ರಾಯಚೂರು | ಶ್ರೀ ಬೃಂದಾವನ ಆಹಾರ ಉತ್ಪಾದನೆಗಳ ಘಟಕಕ್ಕೆ ; ಸಂಸದ ಜಿ ಕುಮಾರ ನಾಯಕರಿಂದ ಚಾಲನೆ

Date:

ರಾಯಚೂರು ತಾಲ್ಲೂಕು ಬಿಚ್ಚಾಲಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯೂಥ್ ಮೂವ್ ಮೆಂಟ್ ಆರ್ಥಿಕ ನೆರವು ಹಾಗೂ ಪೇಪಾಲ್ ಪೇಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶ್ರೀ ಬೃಂದಾವನ ಮಹಿಳಾ ಸ್ವಸಹಾಯ ಸಂಘ ಗ್ರಾಮೀಣ ಸಾಮಾಜಿಕ ಉತ್ಪಾದನೆ ಘಟಕಕ್ಕೆ ಸಂಸದ ಜಿ ಕುಮಾರ ನಾಯ್ಕ ಹಾಗೂ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ಉದ್ಘಾಟಿಸಿದರು.

ಈ ವೇಳೆ ಸಂಸದ ಕುಮಾರ ನಾಯ್ಕ ಅವರು ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗಬೇಕು ಇಂತಹ ಸಹಕಾರಿ ಸಂಘಗಳ ಮೂಲಕ ಬದುಕನ್ನು ಕಟ್ಟಿಕೊಂಡು ಗ್ರಾಮೀಣ ಮಟ್ಟದಲ್ಲಿ ಉದ್ಯೋಗಗಳನ್ನು ಸೃಷ್ಟಿ ಮಾಡುವಂತಹ ನಿಮ್ಮ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ಸಹಕಾರ ಸಂಘಗಳಿಗೆ ಸದಾ ನಮ್ಮ ಪ್ರೋತ್ಸಾಹವಿರುತ್ತದೆ ಎಂದು ಹೇಳಿದರು.

ನಂತರ ಮಾತನಾಡಿದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ರವರು ನನ್ನ ಕ್ಷೇತ್ರದಲ್ಲಿ ಇಂತಹ ಸಹಕಾರಿ ಸಂಘ ಸ್ಥಾಪನೆಯಾಗಿತ್ತು ವೈಯಕ್ತಿಕವಾಗಿ ನನಗೆ ತುಂಬಾ ಸಂತಸವಾಗಿದೆ. ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಈ ಸಂಘಗಳಿಗೆ ಕಲ್ಪಿಸಿ ಮುಂದೆ ಇನ್ನೂ ಇಂತಹ ಅನೇಕ ಸಂಸ್ಥೆಗಳನ್ನು ಹೆಚ್ಚಾಗಿ ಸ್ಥಾಪಿಸಿ ಅದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ಸರ್ಕಾರದ ವತಿಯಿಂದ ನಾನು ಸದಾ ಪ್ರಯತ್ನವನ್ನು ಮಾಡುತ್ತೇನೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆರೆಯಲ್ಲಿ ಮುಳುಗಿ ಕುರಿಗಾಹಿ ಸಾವು

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಡಾ. ಡೆನ್ನಿಸ್ ಚೌಹಾಣ್, ಶ್ರೀ ವಿನಾಯಕ್ ಸಂಘದ ಅಧ್ಯಕ್ಷರಾದ ಶ್ರೀಮತಿ ಅಶ್ವಿನಿ ಸೇರಿದಂತೆ ಸ್ವ ಸಹಾಯ ಸಂಘದ ಎಲ್ಲಾ ಸದಸ್ಯರು, ಗ್ರಾಮ ಪಂಚಾಯತಿಯ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...