ರೈತರರಿಗೆ ಹಲವು ಬಗೆಯ ಸಮಸ್ಯೆಗಳು ಕಾಡುತ್ತಿವೆ. ಹೈವೆ ರಸ್ತೆ ನಿರ್ಮಾಣ ಮಾಡಲು ಸಾವಿರಾರು ಕಾರ್ಮಿಕರು, ಬೃಹತ್ ಲಾರಿ, ಜೆಸಿಬಿ ಸೇರಿದಂತೆ ಇತರ ವಾಹನಗಳು ಬೆಳೆ ಜಮೀನಿನ ಪಕ್ಕದಲ್ಲಿ ತಿರುಗಾಡುತ್ತಿರುವುದರಿಂದ ಬಿತ್ತಿದ ಬೆಳೆಗಳು ಕುಂಠಿತಗೊಂಡಿವೆ. ಅಲ್ಲದೆ ಜಮೀನು ಸರ್ವೇಯಲ್ಲಿ ತಾರತಮ್ಯ ಎಸಗಿದ್ದಾರೆ. ಇವೆಲ್ಲಾ ಸಮಸ್ಯೆ ಎದುರಿಸುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಕೇಂದ್ರಗಳ ಪ್ರಾರಂಭ; ಎಲ್ಲೆಲ್ಲಿ?

ಮಾನ್ವಿಯಿಂದ ಪ್ರಾರಂಭವಾದ ರಸ್ತೆ ಕಾಮಗಾರಿ ಕಪಗಲ್, ಕಲ್ಲೂರು, ಸಾತ್ ಮೈಲ್ ಮೂಲಕ ರಾಯಚೂರು ಜಿಲ್ಲಾ ಕೇಂದ್ರದವರೆಗೂ ಕಾಮಗಾರಿ ನಡೆಯುತ್ತಿದೆ. ಕೆಲವು ರೈತರಿಗೆ ಹೆದ್ದಾರಿ ಪ್ರಾಧಿಕಾರದಿಂದ ಕಡಿಮೆ ಪರಿಹಾರ ಬಂದಿದೆ. ನೀರಾವರಿ ಭೂಮಿಯನ್ನು ಖುಷ್ಕಿ ಭೂಮಿಯೆಂದು ಗುರುತಿಸಿ ಕಡಿಮೆ ಪರಿಹಾರ ನೀಡಲಾಗಿದೆಯೆಂಬ ಆರೋಪವಿದೆ” ಎಂದು ಹೇಳಿದರು.

“ರಸ್ತೆಗಾಗಿ ಭೂಮಿಯೂ ಹೋಯಿತು. ಈಗ ಬೆಳೆದ ಬೆಳೆಯೂ ಧೂಳಿನಿಂದ ಹಾಳಾಗಿದೆ. ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಕೂಡಲೇ ಜಿಲ್ಲಾಧಿಕಾರಿ ಮಧ್ಯಸ್ಥಿಕೆ ವಹಿಸಿ ರೈತರ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...