ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ; ನಾಲ್ಕು ದಶಕಗಳ ಸಮಸ್ಯೆಗೆ ಪರಿಹಾರ ಯಾವಾಗ?

Date:

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಮೂಲಸೌಕರ್ಯಗಳಿಲ್ಲದಿರುವ ಪರಿಸ್ಥಿತಿ ಇದೆ. ಕೆಲವೆಡೆ ಸತ್ತಾಗ ಹೂಳೋಕೆ ಸ್ಮಶಾನವೂ ಇಲ್ಲದೆ ಮನೆಯ ಮುಂದೆಯೇ ಅಂತಿಮ ಸಂಸ್ಕಾರ ಮಾಡಿಕೊಳ್ಳಬೇಕಾಗ ದುಸ್ಥಿತಿ ಇದೆ. ಇದು ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ರಂಗಾಪುರ ಗ್ರಾಮದ ಚಿತ್ರಣ. ಸ್ಮಶಾನ ವ್ಯವಸ್ಥೆಯಿಲ್ಲದೆ ಗ್ರಾಮಸ್ಥರು ಇಂದಿಗೂ ತಮ್ಮ ತಮ್ಮ ಮನೆಯ ಮುಂಭಾಗದಲ್ಲೇ ಅಂತ್ಯಕ್ರಿಯೆ ನೆರವೇಸಿಕೊಳ್ಳುತ್ತಾರೆ.

ನಿಗದಿತ ಸ್ಥಳವಿಲ್ಲದೆ ಮನೆಗಳ ಅಂಗಳದಲ್ಲೋ, ಕೃಷಿ ಜಮೀನಿನ ಅಂಚಿನಲ್ಲೋ ಅಂತ್ಯಕ್ರಿಯೆ ನೆರವೇರಿಸಿಕೊಂಡು ಬರುತ್ತಿರುವ ಪದ್ಧತಿ ಇಂದು ನಿನ್ನೆಯದಲ್ಲ. ಕಳೆದ ನಾಲ್ಕೈದು ದಶಕಗಳಿಂದಲೂ ಈ ಸಮಸ್ಯೆ ಇದ್ದು, ಇಂದಿಗೂ ಮುಂದುವರೆದಿರುವುದು ಅಲ್ಲಿನ ಗ್ರಾಮಸ್ಥರ ಅಸಹನೆ ಬಹುಮುಖ್ಯ ಕಾರಣವಾಗಿದೆ. ಎಲ್ಲೆಂದರಲ್ಲಿ ಅಂತ್ಯ ಸಂಸ್ಕಾರ ಮಾಡುವುದು ಆರೋಗ್ಯದ ಜೊತೆಗೆ ಅಲ್ಲಿನ ಪರಿಸರ ಮಾಲಿನ್ಯಕ್ಕೂ ಕಾರಣವಾಗುತ್ತಿದೆ. ಇದರಿಂದ ಮುಕ್ತಿ ಪಡೆಯಲು ಇನ್ನೂ ಎಷ್ಟು ವರ್ಷ ಕಾಯಬೇಕು ಎಂಬುದು ಅಲ್ಲಿನ ಅಮಾಯಕ ಜನರ ನ್ಯಾಯಬದ್ಧ ಪ್ರಶ್ನೆ.

ಮೃತರ ಅಂತ್ಯಸಂಸ್ಕಾರವನ್ನು ಮನೆಯ ಅಂಗಳದಲ್ಲೇ ಮಾಡುವುದರಿಂದ ಚಿಕ್ಕ ಮಕ್ಕಳ ಮನಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅವರಲ್ಲಿ ಭಯ, ಮೌಢ್ಯದಂತಹ ಬೇಡದ ಯೋಚನೆಗಳನ್ನು ತುಂಬಿ, ಅವರ ಮಾನಸಿಕ ಬೆಳವಣಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹಲವು ಬಾರಿ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದರೂ, ಮರಳಿ ಆಶ್ವಾಸನೆಯನ್ನು ಮಾತ್ರ ಪಡೆಯುತ್ತಿದ್ದೇವೆ. “ಭೂಮಿ ತೋರಿಸಿ ಕೊಡೋಣ” ಎನ್ನುತ್ತಾರಷ್ಟೇ, ವರ್ಷಗಳಾದರೂ ಆ ಆಶ್ವಾಸನೆ ಕಾರ್ಯರೂಪಕ್ಕೆ ಬರುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಗ್ರಾಮದ ನಿವಾಸಿ ಖಾಜಾಬಾನು ಮಾತನಾಡಿ, “ಸ್ಮಶಾನದ ಅಭಾವದಿಂದಾಗಿ ಮನೆಯ ಮುಂದೆಯೇ ಅಂತ್ಯಕ್ರಿಯೆಗಳು ನಡೆಯುತ್ತಿವೆ. ದಶಕಗಳಿಂದಲೂ ಮುಂದುವರೆದಿರುವ ಈ ದುರಾವಸ್ಥೆಯು ಸ್ಥಳೀಯರ ಜೀವನವನ್ನು ತೀವ್ರವಾಗಿ ಪ್ರಭಾವಿಸಿದ್ದು, ಇದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ದಶಕದಿಂದಲೂ ಸ್ಮಶಾನ ಭೂಮಿಯನ್ನು ನಿರ್ಮಾಣ ಮಾಡುವ ಭರವಸೆ ನೀಡಿದರೂ, ಇಂದಿಗೂ ಯಾವುದೇ ಪ್ರಗತಿ ಕಂಡಿಲ್ಲ. ಇದರಿಂದಾಗಿ, ಮರಣಿಸಿದವರ ಶವಗಳನ್ನು ಮನೆಯ ಮುಂದಿನ ರಸ್ತೆಯಲ್ಲಿ ಅಥವಾ ಖಾಲಿ ಜಾಗದಲ್ಲಿ ದಹಿಸುವುದು ನಮಗೆಲ್ಲರಿಗೂ ಕಷ್ಟವಾಗಿದೆ. ಅಲ್ಲದೆ ಇದು ನಮ್ಮ ಧರ್ಮಕ್ಕೂ ವಿರುದ್ಧ, ಆರೋಗ್ಯಕ್ಕೂ ಧಕ್ಕೆ ತರುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯ ಮುಸ್ಲಿಂ ಮುಖಂಡ ಅಮ್ಜದ್ ಮಾತನಾಡಿ, “ಗ್ರಾಮದಲ್ಲಿ 30 ಕ್ಕೂ ಹೆಚ್ಚು ಕುಟುಂಬಗಳಿವೆ. ಕಳೆದ ಐದು ವರ್ಷಗಳಲ್ಲಿ 20 ಕ್ಕೂ ಹೆಚ್ಚು ಅಂತ್ಯಕ್ರಿಯೆಗಳು ಮನೆಯ ಮುಂದೆ ನಡೆದಿವೆ ಎಂದು ಸ್ಥಳೀಯ ಪಂಚಾಯಿತಿ ದಾಖಲೆಗಳು ತೋರುತ್ತವೆ. ಈ ಸಮಸ್ಯೆಯು ಮಾತ್ರವಲ್ಲ, ಸಾಂಸ್ಕೃತಿಕವಾಗಿ ಸೂಕ್ಷ್ಮವಾಗಿದ್ದು, ಹೆಣ್ಣು ಮಕ್ಕಳು ಮತ್ತು ವಯೋವೃದ್ಧರಿಗೆ ತೊಂದರೆಯಾಗಿದೆ. ಮಳೆಗಾಲದಲ್ಲಿ ಇದ್ದರೆ ಶವವನ್ನು ದಹಿಸುವುದು ಕಷ್ಟ. ಸ್ಥಳೀಯರಲ್ಲಿ ಭಯ ಮತ್ತು ಅನಾರೋಗ್ಯ ಹೆಚ್ಚಾಗುತ್ತಿದೆ. ಈ ದುರಾವಸ್ಥೆ ದಶಕಗಳಿಂದ ಮುಂದುವರಿದಿದ್ದು, ಸ್ಮಶಾನ ಭೂಮಿ ಒದಗಿಸದಿದ್ದರೆ ಚಳವಳಿ ಆರಂಭಿಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮ ಊರಿಗೆ ಸ್ಮಶಾನವೇ ಇಲ್ಲ. ಬದುಕಿದರೂ ಸತ್ತಂತೆ ಆಗಿದೆ. ಮನೆಗೆ ಯಾರೂ ಬರೋದಿಲ್ಲ, ನಾವು ಯಾರ ಮನೆಗೂ ಹೋಗೋದಿಲ್ಲ. ಸ್ಮಶಾನದ ಕೊರತೆಯಿಂದಾಗಿ ಗ್ರಾಮದಲ್ಲಿ ಮನೆಯ ಮುಂದೆಯೇ ಅಂತ್ಯಕ್ರಿಯೆ ನಡೆಸುವ ದುರಾವಸ್ಥೆ ಇದೆ. ಇಲ್ಲಿನ ಮಹಿಳೆಯರ ಜೀವನವನ್ನು ತೀವ್ರವಾಗಿ ಪ್ರಭಾವಿಸಿದೆ. ತಮ್ಮ ಕುಟುಂಬದ ದುಃಖವನ್ನು ಹಂಚಿಕೊಳ್ಳುತ್ತಾ, ನಮ್ಮ ತಂದೆಯ ಅಂತ್ಯಕ್ರಿಯೆಯನ್ನು ಮನೆಯ ರಸ್ತೆಯಲ್ಲೇ ಮಾಡಬೇಕಾಯಿತು. ಮಕ್ಕಳ ಮುಂದೆ, ಇಡೀ ಊರಿನವರ ಕಣ್ಣ ಮುಂದೆ ಇದನ್ನು ಮಾಡುವಾಗ ಎಷ್ಟು ನಾಚಿಕೆ, ದುಃಖ ಆಗಿತ್ತು ಹೇಳಲಾಗದು” ಎಂದು ಕಣ್ಣೀರಿಟ್ಟರು.

ಗ್ರಾಮದ ಇತರ ಮಹಿಳೆಯರೂ ಇದೇ ಗೋಳನ್ನು ಹೇಳುತ್ತಾರೆ. ಸಾಮಾಜಿಕ ಕಾರ್ಯಕ್ರಮಗಳಿಗೆ ಯಾರೂ ನಮ್ಮ ಮನೆಗೆ ಬರೋದಿಲ್ಲ. ನಮ್ಮ ಮಕ್ಕಳಿಗೆ ಮದುವೆ ಸಂಬಂಧ ಕಷ್ಟವಾಗುತ್ತಿದೆ. ಈ ದುರವಸ್ಥೆಯಿಂದಾಗಿ ಸಮಾಜದಿಂದ ಬೇರ್ಪಟ್ಟಂತಾಗಿದೆ ಗ್ರಾಮದಲ್ಲಿ ಸ್ಮಶಾನಕ್ಕಾಗಿ ದಶಕಗಳಿಂದ ಕಾಯುತ್ತಿರುವ ಜನರಿಗೆ, ಈ ಸಮಸ್ಯೆ ಕೇವಲ ಆರೋಗ್ಯದ ದೃಷ್ಟಿಯಿಂದಲ್ಲ, ಸಾಮಾಜಿಕ ಮತ್ತು ಭಾವನಾತ್ಮಕವಾಗಿಯೂ ಗಾಯವಾಗಿದೆ. ನಾವು ಪಂಚಾಯಿತಿಗೆ, ತಹಶೀಲ್ದಾರ್ ಕಚೇರಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ ಯಾವುದೇ ಕ್ರಮವಿಲ್ಲ. ಇದೀಗ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲು ತೀರ್ಮಾನಿಸಿದ್ದೇವೆ. ರಾಜ್ಯದ ಹಲವು ಗ್ರಾಮೀಣ ಭಾಗಗಳಲ್ಲಿ ಇಂತಹ ದುರಾವಸ್ಥೆ ಕಂಡುಬರುತ್ತಿದೆ. “ಸರ್ಕಾರ ಗ್ರಾಮೀಣ ಜನರಿಗೆ ಮೂಲ ಸೌಕರ್ಯ ಕೊಡದಿದ್ದರೆ, ನಾವು ಯಾವ ಗೌರವದಿಂದ ಬದುಕಬೇಕು? ಈ ಗೋಳು, ಸರ್ಕಾರದ ಗಮನಕ್ಕೆ ಬಂದು ಪರಿಹಾರ ಸಿಕ್ಕರೆ ಅಷ್ಟೇ ಸಾಕು” ಎಂದರು.

ಇದನ್ನೂ ಓದಿ: ರಾಯಚೂರು | ಒಂದೇ ಮನೆಗೆ ಮೂರು ಬಾರಿ ಜಿಪಿಎಸ್ : ರೈತ ಸಂಘಟನೆಯಿಂದ ಪ್ರತಿಭಟನೆ

ಸ್ಥಳೀಯ ನಿವಾಸಿ ವಿರುಪಮಾ ಮಾತನಾಡಿ, “ಸುಮಾರು 40 ವರ್ಷಗಳಿಂದ ಅವರವರ ಮನೆಯ ಮುಂದೇನೆ ಅಂತ್ಯಕ್ರಿಯೆ ಮಾಡುತ್ತಾ ಬಂದಿದ್ದಾರೆ. ಇಂತಹ ದುರಾವಸ್ಥೆಯು ರಾಜಕೀಯ ನಾಯಕರಿಗೆ ಹಾಗೂ ಅಧಿಕಾರಿಗಳಿಗೆ ಕಾಣಿಸುತ್ತಿಲ್ಲವೇ? ಜನಪ್ರತಿನಿಧಿಗಳು ಅವರ ಮನೆಯ ಮುಂದೆ ಶವವನ್ನು ಹೂಳಲಿ ಪ್ರಭಾವ ಏನು ಬೀಳುತ್ತೆ ಎಂದು ಗೊತ್ತಾಗುತ್ತೆ. ಮುಂದೆ ಗ್ರಾಮದಲ್ಲಿ ಸಾವಾದರೆ ತಹಶೀಲ್ದಾರ್ ಕಚೇರಿ ಮುಂದೆ ಶವವನಿಟ್ಟು ಪ್ರತಿಭಟನೆ ಮಾಡಲಾಗುವುದು ಇಲ್ಲದಿದ್ದರೆ ಕಚೇರಿ ಅಂಗಳದಲ್ಲಿ ಅಂತ್ಯಕ್ರಿಯೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...