ರಾಯಚೂರು | ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಐದು ಮಂದಿಯ ಗಡಿಪಾರಿಗೆ ಆದೇಶ

Date:

ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಅಪರಾಧಗಳಲ್ಲಿ ಭಾಗಿಯಾಗಿದ್ದ ಐದು ಜನರನ್ನು ಸಹಾಯಕ ಆಯುಕ್ತ ಗಜಾನನ ಬಾಳೆ ಅವರು ಗಡಿಪಾರು ಮಾಡುವ ಆದೇಶ ಹೊರಡಿಸಿದ್ದಾರೆ.

ಮಿರ್ಜಾಪೂರ ಗ್ರಾಮದ ಈ ಐದು ಮಂದಿಯನ್ನು ಕಲಂ 55 ಕೆ.ಪಿ. ಕಾಯ್ದೆಯಡಿ ಗಡಿಪಾರು ಮಾಡಲಾಗಿದ್ದು, ಅವರಲ್ಲಿ ನಾಲ್ವರನ್ನ ವಿಜಯಪುರ ಜಿಲ್ಲೆಗೆ ಹಾಗೂ ಒಬ್ಬರನ್ನು ವಿಜಯನಗರ ಜಿಲ್ಲೆಗೆ ಕಳುಹಿಸಲಾಗಿದೆ.

ಮಲ್ಲಿಕಾರ್ಜುನ ಮಲದಕಲ್ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಗೆ, ಅರೋಲಿ ಭೀಮಣ್ಣ ಇಂಡಿ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಗೆ, ಗೋರೆಪ್ಪ ಇಂಡಿ ತಾಲೂಕಿನ ಹೋರ್ತಿ ಪೊಲೀಸ್ ಠಾಣೆ ವ್ಯಾಪ್ತಿಗೆ, ತಾಯಪ್ಪ ಇಂಡಿ ತಾಲೂಕಿನ ಝಳಕಿ ಪೊಲೀಸ್ ಠಾಣೆ ವ್ಯಾಪ್ತಿಗೆ, ಆಲಾದಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಪೊಲೀಸ್ ಠಾಣೆಗೆ ಸ್ಥಳಾಂತರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿವಾಹೇತರ ಸಂಬಂಧ ಶಂಕೆ; ವ್ಯಕ್ತಿ ಕೊಲೆ

ಗಡಿಪಾರು ಅವಧಿ ನವಂಬರ್ 6 ರಿಂದ ಜನವರಿ 6 2026 ರವರೆಗೆ ನಿಗದಿಪಡಿಸಲಾಗಿದ್ದು, ಆ ಅವಧಿಯಲ್ಲಿ ಗಡಿಪಾರು ಮಾಡಲ್ಪಟ್ಟವರು ಆಯಾ ಪೊಲೀಸ್ ಠಾಣೆಗಳಿಗೆ ಹಾಜರಾಗಿ ವರದಿ ನೀಡಬೇಕು ಎಂದು ಸೂಚಿಸಲಾಗಿದೆ. ಆಯಾ ಠಾಣಾಧಿಕಾರಿಗಳಿಗೆ ಗಡಿಪಾರು ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾವಹಿಸುವಂತೆ ಹಾಗೂ ಅವರು ರಾಯಚೂರು ಜಿಲ್ಲಾ ವ್ಯಾಪ್ತಿಗೆ ಪ್ರವೇಶಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.




WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...