ರಾಯಚೂರು | ಉತ್ತರ ಕರ್ನಾಟಕದ ಭಾಗದಲ್ಲಿ ಗಮಕ ಕಾವ್ಯವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು: ಡಾ ಎ ವಿ ಪ್ರಸನ್ನ

Date:

ಉತ್ತರ ಕರ್ನಾಟಕದ ಭಾಗದಲ್ಲಿ ಹುಟ್ಟಿಕೊಂಡಿದ್ದ ಗಮಕ ಕಾವ್ಯ ಇಂದು ದಕ್ಷಿಣ ಕರ್ನಾಟಕದಲ್ಲಿ ಬೆಳೆಯುತ್ತಿದೆ. ಈ ಭಾಗದಲ್ಲಿಯೇ ಪಂಪ, ಕುಮಾರವ್ಯಾಸರು ಕಾವ್ಯ ರಚನೆ ಮಾಡಿದ್ದು, ಈ ಭಾಗದಲ್ಲಿ ಗಮಕ ಕಾವ್ಯ ಬೆಳಕಿಗೆ ಬರುತ್ತಿಲ್ಲ. ಹಾಗಾಗಿ ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಮಕ ಕಾವ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕರ್ನಾಟಕ ಗಮಕ ಕಲಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ ಎ ವಿ ಪ್ರಸನ್ನ ಹೇಳಿದರು.

ರಾಯಚೂರು ನಗರದ ಕರ್ನಾಟಕ ಸಂಘದಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು ಮತ್ತು ಜಿಲ್ಲಾ ಘಟಕ ಸಂಯುಕ್ತ ಆಶ್ರಯದಲ್ಲಿ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಗಮಕವನ್ನು ಹಿಂದಿನಿಂದಲೂ ಕಟ್ಟಿ ಬೆಳೆಸಿ ಉಳಿಸಿಕೊಂಡು ಬರಲಾಗುತ್ತಿದೆ. ಗಮಕ ಕಾವ್ಯವನ್ನು ಎತ್ತರಕ್ಕೆ ಬೆಳೆಸುವ ಕೆಲಸ ನಿರಂತರವಾಗಿ ಬೆಳೆಯಬೇಕಿದೆ. ಆದರೆ ಇಂದು ಗಮಕವನ್ನು ಯಾರು ಕೇಳುತ್ತಿದ್ದಾರೆಂದು ಪ್ರಶ್ನೆ ಮಾಡುತ್ತಿದ್ದಾರೆ. ಈ ಭಾಗದ ಕವಿಗಳಾದ ಪಂಪ, ಕುಮಾರವ್ಯಾಸರಿಂದ ಹುಟ್ಟಿಕೊಂಡಿದ್ದ ಗಮಕವನ್ನು ದಕ್ಷಿಣ ಕರ್ನಾಟಕ ಭಾಗದಲ್ಲಿ ಪ್ರತಿದಿನ ಕುಮಾರವ್ಯಾಸರ ಕುರಿತು ಉಪನ್ಯಾಸ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮ ನಡೆಸಲಾಗುತ್ತಿದೆ. ಆದರೆ ಈ ಭಾಗದಲ್ಲಿ ಮಾತ್ರ ಗಮಕ ಹೆಸರಿಗೆ ಎಂಬುದಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿಗಳು, ಸರಸ್ವತಿ ಸಮ್ಮಾನ್ ಪ್ರಶಸ್ತಿಗಳು ಲಭಿಸಿವೆ. ಪಂಪ, ಕುಮಾರವ್ಯಾಸರ ಕಾಲದಲ್ಲಿ ಪ್ರಶಸ್ತಿಗಳು ಇದ್ದಿದ್ದರೆ ಅವರಿಗೆ ಲಭಿಸುತ್ತಿದ್ದವು. ಹಾಗಾಗಿ ಈಗಿನ ಈ ಪ್ರಶಸ್ತಿಗಳು ಅವರಿಗೆ ಸಲ್ಲುತ್ತವೆ. ಈ ಭಾಗದಲ್ಲಿ ಅನೇಕ ದಾಳಿ ನಡೆದ ಸಂದರ್ಭದಲ್ಲಿಯೂ ತಾಳೆಗರಿಗಳ ಗ್ರಂಥಗಳನ್ನು ಕಾಪಾಡಿಕೊಂಡು ಬಂದಿದೆ. ಗಮಕವನ್ನು ಉಳಿಸಿ ಬೆಳೆಸಬೇಕಾಗಿದೆ” ಎಂದರು.

“ಗಮಕವನ್ನು ಉಳಿಸಿ ಬೆಳೆಸುವ ಕೆಲಸ ಸರ್ಕಾರ ಮತ್ತು ವಿಶ್ವ ವಿದ್ಯಾಲಯಗಳು ಮಾಡಬೇಕು. ಆದರೆ, ಕೆಲಸ ಮಾಡುತ್ತಿಲ್ಲ. ನಾವು ನೀವೆಲ್ಲರೂ ಉಳಿಸಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪೆಟ್ರೋಲ್ ಡಿಸೇಲ್ ದರ ಹೆಚ್ಚಳ; ದರ ಇಳಿಕೆಗೆ ಡಿವೈಎಫ್‌ಐ ಆಗ್ರಹ

ಈ ಸಂದರ್ಭದಲ್ಲಿ ದಾಸ ಸಾಹಿತ್ಯ ವಿದ್ವಾಂಸರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಡಾ ಜಯಲಕ್ಷ್ಮಿ ಮಂಗಳಮೂರ್ತಿ, ಅಂತರಾಷ್ಟ್ರೀಯ ಕ್ಲಾರಿಯೋನೆಟ್ ವಾದಕ ಡಾ. ನರಸಿಂಹಲು ವಡವಾಟಿ, ಕನ್ನಡ ಸಂಘದ ಅಧ್ಯಕ್ಷ ಪಲಗುಲು ನಾಗರಾಜ, ಗಮಕ ಕಲಾ ಪರಿಷತ್ ಕಾರ್ಯದರ್ಶಿ ದಕ್ಷಿಣ ಮೂರ್ತಿ, ಹೊಸಪೇಟೆ ಗಮಕ ಕಲಾ ಜಿಲ್ಲಾ‌ಧ್ಯಕ್ಷ ಪಲ್ಲವಿ ಭಟ್, ಅರುಣಾ ಹಿರೇಮಠ, ವೆಂಕಟೇಶ ನವಲಿ, ಸಾಹಿತಿ ವೀರ ಹನುಮಾನ್, ಪ್ರಾಣೇಶ ಕುಲಕರ್ಣಿ ವಿಜತರಾಜೇಂದ್ರ, ಕೊಪ್ರೇಶ ದೇಸಾಯಿ, ಮಂಜುನಾಥ, ಗಾಯತ್ರಿ ಸಲವಾಡಿ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫಿಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...