ರಾಯಚೂರು | ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

Date:

ಕೃಷಿ ಮಾರುಕಟ್ಟೆಯಲ್ಲಿ ತೊಗರಿ, ಕಡಲೆ, ಶೇಂಗಾ, ಸೂರ್ಯಪಾನ, ಭತ್ತ, ಈರುಳ್ಳಿ ಇನ್ನಿತರ ಬೆಳೆಗಳು ಮಾರುಕಟ್ಟೆಯಲ್ಲಿ ಸ್ಯಾಂಪಲ್ ತೆಗೆದು ಕೊಂಡು ದಲ್ಲಾಳಿಗಳಿಂದ ರೈತರಿಗೆ ಮೋಸವಾಗುತ್ತಿದೆ. ಹೀಗಾಗಿ ಕ್ರಮ ಕೈಗೊಳ್ಳಬೇಕು. ಜೊತೆಗೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರೈತ ಸಂಘದಿಂದ ರಾಯಚೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

2023- 24 ನೇ ಸಾಲಿನಲ್ಲಿ ಜಿಲ್ಲೆಯು ಬರಗಾಲ ಎಂದು ಘೋಷಣೆಯಾಗಿದ್ದು, ಜಿಲ್ಲೆಯ ರೈತರಿಗೆ ಬರ ಪರಿಹಾರ ಸಿಕ್ಕಿಲ್ಲ. ಕೂಡಲೇ ಬರ ಪರಿಹಾರ ರೈತರ ಖಾತೆಗೆ ಜಮಾ ಮಾಡಬೇಕು. 2024-25 ನೇ ವರ್ಷದಲ್ಲಿ ಅತಿಯಾದ ಮಳೆಯಿಂದ ನದಿ, ಹಳ್ಳ ಮತ್ತು ತೆಗ್ಗು ಪ್ರದೇಶದ ರೈತರ ಹೊಲಗಳಿಗೆ ನೀರು ನುಗ್ಗಿ ಬೆಳೆ ನಷ್ಟವಾಗಿದ್ದು ಕೂಡಲೇ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಲಗಳ ಪಂಪ್ ಸೆಟ್‌ಗಳಿಗೆ ಹಾಗೂ ಮನೆಗಳ ಲೈನ್‌ಗಳಿಗೆ ಸಮರ್ಪಕ ಮೂರು ಫೇಸ್ ವಿದ್ಯುತ್ ಸರಬರಾಜು ಮಾಡುತ್ತಿಲ್ಲ ತಕ್ಷಣ ವ್ಯವಸ್ಥೆ ಕಲ್ಪಿಸಿ ಬಿತ್ತನೆಗೆ ಅನುಕೂಲ ಮಾಡಿಕೊಡಬೇಕು. ಕೇಂದ್ರ ಸರ್ಕಾರ ಘೋಷಣೆ ಮಾಡಿದ ಹತ್ತಿ ಬೆಂಬಲ ಬೆಲೆ ಕಡಿಮೆ ಇದ್ದು ಕನಿಷ್ಟ ರೂ 2000 ಪ್ರೋತ್ಸಾಹ ಧನ ಕೊಟ್ಟು ಖರೀದಿ ಕೇಂದ್ರದ ಮೂಲಕ ಸರಕಾರವೇ ಖರೀದಿ ಮಾಡುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ರೈತರ ಜಮೀನುಗಳಲ್ಲಿ ನಮೂದಾಗಿರುವ ವಕ್ಫ್ ಪದವನ್ನು ತೆಗೆದು ಹಾಕಬೇಕು, ರೈತರು ಭೂಮಿ ಕಬಳಕೆ ನಿಲ್ಲಿಸಲು ಕ್ರಮ ವಹಿಸಬೇಕು. ನಾರಾಯಣ ಪೂರ ಬಲದಂಡೆ ಮತ್ತು ರಾಂಪೂರ ಏತ ನೀರಾವರಿ ಯೋಜನೆಯಡಿಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಭೂ ಪರಿಹಾರದ ಹಣ ಬಾಕಿ ಉಳಿದಿರುವುದನ್ನು ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು.

ಹತ್ತಿ ಮಾರುಕಟ್ಟೆಯಲ್ಲಿ ಸ್ಯಾಂಪಲ್ ನೋಡಿ ದರ ನಿಗದಿಪಡಿಸಿದ ನಂತರ ಅನ್‌ಲೋಡ್ ಮಾಡುವ ಸಮಯದಲ್ಲಿ ಅರ್ಧ ಸುರಿದ ನಂತರ 300 ರಿಂದ 400 ದರ ಕಟ್ ಮಾಡಲಾಗುತ್ತಿದೆ. ಇದರಿಂದಾಗಿ ರೈತರಿಗೆ ಕನಿಷ್ಟ ಪಕ್ಷ 5-8 ಸಾವಿರ ರೂಪಾಯಿ ನಷ್ಟವಾಗುತ್ತಿದೆ. ಕೂಡಲೇ ಇದನ್ನು ಸರಿಪಡಿಸಬೇಕು. ರೈತರಿಗೆ ವಂಚನೆ ಮಾಡುತ್ತಿರುವ ದಲ್ಲಾಳಿ ಹಾಗೂ ಮಾಲೀಕನಿಗೆ ಕಠಿಣ ಸೂಚನೆ ಹೊರಡಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್, ರಾಜ್ಯ ಉಪಾಧ್ಯಕ್ಷ ಅಮರಣ್ಣ ಗುಡಿಹಾಳ, ದೊಡ್ಡ ಬಸನಗೌಡ ಬಲ್ಲಟಗಿ, ಕಾರ್ಯದರ್ಶಿ ಯಂಕಪ್ಪ ಕಾರಬಾರಿ, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಮಲ್ಲಣ್ಣ ದಿನ್ನಿ, ಲಿಂಗಾರೆಡ್ಡಿ, ಬಸವರಾಜ, ಮಾಲಿ ಪಾಟೀಲ್, ಹನುಮಗೌಡ ನಾಯಕ, ವೀರೇಶ ಗವಿಮಠ, ಸಿದ್ದಯ್ಯ ಸ್ವಾಮಿ, ದೇವರಾಜ ನಾಯಕ, ಹಾಜಿ ಮಸ್ತಾನ್, ಮಲ್ಲಣ್ಣ ಗೌಡ, ಶಂಕ್ರಪ್ಪ ಗೌಡ, ಶರಣಪ್ಪ ಗೌಡ, ಗೋವಿಂದ ನಾಯಕ, ತಿಮ್ಮಣ್ಣ ನಾಯಕ, ರವಿ ಗಬ್ಬೂರು, ಅಮರೇಶ ಹಾಲದಳ, ಹುಸೇನ್ ಬಾಷಾ, ಬ್ರಹ್ಮಯ್ಯ ಆಚಾರ, ಬಸವರಾಜ ನವಲಕಲ್, ನಿಂಗಪ್ಪ ಹಟ್ಟಿ, ಚಾಮರಸ ಜಾನೇಕಲ್, ಸೂಗುರೆಡ್ಡಿ ಗಬ್ಬೂರು, ಉಮ್ಮಣ್ಣ ನಾಯಕ, ಉಮಾಪತಿ ಗೌಡ ಸೇರಿದಂತೆ ರೈತರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...