ರಾಯಚೂರು | ಕನ್ನಡ ಬಗ್ಗೆ ಅವಹೇಳನ ಹೇಳಿಕೆ;ಕಮಲ್ ಹಾಸನ್ ವಿರುದ್ದ ಕರವೇ ಪ್ರತಿಭಟನೆ

Date:

ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ಹೇಳಿಕ ನೀಡಿದ ಚಿತ್ರನಟ ಕಮಲ್ ಹಾಸನ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕರವೇ ಹಾಗೂ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಕಮಲ್ ಹಾಸನ್ ಅವರ ಭಾವಚಿತ್ರಕ್ಕೆ ಬೂಟ್‌ನಿಂದ ಹೊಡೆದು ಆಕ್ರೋಶ ಹೊರ ಹಾಕಿ ತಕ್ಷಣ ತಮ್ಮ ಹೇಳಿಕೆಗೆ ತಪ್ಪಾಗಿದೆ ಎಂದು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಕಮಲ್ ಹಾಸನ್ ಅನೇಕ ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ.ನಟನ ಹೇಳಿಕೆಯಿಂದ ಕನ್ನಡಿಗರು ಹಾಗೂ ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ.ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕನ್ನಡ ಪರ ಸಂಘಟನೆ ಮುಖಂಡ ಬಸವರಾಜ ಕಳಸ ಮಾತನಾಡಿ, ಬೆಂಗಳೂರಿಗೆ ಪ್ರಚಾರ ಕಾರ್ಯಕ್ಕೆ ಆಗಮಿಸಿದ ಕಮಲ್ ಹಾಸನ್ ಅವರು ತಮಿಳ್‌ನಿಂದ ಕನ್ನಡ ಹುಟ್ಟಿಕೊಂಡಿದೆ ಎಂದು ಮಾತನಾಡಿದ್ದು, ಅಲ್ಲಿಯೇ ಇದ್ದ ನಟ ಶಿವರಾಜ್ ಕುಮಾರ ಅವರು ಖಂಡಿಸಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

2 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಕರ್ನಾಟಕದಲ್ಲಿರುವ 6 ಸಾವಿರ ಕೋಟಿ ಜನರಿಗೆ ಬೆಂಕಿ ಕೆಂಡವಾಗಿದೆ. ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದು, ನಾಡಿಗೆ ದ್ರೋಹ ಬಗೆದಂತೆ, ಕನ್ನಡದಲ್ಲಿಯೇ ಸಾಕಷ್ಟು ಸಿನಿಮಾ ಮಾಡಿದ್ದು ಭಾಷಾ ವಿರೋಧಿಯಾಗಿದ್ದಾರೆ ಎಂದು ಕಿಡಿ ಕಾರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಡ್ರಗ್ಸ್ ಸೇವನೆ ಆರೋಗ್ಯಕ್ಕೆ ಮಾರಕ;ಎಸ್ ಪಿ ಎಂ.ಪುಟ್ಟಮಾದಯ್ಯ

ಕಮಲ ಹಾಸನ್ ಅವರು ಕನ್ನಡ ಜನತೆಗೆ ಬೇಷರತ್ತಾಗಿ ಕ್ಷಮೆಯಾಚಿಸಬೇಕು, ರಾಜ್ಯದಲ್ಲಿ ಕಮಲ್ ಹಾಸನ್ ಹಾಗೂ ತಮಿಳ್ ಸಿನಿಮಾಗಳ ಪ್ರದರ್ಶನ ರದ್ದುಪಡಿಸಬೇಕು.ಕನ್ನಡ ಚಲನಚಿತ್ರ ಮಂಡಳಿಗೆ ಈ ಬಗ್ಗೆ ದೂರು ನೀಡಲಾಗುವುದು. ಭಾಷಾ ವಿರೋಧಿ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದರು.

ನಂತರ ಮಾತನಾಡಿದ ಅಶೋಕ ಕುಮಾರ ಸಿಕೆ ಜೈನ್ ಮಾತನಾಡಿ, ಕಮಲ್ ಹಾಸನ ಅವರು ರಾಜ್ಯಕ್ಕೆ ಬಂದು ಕನ್ನಡ ತಮಿಳನಿಂದ ಬಂದಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ರೊಚ್ಚಿಗೆಳುವಂತೆ ಮಾಡಿದ್ದಾರೆ.ನಾಡು ನುಡಿಗೆ ಹೆಸರಾದ ಕರ್ನಾಟಕ, ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿದನ್ನು ಖಂಡಿಸಿದರು.ರಾಜ್ಯದಲ್ಲಿ ತಮಿಳ್ ಸಿನಿಮಾಗಳ ಪ್ರದರ್ಶನ ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕೆ.ಇ. ಕುಮಾರ, ಬಷೀರ ಅಹಮದ್ ಹೊಸಮನಿ, ಸರೋಜಾ ಸಂಘ, ಕಲ್ಲೂರುಕರ್, ಜಗದೀಶ ಪಾಟೀಲ್ ವಿಶ್ವನಾಥ ಪಟ್ಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...