ರಾಯಚೂರು | ಹೆಣ್ಣು ಮಕ್ಕಳ ಪೂರ್ಣ ಶಿಕ್ಷಣ, ದೇಶದ ರಕ್ಷಣೆ; ಕ್ರೈ ಸಂಸ್ಥೆಯ ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ

Date:

ಮೊದಲಿಗೆ ಮನೆ ಮನೆಗೆ ಭೆಟಿ ಮಾಡಿ ಮನೆಯಲ್ಲಿರುವ ಹೆಣ್ಣು ಮಗು ಕಡ್ಡಾಯವಾಗಿ ವೃತ್ತಿಪರ ಕೋರ್ಸ್ ಶಿಕ್ಷಣವನ್ನು ಪಡೆಯಬೇಕೆಂದು ಮನೆ ಬೇಟಿ ಮುಖಾಂತರ ತಿಳಿಸಲಾಯಿತು. ಮಕ್ಕಳೊಂದಿಗೆ ಓಣಿಗಳಿಗೆ ಹೋಗಿ ಜಾಥಾಗಳೊಂದಿಗೆ ಹಿಂದಿನ ದಿನ ಭಾರತೀಯ ಹೆಣ್ಣು ಮಕ್ಕಳು ಸಬಲೀಕರಣ ಆಗಬೇಕೆಂದರೆ, ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಗಾಗಿ ಬಾಲಕಿಯರ ಶಿಕ್ಷಣದ ಮಹತ್ವವನ್ನು ಉತ್ತೇಜಿಸುವ ಮೂಲಕ ಲಿಂಗ ಅಸಮಾನತೆಗಳನ್ನು ಪರಿಹರಿಸಲು ಉದ್ದೇಶಿಸಿದೆ. ಕಾರ್ಯಕ್ರಮವನ್ನು ಉದ್ಘಾಟನೆಯ ಮುಖಾಂತರ ಕೆ ಪಿ ಅನಿಲ್ ಕುಮಾರ್ ಪ್ರಾರಂಭಿಸಿದರು.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮುಷ್ಠೂರು ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ “ಹೆಣ್ಣು ಮಕ್ಕಳ ಪೂರ್ಣ ಶಿಕ್ಷಣ” ದೇಶದ ರಕ್ಷಣೆ ಎಂಬ ಕ್ರೈ ಸಂಸ್ಥೆಯು ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

“ದೇಶಾದ್ಯಂತ ಲಕ್ಷಾಂತರ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಜತೆಗೆ ಹೆಣ್ಣು ಮಕ್ಕಳು ಪ್ರೌಢಶಾಲೆ ಮತ್ತು ಪದವಿ ಪೂರ್ವ ಆದಂತಹದವರಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಮಕ್ಕಳ ಹಕ್ಕುಗಳ ಪ್ರಮುಖ ಸಂಸ್ಥೆಯಾಗಿರುವ ಕ್ರೈ- ಚೈಲ್ಡ್ ರೈಟ್ಸ್ ಅಂಡ್ ಯು(CRY) ವಿಶೇಷವಾದ 7 ವಾರಗಳ ರಾಷ್ಟ್ರೀಯ ಅಭಿಯಾನವನ್ನು ಹೆಣ್ಣು ಮಕ್ಕಳ ಪೂರ್ವ ಶಿಕ್ಷಣ ದೇಶದ ರಕ್ಷಣೆ ಎಂಬ ರಾಷ್ಟ್ರೀಯ ಜಾಗೃತಿ ಅಭಿಯಾನವನ್ನು ದೇಶದ 20 ರಾಜ್ಯಗಳಲ್ಲಿ ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಹೆಣ್ಣು ಮಕ್ಕಳ ಸಾಮಾಜಿಕ ವ್ಯವಸ್ಥೆಯನ್ನು ಬದಲಾಯಿಸುವ ಪ್ರತಿ ಹೆಣ್ಣು ಮಗುವನ್ನು ಪ್ರೌಢಶಾಲೆಗೆ, ಕಾಲೇಜಿಗೆ ಕಳುಹಿಸಿ ವ್ಯಾಸಂಗ ಮುಂದುವರೆಸಬೇಕೆಂಬುದು ಅಭಿಯಾನದ ಉದ್ದೇಶ” ಎಂದು ಕ್ರೈ ಸಂಸ್ಥೆಯ ಕೆ ಪಿ ಅನಿಲ್ ಕುಮಾರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಅಭಿಯಾನದ ಭಾಗವಾಗಿ ಜಿಲ್ಲೆಯ 120 ಗ್ರಾಮಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣದ ಜಾಗೃತಿ ಕುರಿತು ಜಾಥಾಗಳನ್ನು ಹಮ್ಮಿಕೊಳ್ಳುವುದು ಎಸ್‌ಡಿಎಂಸಿ ಸಮಿತಿಗಳ ಜತೆಗೆ ಸಂವಹನ ನಡೆಸುವುದು ಮತ್ತು ಸಮುದಾಯಕ್ಕೆ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಮಹತ್ವದ ಕುರಿತು, ಬೀದಿನಾಟಕ ಮೂಲಕ ಜಾಗೃತಿ ಮೂಡಿಸುವುದು ಸೇರಿದಂತೆ ಇತ್ಯಾದಿ ಕಾರ್ಯಕ್ರಮಗಳನ್ನು 7 ವಾರಗಳ ಕಾಲ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ” ಎಂದು ಹೇಳಿದರು.

“ಪ್ರತಿ ಹೆಣ್ಣು ಮಗುವನ್ನು ಶಾಲೆಗಳು ಮತ್ತು ಕಾಲೇಜುಗಳಿಗೆ ತರಲು ಸಂಘಟಿತ ಪ್ರಯತ್ನಗಳನ್ನು ಮಾಡುತ್ತದೆ. ಇದರಿಂದಾಗಿ ಅವರು ಉನ್ನತ ಮಾಧ್ಯಮಿಕ ಶಿಕ್ಷಣವನ್ನು ಪೂರ್ಣಗೊಳಿಸಬಹುದು. ಕರ್ನಾಟಕದಲ್ಲಿ ಬೆಂಗಳೂರು, ರಾಯಚೂರು, ಗುಲ್ಬರ್ಗ, ಬೆಳಗಾವಿ ಮತ್ತು ಕೋಲಾರ ಸೇರಿದಂತೆ ಐದು ಜಿಲ್ಲೆಗಳಲ್ಲಿ ಭಾರತದ 20 ರಾಜ್ಯಗಳಲ್ಲಿ ಅದರ ಮಧ್ಯಸ್ಥಿಕೆ ಯೋಜನೆಗಳಲ್ಲಿ ಅಭಿಯಾನವು ಸೋಮವಾದಿಂದ ಪ್ರಾರಂಭವಾಗಿದೆ” ಎಂದು ತಿಳಿಸಿದರು.

“2009ರ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು ಕಾಯ್ದೆಯನ್ನು 14ವರ್ಷದೊಳಗಿನ ಭಾರತೀಯ ಮಕ್ಕಳಿಗೆ ಸಾರ್ವತ್ರಿಕ ಶಿಕ್ಷಣವನ್ನು ಒದಗಿಸಲು ಸ್ಥಾಪಿಸಲಾಯಿತು. ಈ ಹೆಗ್ಗುರುತು ಕಾಯ್ದೆಯನ್ನು ತನ್ನ 15ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ ಅನೇಕ ಮಕ್ಕಳು ವಿಶೇಷವಾಗಿ ಹುಡುಗಿಯರು ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಶಿಕ್ಷಣವನ್ನು ಪಡೆಯಲು ಇನ್ನೂ ಗಮನಾರ್ಹ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ” ಎಂದರು.

“2030ರ ವೇಳೆಗೆ ಸಮಾನ ಶಿಕ್ಷಣಕ್ಕಾಗಿ ಸುಸ್ಥಿರ ಅಭಿವೃದ್ಧಿ ಗುರಿಗಳು ಅನುಗುಣವಾಗಿ 18 ವರ್ಷದವರೆಗೆ ಸಾರ್ವತ್ರಿಕ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ವಿಸ್ತರಿಸುವ ಗುರಿಯನ್ನು ಶಿಕ್ಷಣ ನೀತಿ ಹೊಂದಿದೆ. ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ ಸಭೆ ಮಾಡಲಾಯಿತು. ಸಮುದಾಯ-ಜನರ ನಡುವೆ ಕಾರ್ಯಕ್ರಮ ಉದ್ದೇಶವನ್ನು ತಿಳಿಸಲಾಗುವುದು”ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನಕ್ಷತ್ರ ಆಮೆಗಳ ಬೇಟೆಯಾಡುತ್ತಿದ್ದ ಆರೋಪಿಗಳ ಬಂಧನ

ಈ ಸಂದರ್ಭದಲ್ಲಿ ಭಾಗವಹಿಸಿದ ಕ್ರೈ ಪ್ರೊಗ್ರಾಮ್ ಇಂಪ್ಲಿಮೆಂಟೇಷನ್ ಸದಸ್ಯ ನರಸಪ್ಪ ಡಿಂಗ್ರಿ, ತಾಯಪ್ಪ, ಹೆಗಸನಹಳ್ಳಿ ಶಾಲೆಯ ಪ್ರೌಢ ಶಾಲೆಯ ಮುಖ್ಯ ಉಪಾಧ್ಯಾಯ ಅಮಿತ್, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ರಾಮಣ್ಣ ಎನ್ ಗಣೇಕಲ್, ಶೋಭಾ ಮಲ್ಲೇಶ್, ಶರಣಬಸವ, ಶಶಿಕಲಾ, ಅಮರಮ್ಮ, ಲಲಿತಾ, ಸಂಜುಮೂರ್ತಿ, ಈರಮ್ಮ, ಮಲ್ಲಯ್ಯ, ಖಾನಾಪುರ ಸಂಪನ್ಮೂಲ ಕೇಂದ್ರದ ಎಲ್ಲ ಶಿಕ್ಷಕಿಯರು ಹಾಗೂ ಮಕ್ಕಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...