ರಾಯಚೂರು | ಹಲವು ಬೇಡಿಕೆ ಈಡೇರಿಸುವಂತೆ ರೈತರ ಆಗ್ರಹ

Date:

ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

“ಸರ್ಕಾರ ಜೋಳ ಖರೀದಿ ಕೇಂದ್ರ ನೊಂದಣಿ ಆರಂಭಿಸಿದ್ದು, 1 ಎಕರೆಗೆ 10 ಕ್ವಿಂಟಲ್ ನಿಗದಿ ಮಾಡಿದೆ. ಇದನ್ನು ಪ್ರತಿ ಎಕರೆಗೆ 25 ಕ್ವಿಂಟಲ್ ನಿಗದಿಪಡಿಸಿ ಖರೀದಿ ಮಾಡಬೇಕು. ತುಂಗಭದ್ರಾ ಎಡದಂಡೆ ನಾಲೆಗೆ ಮೈಲ್ ಸಂಖ್ಯೆ 47, 69, 90, 104ರಲ್ಲಿ ನಿಗದಿತ ಗೇಜ್ ಕಾಯ್ದುಕೊಂಡು ಏಪ್ರಿಲ್‌ 10ರವರೆಗೆ ನೀರು ಪೂರೈಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

“ಫಸಲ್ ಭೀಮಾ ಯೋಜನೆಯಲ್ಲಿ ರೈತರ ಖಾತೆಗೆ ಹಣ ಜಮಾ ಆಗದೆ ಬೇರೆಯವರ ಖಾತೆಗೆ ಹಣ ಜಮಾವಾದ ಬಗ್ಗೆ ಜಿಲ್ಲೆಯಲ್ಲಿ ಸಿರವಾರ, ಮಾನ್ವಿ ಮತ್ತು ಜಾಲಹಳ್ಳಿ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದರೂ ತನಿಖೆ ಮಾತ್ರ ವಿಳಂಬವಾಗಿದೆ. ಕೂಡಲೇ ತನಿಖೆ ಮುಗಿಸಿ ಫಲಾನುಭವಿಗಳ ರೈತರ ಖಾತೆಗೆ ಹಣ ಜಮಾ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2024-25ರ ಅತಿವೃಷ್ಠಿಯಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರ ಕೊಡಬೇಕು. ಮತ್ತು 2023-24ರ ಬರಗಾಲದಿಂದ ನಷ್ಟ ಹೊಂದಿದ ಕೆಲವು ರೈತರಿಗೆ ಮಾತ್ರ ಬೆಳೆನಷ್ಟ ಪರಿಹಾರ ನೀಡಿದೆ. ಉಳಿದ ಎಲ್ಲ ರೈತರಿಗೂ ಪರಿಹಾರ ನೀಡಬೇಕು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರಿಗೆ ತೂಕದಲ್ಲಿ ಮೋಸವಾಗುತ್ತಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ತೊಗರಿ, ಮೆಣಸಿನಕಾಯಿ ಮತ್ತು ಭತ್ತದ ದರ ತೀವ್ರ ಕುಸಿತವಾಗಿದ್ದು, ₹2,000 ಪ್ರೋತ್ಸಾಹ ಧನ ನೀಡಿ ಸರ್ಕಾರವೇ ಖರೀದಿ ಮಾಡಬೇಕು” ಎಂದು ಮನವಿ ಮಾಡಿದರು.

“ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ರೈತರು ತಮ್ಮ ಸರಕು ಸಾಗಾಣಿಕೆಗಳನ್ನು ಸಾಗಿಸಲು ತೊಂದರೆಯಾಗುತ್ತಿದೆ.‌ ಮಾನ್ವಿ ತಾಲೂಕಿನ ಜಾನೇಕಲ್, ತಡಕಲ್, ಮರಕಮದಿನ್ನಿಯವರೆಗೆ ತೀರಾ ರಸ್ತೆ ಹದೆಗೆಟ್ಟಿದು, ಇದರ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಸರ್ಕಾರ ನಿಗದಿ ಮಾಡಿದಂತೆ ರೈತರಿಗೆ 7 ತಾಸು ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಕೂಡಲೇ 7 ತಾಸು ಪೂರೈಕೆಗೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ |‌ ಸರ್ಕಾರಿ ಶಾಲೆಗೆ ತಡೆಗೋಡೆ ನಿರ್ಮಿಸುವಲ್ಲಿ ಶಾಸಕ ಶರಣಪ್ರಕಾಶ ಪಾಟೀಲ್ ವಿಫಲ; ಆರೋಪ

ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್, ರಾಜ್ಯ ಉಪಾಧ್ಯಕ್ಷ ಬಸನಗೌಡ ಬಲ್ಲಟಗಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸೂಗುರಯ್ಯ ಸ್ವಾಮಿ, ಯಂಕಪ್ಪ ಕಾರಬಾರಿ, ಜಿಲ್ಲಾದ್ಯಕ್ಷ ಪ್ರಭಾಕರ ಪಾಟೀಲ್, ಮಲ್ಲಣ್ಣದಿನ್ನಿ, ಬೂದಯ್ಯಸ್ವಾಮಿ, ಗೋವಿಂದ ನಾಯಕ, ಹನುಮಗೌಡ, ವೀರೇಶ ಗವಿಗಟ್, ಶಾಂತಪ್ಪ ಗೌಡ ಗಬ್ಬೂರು, ದೇವರಾಜ ನಾಯಕ, ಹಾಜಿ ಮಸ್ತಾನ್, ಶರಣಪ್ಪ ಗೌಡ ಯೇರಡ್ಡಿ, ಸಿದ್ದಯ್ಯಸ್ವಾಮಿ, ಮಲ್ಲಣ್ಣ ಗೌಡೂರು, ಬ್ರಹ್ಮಯ್ಯ ಆಚಾರಿ, ಚಾಮರಸ ಜಾನೇಕಲ್, ಶಂಕ್ರಪ್ಪ ಗೌಡ, ಬಸವರಾಜ ನವಲಕಲ್, ಚಂದಪ್ಪ ಬಲ್ಲಟಗಿ, ಶಿವಪುತ್ರ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...