ರಾಯಚೂರು | ಐಐಐಟಿ ಸ್ಥಾಪನೆಗೆಂದು ಭೂಮಿ ನೀಡಿ ಕಂಗಾಲಾದ ರೈತರಿಂದ ನ್ಯಾಯಕ್ಕಾಗಿ ಪ್ರತಿಭಟನೆ

Date:

ರಾಯಚೂರು ಐಐಐಟಿಗೆ ಗುರುತಿಸಿರುವ ಜಾಗ ಈ ಹಿಂದೆ ದಲಿತರಿಗೆ ನೀಡಿದ ಭೂಮಿಯಾಗಿದೆ. ಈ ಭೂಮಿಯನ್ನೆ ನಂಬಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬಗಳಿಗೆ ಫಲವತ್ತವಲ್ಲದ ಭೂಮಿ ನೀಡಿದ್ದು, ಇತ್ತ ಪರಿಹಾರವಿಲ್ಲದೆ ಭೂಮಿ ಇಲ್ಲದೆ ಭೂಮಿ ಕಳೆದುಕೊಂಡು ರೈತರನ್ನು ಒಕ್ಕಲೆಬ್ಬಿಸಿದ್ದರಿಂದ ಕಳೆದ ಎರಡು ದಿನಗಳಿಂದ ರೈತರು ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಯಚೂರಿಗೆ ಐಐಟಿ ಬದಲಿಗೆ ತ್ರಿಬಲ್ ಐಟಿ ಮಂಜೂರು ಮಾಡಿದ್ದು, ತಾಲೂಕಿನ ವಡವಾಟಿ ಸೀಮಾಂತರದ ಸರ್ವೆ ನಂಬರ್ 99/1/3ರಲ್ಲಿ ಒಟ್ಟು 65 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಈ 65 ಎಕರೆಯಲ್ಲಿ ಈ ಹಿಂದೆ 1978ರಲ್ಲಿ ಭೂ ರಹಿತ ದಲಿತರಿಗೆ 35 ಎಕರೆ ಭೂಮಿಯನ್ನು 12 ಕುಟುಂಬಗಳಿಗೆ ನೀಡಲಾಗಿದೆ. ಈಗ ಗುರುತಿಸಿರುವ ಭೂಮಿಯಲ್ಲಿಯೇ ಈ ರೈತರು ಸಾಗುವಳಿ ಮಾಡುತ್ತಿದ್ದಾರೆ. ಸರಕಾರ ನೀಡಿದ್ದ ಭೂಮಿಯಲ್ಲಿ ಕೃಷಿಯನ್ನು ಮಾಡುತ್ತಿದ್ದಾರೆ. ಜಿಲ್ಲಾಡಳಿತವು ಇದೇ ಭೂಮಿಯನ್ನು ಕಾಲೇಜಿಗೆ ನೀಡಲು ಮುಂದಾಗಿದ್ದರಿಂದ, ದಲಿತ ಕುಟುಂಬಗಳು ಭೂಮಿ ಕಳೆದುಕೊಂಡಿದ್ದಾರೆ.

farmers 5

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತ್ರಿಬಲ್ ಐಟಿಗಾಗಿ ಗುರುತಿಸಿದ ಭೂಮಿಗೆ ರೈತರಿಗೆ ಪರ್ಯಾಯ ಭೂಮಿ ನೀಡಿದೆ. ಆದರೆ ಆ ಭೂಮಿಯು ಫಲವತ್ತಾಗಿಲ್ಲವೆಂಬುದು ರೈತರ ಆರೋಪವಾಗಿದೆ. ಜೊತೆಗೆ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ಪಹಣಿ , ಸರ್ವೆ ನಡೆಸಿ ರೈತರಿಗೆ ನೀಡುವ ಭರವಸೆ ನೀಡಿದ್ದು, ಇದುವರೆಗೂ ನೀಡಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 40 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದು, ಭೂಮಿಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಭೂಮಿ ಕಸಿದುಕೊಂಡು ಬದಲಿ ಭೂಮಿ ನೀಡಿದ್ದು, ಆದರೆ ಯಾವುದೇ ಕೆಲಸಕ್ಕೆ ಬಾರದಂತಾಗಿದೆ. ರೈತರಿಗೆ ಮೋಸ ಮಾಡಿದ್ದಾರೆ ಎಂದು ಪ್ರತಿಭಟನಾನಿರತ ಆರೋಪಿಸಿದ್ದಾರೆ.

ತ್ರಿಬಲ್‌ಐಟಿ ಕಟ್ಟಡ ಆರಂಭವಾಗಬೇಕಾದರೆ ದಲಿತರು ಈಗಾಗಲೇ ನೀಡಿರುವ ಭೂಮಿ ವಾಪಸ್ಸು ನೀಡಬೇಕು ಅಥವಾ ಬೇರೆಡೆ ಫಲವತ್ತಾದ ಭೂಮಿ ನೀಡಿ ಎಂದು ಸುಮಾರು 50ಕ್ಕೂ ಅಧಿಕ ರೈತರು, ಮುಖಂಡರಾದ ಸುದರ್ಶನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ವರದಿ : ಹಫೀಜುಲ್ಲ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...